Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಾವಣಗೆರೆ: ಮುಸ್ಲಿಂ ಬಾಂಧವ್ಯ ವೇದಿಕೆಯ...

ದಾವಣಗೆರೆ: ಮುಸ್ಲಿಂ ಬಾಂಧವ್ಯ ವೇದಿಕೆಯ ಪದಗ್ರಹಣ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ26 Jun 2023 5:03 PM IST
share
ದಾವಣಗೆರೆ: ಮುಸ್ಲಿಂ ಬಾಂಧವ್ಯ ವೇದಿಕೆಯ ಪದಗ್ರಹಣ ಸಮಾರಂಭ

ದಾವಣಗೆರೆ: ಸಾಮಾಜಿಕ ಬಾಂಧವ್ಯದ ಆಶಯ ಹೊಂದಿರುವ ಮುಸ್ಲಿಂ ಸಮುದಾಯದ ಧರ್ಮಗುರುಗಳು, ಲೇಖಕರು, ಚಿಂತಕರು, ಸಾಹಿತಿಗಳು ಮತ್ತು ಸಾಧಕರ ವೇದಿಕೆಯಾದಂತಹ ಮುಸ್ಲಿಂ ಬಾಂಧವ್ಯ ವೇದಿಕೆಯ ವಾರ್ಷಿಕ ಪದಗ್ರಹಣ ಸಮಾರಂಭವು ದಾವಣಗೆರೆಯ ಬಾಪೂಜಿ ಸಭಾಭವನದಲ್ಲಿ ನಡೆಯಿತು.

ಈ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ನಿವೃತ್ತ ನ್ಯಾಯಾಧೀಶರಾದ ವಿಜಯಪುರದ ನಬಿರಸೂಲ್ ಮಹಮದಾಪುರ ಅವರು ಪದಪ್ರದಾನಗೈದರು. ದಾವಣಗೆರೆಯ ನ್ಯಾಯವಾದಿ ಅನೀಸ್ ಪಾಷಾ ಅಧ್ಯಕ್ಷರಾಗಿ ಮತ್ತು ಉಡುಪಿಯ ಮುಷ್ತಾಕ್ ಹೆನ್ನಾಬೈಲ್ ಕಾರ್ಯದರ್ಶಿಯಾಗಿ ಆಯ್ಕೆಯಾದರು.

ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ನಬಿರಸೂಲ್ ಮಹಮದಾಪುರ್ "ಸೌಹಾರ್ದ ಸಮಾಜ ನಿರ್ಮಾಣಕ್ಕಾಗಿ ಬಹಳಷ್ಟು ವೇದಿಕೆ-ಸಂಘಟನೆಗಳು ರಾಜ್ಯ ಕಂಡಿದೆ. ಆದರೆ ಈ ವೇದಿಕೆ ಸಮುದಾಯದ ಅತ್ಯಂತ ಪ್ರಜ್ಞಾವಂತರು ಮತ್ತು ಪ್ರಬುದ್ಧ ಸಾಧಕರಿಂದ ಕೂಡಿದ ಸಂಘಟನೆಯಾಗಿದೆ. ಇದು ಸಮಾಜದ ಎಲ್ಲ ವರ್ಗದವರಲ್ಲೂ ಬಹಳ ನಿರೀಕ್ಷೆ ಮೂಡಿಸಿದೆ. ಒಂದು ವರ್ಷದ ಹಿಂದೆ ಹುಟ್ಟಿದ ಈ ಸಂಘಟನೆ ರೂಪುಗೊಂಡ ರೀತಿ ಮತ್ತು ಇದರ ಸಾಮಾಜಿಕ ಕಾರ್ಯಕ್ರಮಗಳನ್ನು ನೋಡಿದರೆ ಬಹಳ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ಸಮುದಾಯದ ಸರ್ವಕ್ಷೇತ್ರದ ಆಯ್ದ ಸಾಧಕರನ್ನು ಹೊಂದಿರುವ ರಾಜ್ಯದ ಬೇರೆ ಬೇರೆ ಭಾಗದವರಿಂದ ಕೂಡಿದ ಮುಸ್ಲಿಂ ಸಮುದಾಯದ ಮೊದಲ ಸಂಘಟನೆಯಿದು. ಇಲ್ಲಿಂದ ಹೊರಡುವ ಪ್ರತೀ ಮಾತುಗಳು ಮತ್ತು ಕಾರ್ಯಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಪೂರಕವಾಗುವುದರ ಮೂಲಕ ಭವಿಷ್ಯದಲ್ಲಿ ರಾಜ್ಯ ಸರ್ವಜನಾಂಗದ ಶಾಂತಿಯ ತೋಟ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಈ ವೇದಿಕೆ ದೊಡ್ಡಮಟ್ಟದಲ್ಲಿ ಸಹಕಾರಿಯಾಗುವ ವಿಶ್ವಾಸವಿದೆ" ಎಂದರು.

ವೇದಿಕೆಯ ನೂತನ ಅಧ್ಯಕ್ಷರಾದ ಅನಿಸ್ ಪಾಷಾರವರು ಮಾತನಾಡಿ ಯಾವುದೇ ಒಂದು ಸಮುದಾಯ ಮುಂದುವರೆಯ ಬೇಕಾದರೆ ಆ ಸಮುದಾಯದ ನಾಯಕರ ಮುಂದಾಳತ್ವದ ಅವಶ್ಯಕತೆ ಇದೆ, ಆದರೆ ಮುಸ್ಲಿಂ ಸಮುದಾಯದಲ್ಲಿ ಈಗ ನಾಯಕತ್ವದ ಕೊರತೆ ಇದೆ. ಈ ಸಂಘಟನೆಯು ಮುಂದಿನ ದಿನಗಳಲ್ಲಿ ಪ್ರತಿಯೊಂದು ಸಮುದಾಯದ ಮಧ್ಯ ಬಾಂಧವ್ಯದ ಕೊಂಡಿಯನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ನೂತನ ಅಧ್ಯಕ್ಷ ಅನೀಸ್ ಪಾಶಾರವರನ್ನು ಸಮಾಜಸೇವೆಗಾಗಿ ಸಮ್ಮಾನಿಸಲಾಯಿತು.

2024-25 ನೇ ಸಾಲಿಗೆ ಆಯ್ಕೆಯಾದ ಕಾರ್ಯದರ್ಶಿ ಡಾ. ಹಕೀಮ್ ತೀರ್ಥಹಳ್ಳಿ ನೂತನ ಅಧ್ಯಕ್ಷರ ಪರಿಚಯ ಮಾಡಿದರು. ಸದಸ್ಯ ಅಸ್ಲಮ್ ಹೈಕಾಡಿ ನೂತನ ಕಾರ್ಯದರ್ಶಿಯವರ ಪರಿಚಯ ಮಾಡಿದರು. ಕಾರ್ಯದರ್ಶಿ ಲೇಖಕ ಮುಷ್ತಾಕ್ ಹೆನ್ನಾಬೈಲ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಡಾ.ಸೈಯದ್ ನಿಝಾಮುದ್ದೀನ್ ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರೌಫ್ ವಂದನಾರ್ಪಣೆಗೈದರು. ವೇದಿಕೆಯಲ್ಲಿ ಧರ್ಮಗುರುಗಳು ಹಾಗೂ ವೇದಿಕೆಯ ಗೌರವಾಧ್ಯಕ್ಷರ‍ಾದ ಮಂಗಳೂರಿನ ಎಸ್.ಬಿ. ದಾರಿಮಿ, 2024-25ರ ಸಾಲಿಗೆ ಆಯ್ಕೆಯಾದ ಅಧ್ಯಕ್ಷ ಹಾವೇರಿಯ ಹಿರಿಯ ಕವಿ ಖಾದರ್ ಮೊಹಿಯುದ್ದೀನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಸೌಹಾರ್ದ ಕಾರ್ಯಕ್ರಮದ ಭಾಗವಾಗಿ ಆವರಗೊಳ್ಳ ಪುರವರ್ಗ ಹಿರೇಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿಗಳನ್ನು ಮಠದಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯ ನಿಯೋಗ ಭೇಟಿಯಾಗಿ ಮಾತುಕತೆ ನಡೆಸಿತು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X