Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆ...

ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆ ಹೆಚ್ಚು, ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ9 Dec 2023 6:42 PM IST
share
ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆ ಹೆಚ್ಚು, ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.9: ಹಣವನ್ನು ಪೆಟ್ಟಿಗೆಯಲ್ಲಿ ಕೂಡಿಟ್ಟರೆ ಐಟಿ ದಾಳಿ ಸೇರಿದಂತೆ ನಾನಾ ತೊಂದರೆಗಳು ಬರುತ್ತವೆ. ಅದೇ ರೀತಿ ರಕ್ತವನ್ನು ದೇಹದಲ್ಲಿ ಕೂಡಿಟ್ಟರೂ ತೊಂದರೆ. ಹೀಗಾಗಿ ಎರಡನ್ನೂ ಆಗಾಗ್ಗೆ ದಾನ ಮಾಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಎಚ್‍ಡಿಎಫ್‍ಸಿ ಬ್ಯಾಂಕ್ ಶಾಖೆ ವತಿಯಿಂದ ಏರ್ಪಡಿಸಿದ್ದ 15ನೇ ವರ್ಷದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಣಕೊಟ್ಟು ಜೀವಪಡೆಯಲು ಆಗುವುದಿಲ್ಲ. ಆದ ಕಾರಣ ಜೀವ ಉಳಿಸುವ ರಕ್ತವನ್ನು ಸ್ವಯಂಪ್ರೇರಿತರಾಗಿ ದಾನ ಮಾಡಬೇಕು. ದೇಹದಲ್ಲಿ ರಕ್ತ ಕೂಡಿಟ್ಟುಕೊಂಡರೆ ಮಧುಮೇಹ, ಹೃದಯಾಘಾತ ಸೇರಿದಂತೆ ಅನೇಕ ರೋಗಗಳು ಬರುತ್ತವೆ ಎಂದರು.

ಬಡ ರೋಗಗಳಿಗೆ, ಅವಶ್ಯಕತೆ ಇರುವವರಿಗೆ ರಕ್ತದಾನ ಮಾಡುವ ಮೂಲಕ ಅವರ ಆರೋಗ್ಯಕ್ಕೆ ನೆರವಾಗಬೇಕು, ರಕ್ತ ಮತ್ತು ಹಣ ಎರಡೂ ಸಮಾಜದಲ್ಲಿ ಸಮಪ್ರಮಾಣದಲ್ಲಿ ಬಳಕೆಯಾಗಬೇಕು. ಆಗ ಮಾತ್ರ ನಮ್ಮ ಸಮಾಜ ಆರೋಗ್ಯವಾಗಿರುತ್ತದೆ. ಬ್ಯಾಂಕಿನವರು ಸಹ ಹಣವನ್ನು ಕೂಡಿಟ್ಟುಕೊಳ್ಳದೆ, ಜನರ ನಡುವೆ ಹಂಚಬೇಕು. ಹಣದ ಹರಿವು ಹೆಚ್ಚಾದಷ್ಟು ಲಾಭ, ಇಲ್ಲದಿದ್ದರೆ ತೊಂದರೆಗಳು ಬರುತ್ತವೆ ಎಂದು ಅವರು ನುಡಿದರು.

ಕೋವಿಡ್ ಸಂದರ್ಭದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಯುವ ಸಮೂಹ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಶಿಬಿರದಲ್ಲಿ ರಕ್ತದಾನ ಮಾಡಿದ್ದರು. ನನ್ನ ಮನೆಯಲ್ಲಿ ಇರುವ ಒಂದು ಪೊಟೊ ಗಮನಿಸಬಹುದು 40 ವರ್ಷಗಳ ಹಿಂದೆ ಇಂದಿರಾ ಗಾಂಧಿ ಅವರು ಪ್ರಧಾನಿಗಳಾಗಿದ್ದ ವೇಳೆ ಅವರ ಹುಟ್ಟುಹಬ್ಬದ ಅಂಗವಾಗಿ ನಾನು ರಕ್ತದಾನ ಶಿಬಿರ ಆಯೋಜನೆ ಮಾಡಿದ್ದನ್ನು ನೆನಪಿಗೆ ಇರುವ ಪೊಟೋ ಇದೆ ಎಂದು ಡಿ.ಕೆ.ಶಿವಕುಮಾರ್ ಮೆಲುಕು ಹಾಕಿದರು.

ಕಳೆದ ವರ್ಷ ನನ್ನ ಹುಟ್ಟುಹಬ್ಬವನ್ನು ಆಡಂಬರದಿಂದ ಆಚರಣೆ ಮಾಡದೆ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಆಚರಣೆ ಮಾಡಲಾಯಿತು. ಒಟ್ಟು 4 ಸಾವಿರ ಯುನಿಟ್ ರಕ್ತ ಸಂಗ್ರಹವಾಗಿತ್ತು. ಮಾನವನ ಜೀವ ಅತ್ಯಮೂಲ್ಯ, ರಕ್ತದಾನ ಮಾಡುವ ಮೂಲಕ ನಮ್ಮ ದೇಹದ ಆರೋಗ್ಯದಲ್ಲಿ ಆಗುವ ಬದಲಾವಣೆಗಳ ಬಗ್ಗೆ ನನಗೆ ಅರಿವಿದೆ. ನಾವು ಹಣ ಕೊಡಬಹುದು ಆದರೆ ಜೀವ ಕೊಡಲು ಸಾಧ್ಯವಿಲ್ಲ. ರಕ್ತದಾನ ಶಿಬಿರಗಳು ಈ ಕಾಲದ ತುರ್ತು ಕೆಲಸಗಳು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

2 ಸಾವಿರ ಶಾಲೆಗಳ ಅಭಿವೃದ್ದಿ: 2 ಸಾವಿರ ಗ್ರಾಮೀಣ ಶಾಲೆಗಳನ್ನು ಸಿಎಸ್‍ಆರ್ ಅನುದಾನದ ಅಡಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ಈ ಬಗ್ಗೆ ಚಿಂತನೆ ಮಾಡಲಾಗಿದ್ದು, ಖಾಸಗಿ ಕಂಪೆನಿಗಳ ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಕರ್ನಾಟಕದ ಶಾಲೆಗಳಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. ಈಗಾಗಲೆ ಎಲ್ಲಾ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಜೊತೆ ಮಾತುಕತೆ ನಡೆಸಿ ಗ್ರಾಮೀಣ ಭಾಗದ ಒಂದೊಂದು ಶಾಲೆಗಳ ನಿರ್ವಹಣೆ ಮಾಡುವುದರ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

ಸರಕಾರದಿಂದ ಒಂದು ಸಮಿತಿ ರಚನೆ ಮಾಡಿ ಕಾರ್ಪೋರೇಟ್ ವಲಯದಿಂದ 2 ಸಾವಿರ ಶಾಲೆಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಯೋಜನೆ ರೂಪಿಸಲಾಗಿದೆ. ಕಂಪೆನಿಗಳು ಅವರಿಗೆ ಅನುಕೂಲವಾಗುವ ಸ್ಥಳಗಳಲ್ಲಿ ಶಾಲೆಗಳ ಉಸ್ತುವಾರಿ ನೋಡಿಕೊಳ್ಳಬಹುದು. ಸರಕಾರ ಸಮಾಜಮುಖಿ ಕೆಲಸಗಳಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ ನೀವು ಆಯ್ಕೆ ಮಾಡಿಕೊಂಡ ಶಾಲೆಗಳ ಮುಂದೆ ಎಚ್‍ಡಿಎಫ್‍ಸಿ ಬ್ಯಾಂಕ್ ಅಭಿವೃದ್ದಿ ಪಡಿಸಿದ ಶಾಲೆ ಎಂದು ಹೆಸರಿಸಿಕೊಳ್ಳಬಹುದು. ಈ ಕಾರ್ಯಕ್ರಮವನ್ನು ತೆಲಂಗಾಣದ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಉಲ್ಲೇಖಿಸಲಾಗಿದೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X