Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರ ಹಣಕಾಸು ಆಯೋಗದ ಸ್ವಾಯತ್ತತೆ...

ಕೇಂದ್ರ ಹಣಕಾಸು ಆಯೋಗದ ಸ್ವಾಯತ್ತತೆ ಎಂಬುದು ಕೇವಲ ತೋರಿಕೆಯೇ? : ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ಸಿಎಂ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ5 Feb 2024 11:56 PM IST
share
ಕೇಂದ್ರ ಹಣಕಾಸು ಆಯೋಗದ ಸ್ವಾಯತ್ತತೆ ಎಂಬುದು ಕೇವಲ ತೋರಿಕೆಯೇ? : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಿಧಿ ಹಂಚಿಕೆಯ ತಾರತಮ್ಯದ ಆರೋಪವನ್ನು ‘‘ರಾಜಕೀಯ ಕುಚೋದ್ಯದ ಆರೋಪಗಳಾಗಿವೆ’’ ಎಂದು ಸಂಸತ್ತಿನಲ್ಲಿ ಹೇಳಿರುವುದಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಈ ಕುರಿತು ತಮ್ಮ x ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಹಣಕಾಸು ಆಯೋಗದ ಶಿಫಾರಸುಗಳ ಪಾವಿತ್ರ್ಯವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ಪ್ರತಿಪಾದಿಸಿದ್ದಾರೆ. ಆದರೆ ಹಣಕಾಸು ಆಯೋಗದ ಮೇಲೆ ಪ್ರಭಾವ ಬೀರುವ ನರೇಂದ್ರ ಮೋದಿಯವರು ಪ್ರಯತ್ನಿಸುತ್ತಿರುವ ಬಗ್ಗೆ ನೀತಿ ಆಯೋಗದ ಸಿಇಓ ಬಹಿರಂಗಪಡಿಸಿರುವ ವಿಷಯಗಳು, ವಿಭಿನ್ನವಾದ ಚಿತ್ರಣವನ್ನು ನೀಡುತ್ತವೆ. ಹಣಕಾಸು ಆಯೋಗದ ಸಲಹೆಯ ಹೊರತಾಗಿಯೂ ಕರ್ನಾಟಕಕ್ಕೆ 5,595 ಕೋಟಿ ರೂ.ಗಳ ವಿಶೇಷ ಅನುದಾನದ ನಿರಾಕರಣೆ, ಕ್ಷೀಣಿಸುತ್ತಿರುವ ನೆರವಿನ ಅನುದಾನ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಬಜೆಟ್ ಅನುದಾನ ಬಾರದೇ ಇರುವುದು, ಇವೆಲ್ಲವೂ ಭಾರತದಲ್ಲಿ ಹಣಕಾಸು ಆಯೋಗದ ಸ್ವಾಯತ್ತೆಯೆಂಬುದು ಕೇವಲ ತೋರಿಕೆಗೆ ಮಾತ್ರವೇ? ಎಂಬ ಪ್ರಶ್ನೆಯೆಡೆಗೆ ಕೊಂಡೊಯ್ಯುತ್ತದೆ” ಎಂದು ತಿಳಿಸಿದ್ದಾರೆ.

ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ನಿಧಿ ಹಂಚಿಕೆಯ ವೇಳೆ ಬಿಜೆಪಿಯೇತರ ಸರಕಾರಗಳಿರುವ ರಾಜ್ಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ಆರೋಪಗಳನ್ನು ನಿರಾಕರಿಸಿದ್ದರು. ಈ ಸಂಬಂಧ ಕರ್ನಾಟಕ ಸರಕಾರ ಮಾಡಿರುವ ಆರೋಪಗಳು ‘‘ರಾಜಕೀಯ ಕುಚೋದ್ಯದ ಆರೋಪಗಳಾಗಿವೆ’’ ಎಂದು ಹೇಳಿದ್ದರು.

‘‘ಕೆಲವು ರಾಜ್ಯಗಳ ವಿರುದ್ಧ ತಾರತಮ್ಯ ನಡೆಸಲಾಗುತ್ತಿದೆ ಎಂಬ ಆರೋಪವು ರಾಜಕೀಯ ಪ್ರೇರಿತವಾಗಿದೆ. ಸ್ಥಾಪಿತ ಹಿತಾಸಕ್ತಿಗಳು ಹೀಗೆ ಹೇಳಿಕೊಂಡು ತಿರುಗಲು ಸಂತೋಷಪಡುತ್ತಿವೆ ಎಂದು ಹೇಳಲು ನಾನು ವಿಷಾದಿಸುತ್ತೇನೆ. ಇಲ್ಲಿ ಸರಿಯಾದ ವ್ಯವಸ್ಥೆಯಿರುವುದರಿಂದ ಇಂಥ ಪರಿಸ್ಥಿತಿ ಉಂಟಾಗಲು ಸಾಧ್ಯವಿಲ್ಲ. ಕೇಂದ್ರ ಸರಕಾರವು ಹಣಕಾಸು ಆಯೋಗದ ಶಿಫಾರಸುಗಳಂತೆ ಕಾರ್ಯನಿರ್ವಹಿಸುತ್ತಿದೆ ’’ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X