Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ...

ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ ಪೂರೈಕೆ ಸರಣಿಯ ಸ್ಥಿತಿಗಳು ಬದಲಾಗುತ್ತಿವೆ: ಭುವನ್ ಲೋಧಾ

‘ಇನ್ವೆಸ್ಟ್ ಕರ್ನಾಟಕ-2025’

ವಾರ್ತಾಭಾರತಿವಾರ್ತಾಭಾರತಿ13 Feb 2025 8:02 PM IST
share
ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ ಪೂರೈಕೆ ಸರಣಿಯ ಸ್ಥಿತಿಗಳು ಬದಲಾಗುತ್ತಿವೆ: ಭುವನ್ ಲೋಧಾ

ಬೆಂಗಳೂರು: ತಂತ್ರಜ್ಞಾನದ ಅಭಿವೃದ್ಧಿಯೊಂದಿಗೆ ತಯಾರಿಕಾ ವಲಯದಲ್ಲಿ ಉದ್ಯೋಗಗಳು ಹಾಗೂ ಪೂರೈಕೆ ಸರಣಿಯ ಪರಿಸ್ಥಿತಿಗಳು ಬದಲಾಗುತ್ತಿವೆ ಎಂದು ಮಹೀಂದ್ರಾ ಗ್ರೂಪ್ ಸಂಸ್ಥೆಯ ಎಐ ವಿಭಾಗದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭುವನ್ ಲೋಧಾ ಹೇಳಿದರು.

ಗುರುವಾರ ಬೆಂಗಳೂರು ಅರಮನೆ ಆವರಣದಲ್ಲಿ ‘ಇನ್ವೆಸ್ಟ್ ಕರ್ನಾಟಕ-2025’ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ನಡೆದ ‘ಉದ್ಯಮ 5.0-ಮಾನವ ಕೇಂದ್ರಿತ ಕ್ರಾಂತಿಯಾಗಿ ತಯಾರಿಕಾ ವಲಯದ ಮರುವ್ಯಾಖ್ಯಾನ' ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ಎಐ ತಂತ್ರಜ್ಞಾನ ಬಳಕೆಯೊಂದಿಗೆ ತಯಾರಿಕೆ ಸೇರಿದಂತೆ ವಿವಿಧ ವಲಯಗಳ ಕೌಶಲ್ಯ ನಿರೀಕ್ಷೆ ಮತ್ತು ಬೇಡಿಕೆ ಬದಲಾಗುತ್ತಿದೆ ಎಂದರು.

ಸುಧಾರಿತ ಸಾಫ್ಟ್ ವೇರ್ ಗಳ ಅಳವಡಿಕೆಯಿಂದಾಗಿ ಸರಕು ತಯಾರಿಕೆಯ ಸ್ವರೂಪ ಬದಲಾಗಿದೆ. ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೈಜ ಕ್ಷಣದಲ್ಲಿ (ರಿಯಲ್ ಟೈಮ್ ನಲ್ಲಿ) ಒದಗಿಸುವುದು ಹಿಂದೆಂದಿಂಗಿಂತಲೂ ಹೆಚ್ಚು ಮುಖ್ಯವಾಗಿದೆ. ಡಾಟಾ ಸೈನ್ಸ್ ಸೇರಿದಂತೆ ವಿವಿಧ ತಂತ್ರಜ್ಞಾನದಿಂದಾಗಿ ಗ್ರಾಹಕರ ಮನೋಗುಣವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

ಉದ್ಯಮ ವಲಯದಲ್ಲಿ ನಿರ್ಧಾರ ಕೈಗೊಳ್ಳುವಿಕೆ ಅಥವಾ ‘ಡಿಸಿಷನ್ ಮೇಕಿಂಗ್' ಅತಿ ಪ್ರಮುಖ ಘಟ್ಟವಾಗಿದ್ದು, ಸುಧಾರಿತ ತಂತ್ರಜ್ಞಾನದ ಬಳಕೆಯಿಂದಾಗಿ ಡಿಸಿಷನ್ ಮೇಕಿಂಗ್ ವಿಧಾನ ಈಗ ಬದಲಾಗುತ್ತಿದೆ. ತಂತ್ರಜ್ಞಾನ ಯುಗದ ಹೊಸಜಗತ್ತಿನಲ್ಲಿ ಮಾನವ ಮತ್ತು ಯಂತ್ರಗಳು ಸಮನ್ವಯದಿಂದ ಒಟ್ಟಿಗೆ ಕಾರ್ಯ ನಿರ್ವಹಿಸುವುದು ಅನಿವಾರ್ಯವಾಗಿದೆ ಎಂದು ಭುವನ್ ಲೋಧಾ ವಿವರಿಸಿದರು.

‘ಕಿಂಡ್ರಿಲ್ ಇಂಡಿಯಾ' ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಲಿಂಗರಾಜ್ ಸಾವಕಾರ್, ಪ್ರಸಕ್ತ ಕಾಲಘಟ್ಟದಲ್ಲಿ, ಮಾರುಕಟ್ಟೆಯ ಮುಂದಿನ ಋತುಮಾನದಲ್ಲಿ ಗ್ರಾಹಕರ ನಿರೀಕ್ಷೆಗಳೇನು ಎಂದು ಊಹಿಸುವುದು ಸವಾಲಾಗಿದೆ ಎಂದು ಹೇಳಿದರು.

ತಂತ್ರಜ್ಞಾನದಿಂದಾಗಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ (ಎಂ ಎಸ್ ಎಂ ಇ) ವಲಯದ ತಯಾರಿಕಾ ವಿನ್ಯಾಸ ಮತ್ತು ಉತ್ಪನ್ನದಲ್ಲಿ ಮೌಲ್ಯವರ್ಧನೆಯಾಗಿದೆ. ಇದಕ್ಕೆ ಪೂರಕವಾಗಿ ಈ ವಲಯಕ್ಕೆ ಹೂಡಿಕೆಯೂ ಹರಿದುಬರಬೇಕಿದ್ದು, ಸರಕಾರದ ನೀತಿಯೂ ಬದಲಾಗಬೇಕಿದೆ ಎಂದು ಅವರು ತಿಳಿಸಿದರು.

ವೇಲ್ಸ್ ನ ಸ್ವಾನ್ ಸೀ ವಿ.ವಿ. ಕಂಪ್ಯೂಟರ್ ಸೈನ್ಸಸ್ ವಿಭಾಗದ ನಿರ್ದೇಶಕ ಬರ್ಟಿ ಮುಲ್ಲರ್, ತಯಾರಿಕಾ ವಲಯದಲ್ಲಿ ಸಾಂಪ್ರದಾಯಿಕ ವಿಧಾನಕ್ಕಿಂತ ತಂತ್ರಜ್ಞಾನ ಬಲದ ಸ್ಮಾರ್ಟ್ ವಿಧಾನ ಇಂದು ಹೆಚ್ಚು ಅಗತ್ಯವಾಗಿದೆ ಎಂದು ಲಿಂಗರಾಜ್ ಸಾವಕಾರ್ ಹೇಳಿದರು.

ಎಐ ತಂತ್ರಜ್ಞಾನದ ಬಳಕೆಯೊಂದಿಗೆ ಕೈಗಾರಿಕಾ ವಲಯದಲ್ಲಿ ಭಾವನಾತ್ಮಕ ಬುದ್ಧಿಮತ್ತೆ ಹಾಗೂ ಸೃಜನಶೀಲ ಬುದ್ಧಿಮತ್ತೆಯ ಸಮನ್ವಯತೆ ಆಗುತ್ತಿದೆ. ಇದರ ಪರಿಣಾಮವನ್ನು ಉತ್ಪನ್ನಗಳಲ್ಲಿ ಕಾಣುತ್ತಿದ್ದೇವೆ. ಇಂದು ಗ್ರಾಹಕರ ವೈಯಕ್ತಿಕ ಬೇಡಿಕೆ ಅನುಸಾರ ವ್ಯಕ್ತಿಗತ ಅಪೇಕ್ಷೆಗೆ ತಕ್ಕಂತೆ (ಪರ್ಸನಲೈಸ್ಡ್) ಉತ್ಪನ್ನಗಳ ತಯಾರಿಕೆ ಸಾಧ್ಯವಾಗಿದೆ ಎಂದು ಅವರು ತಿಳಿಸಿದರು.

ಏಷ್ಯಾ-ಪೆಸಿಫಿಕ್ ಇಕನಾಮಿಸ್ಟ್ ಇಂಪ್ಯಾಕ್ಟ್ ವೇದಿಕೆಯ ತಂತ್ರಜ್ಞಾನ ಮತ್ತು ಸೊಸೈಟಿ ವಿಭಾಗದ ಮುಖ್ಯಸ್ಥ ಚಾಲ್ರ್ಸ ರಾಸ್ ಗೋಷ್ಠಿ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X