Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ, ಕರ್ನಾಟಕ ಬಗ್ಗೆ ಕೇಂದ್ರ...

ಕನ್ನಡ, ಕರ್ನಾಟಕ ಬಗ್ಗೆ ಕೇಂದ್ರ ಸರಕಾರಕ್ಕೆ ತಾತ್ಸಾರವೇ: ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ16 July 2025 10:59 PM IST
share
ಕನ್ನಡ, ಕರ್ನಾಟಕ ಬಗ್ಗೆ ಕೇಂದ್ರ ಸರಕಾರಕ್ಕೆ ತಾತ್ಸಾರವೇ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕನ್ನಡ, ಕರ್ನಾಟಕ ಬಗ್ಗೆ ಕೇಂದ್ರ ಸರಕಾರಕ್ಕಿರುವುದು ತಾತ್ಸಾರವೇ ಅಥವಾ ದ್ವೇಷವೇ? ಒಂದು ದೇಶ ಒಂದು ಭಾಷೆ ಎಂಬ ಅಜೆಂಡಾ ಇದೆಯೇ? ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್‍ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕರ್ನಾಟಕದಿಂದ ಆಯ್ಕೆಯಾದ ಬಿಜೆಪಿ ಸಂಸದರು ಸ್ಪಷ್ಟಪಡಿಸಬೇಕು. ಬದುಕಿಗೆ, ಉದ್ಯೋಗಕ್ಕೆ, ಜ್ಞಾನಾರ್ಜನೆಗೆ ಬೇಕಿರುವ ಮತ್ತು ವ್ಯಾಪಕ ಬಳಕೆಯಲ್ಲಿರುವ ಶಾಸ್ತ್ರೀಯ ಭಾಷೆ ಹಾಗೂ ಪುರಾತನ ಭಾಷೆಯಾದ ಕನ್ನಡಕ್ಕೆ ಚಿಲ್ಲರೆ ಹಣವನ್ನು ನೀಡುವ ಮೂಲಕ ಕನ್ನಡವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ.

11 ವರ್ಷಗಳಲ್ಲಿ, ಕೇಂದ್ರ ಸರಕಾರವು ಸಂಸ್ಕೃ ತವನ್ನು ಉತ್ತೇಜಿಸಲು 2,532 ಕೋಟಿ ರೂ. ಖರ್ಚು ಮಾಡಿದೆ. ಹಾಗೆಯೇ, ಹಿಂದಿಗೆ 427 ಕೋಟಿ ರೂ, ತಮಿಳಿಗೆ 113 ಕೋಟಿ ರೂ, ಕನ್ನಡಕ್ಕೆ 12 ಕೋಟಿ ರೂ., ತೆಲುಗಿಗೆ 12 ಕೋಟಿ ರೂ., ಒಡಿಯಾ ಮತ್ತು ಮಲಯಾಳಂಗೆ ತಲಾ 4.5 ಕೋಟಿ ರೂ., ಜನರ ದೈನಂದಿನ ಬದುಕಿನಲ್ಲಿ ಬಳಕೆಯಲ್ಲಿ ಇಲ್ಲದ, ಬದುಕು ರೂಪಿಸಿಕೊಳ್ಳಲು ಸಾಧ್ಯವಾಗದ ಸಂಸ್ಕೃತ ಭಾಷೆಗೆ ಕೊಟ್ಟಷ್ಟು ಮನ್ನಣೆ ಕನ್ನಡಕ್ಕೆ ಏಕಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ.

ಎನ್‍ಡಿಎ ಸರಕಾರವು ಕರ್ನಾಟಕದಿಂದ 19 ಲೋಕಸಭಾ ಸದಸ್ಯರನ್ನು ಮತ್ತು 7 ರಾಜ್ಯಸಭಾ ಸದಸ್ಯರನ್ನು ಹೊಂದಿದ್ದರೂ, ಕನ್ನಡಕ್ಕೆ ಇಂತಹ ತಿರಸ್ಕಾರ ತೋರಿದ್ದೇಕೆ? ಕರ್ನಾಟಕದ ಸಂಸದರು ಈ ಬಗ್ಗೆ ಪ್ರತಿರೋಧ ತೋರದಿರುವುದೇಕೆ? ಕನ್ನಡ, ಕರ್ನಾಟಕ, ಕನ್ನಡಿಗರ ಬಗೆಗಿನ ಕಾಳಜಿಗಿಂತ ತಮ್ಮ ರಾಜಕೀಯ ಹಿತಾಸಕ್ತಿಯೇ ಮುಖ್ಯವಾಯಿತೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅನುಪಯುಕ್ತ ಭಾಷೆಯಾದ ಸಂಸ್ಕೃತಕ್ಕೆ ಇಷ್ಟು ದೊಡ್ಡ ಮೊತ್ತವನ್ನು ಖರ್ಚು ಮಾಡಿದ ಕೇಂದ್ರ ಸರಕಾರವು ಉದ್ಯೋಗ ಸೃಷ್ಟಿಸಬಲ್ಲ, ಆರ್ಥಿಕತೆಗೆ ಕೊಡುಗೆ ನೀಡಬಲ್ಲ ಸ್ಟಾರ್ಟ್‍ಅಪ್‍ಗಳಿಗೆ ಸ್ಟಾರ್ಟ್ ಅಪ್ ಇಂಡಿಯಾದಡಿಯಲ್ಲಿ ನೀಡಿದ ಅನುದಾನ ಕೇವಲ 454 ಕೋಟಿ ರೂ. ಮಾತ್ರ. ಯುವ ಸಮುದಾಯದ ಭವಿಷ್ಯ ಕೇಂದ್ರ ಸರಕಾರದ ಆದ್ಯತೆಯಾಗದಿರುವುದು ದೇಶದ ದುರಂತ ಎಂದು ಹೇಳಿದ್ದಾರೆ.

ಸಂಸ್ಕೃತದ ಉತ್ತೇಜನಕ್ಕೆ ನೀಡಿದ ಬಜೆಟ್‍ನಲ್ಲಿ ಅರ್ಧದಷ್ಟಾದರೂ ನಮ್ಮ ಯುವಕರನ್ನು ಕೌಶಲ್ಯಭರಿತರನ್ನಾಗಿಸಲು, ಉದ್ಯೋಗಸ್ಥರನ್ನಾಗಿಸಲು ಹಾಗೂ ನವೋದ್ಯಮಗಳನ್ನು ಪ್ರೋತ್ಸಾಹಿಸಲು ವಿನಿಯೋಗಿಸಿದ್ದರೆ ಭಾರತದ ಭವಿಷ್ಯ ಬೆಳಗುತ್ತಿತ್ತು. ಆದರೆ ಬಿಜೆಪಿಗೆ ಯುವಜನರ ಹಿತ ಬೇಕಿಲ್ಲ. ರಾಜ್ಯದ ಬಿಜೆಪಿ ನಾಯಕರಿಗೆ ಕನ್ನಡದ ಹಿತ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

Tags

Priyank KhargeKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X