Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪರಿಶಿಷ್ಟ ಜಾತಿ ಒಳಮೀಸಲಾತಿ: ಮೂಲ...

ಪರಿಶಿಷ್ಟ ಜಾತಿ ಒಳಮೀಸಲಾತಿ: ಮೂಲ ಜಾತಿಯೊಂದಿಗೆ ಪ್ರವರ್ಗ ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಲು ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ8 Oct 2025 10:45 PM IST
share
ಪರಿಶಿಷ್ಟ ಜಾತಿ ಒಳಮೀಸಲಾತಿ: ಮೂಲ ಜಾತಿಯೊಂದಿಗೆ ಪ್ರವರ್ಗ ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಲು ಸುತ್ತೋಲೆ

ಬೆಂಗಳೂರು, ಅ.8: ಪರಿಶಿಷ್ಟ ಜಾತಿಗಳನ್ನು ಮೂರು ಪ್ರವರ್ಗಗಳಾಗಿ ವಿಂಗಡಣೆ ಮಾಡಿ ಒಳಮೀಸಲಾತಿ ಜಾರಿ ಮಾಡಿದ್ದು, ಜಾತಿ ಪ್ರಮಾಣ ಪತ್ರವನ್ನು ನೀಡುವ ವೇಳೆ, ಮೂಲ ಜಾತಿಯೊಂದಿಗೆ ಪ್ರವರ್ಗವನ್ನು ನಮೂದಿಸಿ, ಪ್ರಮಾಣ ಪತ್ರವನ್ನು ನೀಡಬೇಕು ಎಂದು ಸರಕಾರವು ಬುಧವಾರ ಸುತ್ತೋಲೆ ಹೊರಡಿಸಿದೆ.

ಈಗಾಗಲೇ ಆದಿ ಕರ್ನಾಟಕ ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದವರ ಮೂಲ ಜಾತಿಯು 'ಹೊಲೆಯ' ಎಂದು ಇದ್ದಲ್ಲಿ, ಈಗ ಜಾತಿ ಪ್ರಮಾಣ ಪತ್ರದಲ್ಲಿ 'ಆದಿ ಕರ್ನಾಟಕ (ಹೊಲೆಯ/ಪ್ರವರ್ಗ-ಬಿ)' ಎಂದು ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಲಾಗುವುದು.

ಅಭ್ಯರ್ಥಿಯು 'ಆದಿ ಕರ್ನಾಟಕ' ಎಂದು ಜಾತಿ ಪ್ರಮಾಣ ಪತ್ರ ಪಡೆದಿದ್ದು ಹಾಗೂ ಮೂಲ ಜಾತಿಯು 'ಮಾದಿಗ' ಎಂದು ಇದ್ದಲ್ಲಿ ಜಾತಿ ಪ್ರಮಾಣ ಪತ್ರದಲ್ಲಿ 'ಆದಿ ಕರ್ನಾಟಕ (ಮಾದಿಗ/ಪ್ರವರ್ಗ-ಎ)' ಎಂದು ನಮೂದಿಸಿ, ಜಾತಿ ಪ್ರಮಾಣ ಪತ್ರ ನೀಡಲಾಗುವುದು.

ಅಭ್ಯರ್ಥಿಯು 'ಕೊರಚ' ಎಂದು ಜಾತಿ ಪ್ರಮಾಣ ಪತ್ರ ಈಗಾಗಲೇ ಪಡೆದಿದ್ದರೆ, ಕೊರಚ ಸಮುದಾಯವನ್ನು ಪ್ರವರ್ಗ-ಸಿ ಯಲ್ಲಿ ವರ್ಗೀಕರಿಸಿರುವುದರಿಂದ ಜಾತಿ ಪ್ರಮಾಣ ಪತ್ರವನ್ನು ಕೊರಚ(ಪ್ರವರ್ಗ-ಸಿ) ಎಂದು ನೀಡಲಾಗುತ್ತದೆ.

ಆದಿ ಆಂಧ್ರ, ಆದಿ ದ್ರಾವಿಡ ಮತ್ತು ಆದಿ ಕರ್ನಾಟಕಕ್ಕೆ ಸೇರಿದ ಮೂಲ ಜಾತಿಯನ್ನು ತಿಳಿಸದೇ ಇರುವ ಅಭ್ಯರ್ಥಿಗಳು, 'ಪ್ರವರ್ಗ- ಎ ಅಥವಾ ಪ್ರವರ್ಗ- ಬಿ'ಯನ್ನು ಆಯ್ಕೆ ಮಾಡಿಕೊಂಡು ಸ್ಪಷ್ಟವಾಗಿ ನಮೂದಿಸಿ, ಮುಚ್ಚಳಿಕೆ ಪತ್ರ(ಆಫಿಡೆವಿಟ್) ದೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸ್ವೀಕರಿಸಿದ ಪ್ರಾಧಿಕಾರಗಳು ಅಭ್ಯರ್ಥಿಗಳೂ ಪರಿಶಿಷ್ಟ ಜಾತಿಗೆ ಸೇರಿರುವ ಬಗ್ಗೆ ಖಾತರಿಪಡಿಸಿಕೊಂಡು, ಅಭ್ಯರ್ಥಿಗಳು ನೀಡಿರುವ ಮುಚ್ಚಳಿಕೆ ಪತ್ರದಲ್ಲಿ ಘೋಷಿಸಿರುವ ಪ್ರವರ್ಗವನ್ನು ನಮೂದಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು. ಈ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡು ಯಾವ ಪ್ರವರ್ಗದಲ್ಲಿ ಜಾತಿ ಪ್ರಮಾಣ ಪತ್ರ ಪಡೆದಿರುತ್ತಾರೆಯೋ ಅದೇ ಪ್ರವರ್ಗ ಅವರ ಕುಟುಂಬಕ್ಕೆ ಶಾಶ್ವತವಾಗಿ ಮುಂದುವರೆಯುತ್ತದೆ. ಯಾವುದೇ ಕಾರಣಕ್ಕೂ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X