Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದ್ವೇಷವನ್ನು ಬಿತ್ತಿದರೆ ಮಕ್ಕಳು,...

ದ್ವೇಷವನ್ನು ಬಿತ್ತಿದರೆ ಮಕ್ಕಳು, ಮಹಿಳೆಯರು ಬಲಿಯಾಗುತ್ತಾರೆ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ11 Dec 2023 11:11 PM IST
share
ದ್ವೇಷವನ್ನು ಬಿತ್ತಿದರೆ ಮಕ್ಕಳು, ಮಹಿಳೆಯರು ಬಲಿಯಾಗುತ್ತಾರೆ: ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು, ಡಿ.11: ದ್ವೇಷದ ರಾಜಕಾರಣ ಮತ್ತು ತಮ್ಮದೇ ಅಜೆಂಡಾಗಳ ಮೂಲಕ ದೇಶವನ್ನು ಆಳಲಾಗುತ್ತಿದೆ. ಈ ರೀತಿ ರಾಜ್ಯ ರಾಜ್ಯಗಳ ನಡುವೆ ದ್ವೇಷವನ್ನು ಬಿತ್ತಿದರೆ ಮಕ್ಕಳು ಮತ್ತು ಮಹಿಳೆಯರು ಬಲಿಯಾಗುತ್ತಾರೆ ಎಂದು ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ಪುರಭವನದಲ್ಲಿ ಐಸಿಡಿಎಸ್, ಎಂಡಿಎಂ, ಎನ್‍ಎಂಎಂ, ಐಸಿಪಿಎಸ್, ಎನ್‍ಆರ್ ಎಲ್‍ಎಂ, ಪೋಷಣ್ ಅಭಿಯಾನ ನರೇಗಾ ಯೋಜನೆಗಳಲ್ಲಿರುವ ನೌಕರರ ಸಂಘಟನೆಗಳು ಆಯೋಜಿಸಿದ್ದ ‘ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಕೇಂದ್ರ ಪುರಸ್ಕೃತ ಯೋಜನೆಗಳು-ನೌಕರರ ಸ್ಥಿತಿಗತಿಗಳು’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ಅವನತಿ ಕಡೆಗೆ ಹೆಜ್ಜೆ ಇಡುತ್ತಿರುವುದನ್ನು ನೋಡುತ್ತಿದ್ದೇವೆ. ದೇಶ ಮತ್ತು ಜನ ದೊಡ್ಡವರು ಎಂಬ ಅರಿವು ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳಲ್ಲಿ ಇರಬೇಕು. ದುರಾದೃಷ್ಟವಶಾತ್ ಕೇಂದ್ರ ಸರಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿದ್ದು, ಈ ದ್ವೇಷ ರಾಜಕಾರಣಕ್ಕೆ ಮಕ್ಕಳು ಮತ್ತು ಮಹಿಳೆಯರು ಬಲಿಯಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ನಮ್ಮ ದೇಶ ಅಸಮಾನತೆಯ ಆಗರದಿಂದ ಕೂಡಿದೆ. ಹೀಗಾಗಿ ಪಂಚವಾರ್ಷಿಕ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸಗಳಾದವು. ವಿರೋಧ ಪಕ್ಷಗಳು ಇದಕ್ಕೆ ಪೂರಕವಾಗಿದ್ದವು. ಆಳುವ ಪಕ್ಷಗಳ ತಪ್ಪು ಹೆಜ್ಜೆಗಳನ್ನು ಖಂಡಿಸುತ್ತಲೇ, ತಿದ್ದುವ ಕೆಲಸವನ್ನು ಮಾಡುತ್ತಿದ್ದರು. ಲೋಹಿಯಾ ಅಂಥವರು ಆರೋಗ್ಯಕರವಾಗಿ ಚರ್ಚೆಗಳನ್ನು ನಡೆಸುತ್ತಿದ್ದರು. ಒಳ್ಳೆಯ ಸಂಗತಿಗಳ ಬೆಳವಣಿಗೆಗೆ ಸಹಕರಿಸುತ್ತಿದ್ದರು. ಉಚಿತ ಶಿಕ್ಷಣ, ಕಡ್ಡಾಯ ಶಿಕ್ಷಣ ನೀಡಲಾಯಿತು. ಇಂದು ನಮ್ಮ ಶಿಕ್ಷಣ, ಆರೋಗ್ಯ ಕ್ಷೇತ್ರಗಳು ದ್ವೇಷ ರಾಜಕಾರಣಕ್ಕೆ ಬಲಿಯಾಗಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ವಿಚಾರ ಸಂಕಿರಣದಲ್ಲಿ ಸಿಐಟಿಯು ರಾಜ್ಯಾಧ್ಯಕ್ಷೆ ಎಸ್. ವರಲಕ್ಷ್ಮೀ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಸುನಂದ, ಸೇರಿದಂತೆ ಸಾವಿರಾರು ಪ್ರತಿನಿಧಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X