Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ಪಕ್ಷ ತೊರೆದ ಬಗ್ಗೆ ಜಗದೀಶ್...

ಕಾಂಗ್ರೆಸ್ ಪಕ್ಷ ತೊರೆದ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಲಿ: ಸಚಿವ ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ25 Jan 2024 7:56 PM IST
share
ಕಾಂಗ್ರೆಸ್ ಪಕ್ಷ ತೊರೆದ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ ನೀಡಲಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಬರುವಾಗ ಮನಸಾರೆ ಬಂದಿದ್ರು, ಈಗ ಮನಸಾರೆ ಹೋಗಿದ್ದಾರೋ ಇಲ್ವೋ ಗೊತ್ತಿಲ್ಲ. ಅದನ್ನ ಅವರೇ ಹೇಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು,ಜಗದೀಶ್ ಶೆಟ್ಟರ್ ರಾಜ್ಯದ ಮಾಜಿ ಸಿಎಂ. ಕಾಂಗ್ರೆಸ್ ಪಕ್ಷಕ್ಕೆ ಬರುವಾಗ ಅವರೇ ಬಿಡುವ ಕಾರಣ ಹೇಳಿದ್ದರು. ಬಿಜೆಪಿಯ ಸಿದ್ದಾಂತ, ನಾಯಕತ್ವದ ಬಗ್ಗೆ ಮಾತನಾಡಿಯೇ ಬಂದಿದ್ದರು ಎಂದರು.

ಜಗದೀಶ್ ಶೆಟ್ಟರ್ ಕಾಂಗ್ರೆಸ್ ನಿಂದ ಚುನಾವಣೆಗೆ ನಿಂತಾಗ ಸಾಕಷ್ಟು ನಾಯಕರು ಅವರ ಪರ ಪ್ರಚಾರ ಮಾಡಿದ್ದಾರೆ. ಜನಪ್ರತಿನಿಧಿಯಾಗಿ ಜನ ಅವರನ್ನು ಸ್ವೀಕಾರ ಮಾಡಿರಲಿಲ್ಲ. ಆದರೂ, ಪಕ್ಷ ಅವರಿಗೆ ಬಹಳಷ್ಟು ಗೌರವ ಕೊಟ್ಟಿದೆ. ಎಂಎಲ್ ಸಿ ಸ್ಥಾನ ನೀಡಿತ್ತು. ನಿನ್ನೆವರೆಗೂ ಹೋಗುವ ಮಾತನಾಡಿಲ್ಲ, ಬಿಡಲ್ಲ ಎಂದಿದ್ದರು. 24 ಗಂಟೆಯೊಳಗೆ ಬದಲಾವಣೆ ಆಗಿದೆ. ಯಾಕೆ ಬದಲಾವಣೆ ಆಗಿದೆ. ಸಿಬಿಐ, ಈಡಿ ಎಲ್ಲವೂ ಇರ್ತಾವಲ್ಲಾ ಅದರಿಂದನೂ ಹೋಗಿರಬಹುದು ಎಂದರು.

ಶೆಟ್ಟರ್ ಅವರನ್ನು ನಾವಂತೂ ಕಳಿಸಿಲ್ಲ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಏನು ನಷ್ಟವಿಲ್ಲ. ಪ್ರಜಾಪ್ರಭುತ್ವದಲ್ಲಿ ಆಯ್ಕೆಯಾದ ಸರ್ಕಾರ ಇದೆ. ಏನೂ ಅಗಲ್ಲ ಎಂದರು.

ಬಿಜೆಪಿಯವರು ಮಾನ ಮರ್ಯಾದೆ ಇದ್ದರೆ ಅವರ ಸಾಧನೆ ಹೇಳಲಿ. ನಾನು ಕೂಡ ಬೇರೆ ಪಕ್ಷದಿಂದ ಬಂದೋನು. ಸಾಕಷ್ಟು ಜನರಿದ್ರೂ ನನಗೆ ಪ್ರೀತಿ, ವಿಶ್ವಾಸ, ಅಧಿಕಾರ ಕೊಟ್ಟಿದ್ದಾರೆ. ಅದರ ಮೇಲೆ ನಾವು ಗೌರವ ಕೊಡಬೇಕು ಎಂದರು.

ತತ್ವ- ಸಿದ್ದಾಂತ ವಿರೋಧವಿದ್ದರೂ ಶೆಟ್ಟರ್ ಅವರಿಗೆ ಬಹಳ ಆತ್ಮೀಯತೆಯಿಂದ ಸ್ಥಾನಮಾನ ಕೊಟ್ಟಿದ್ವಿ. ಅವರು ಹಿರಿಯರು, ಟೀಕೆ-ಟಿಪ್ಪಣಿ ಮಾಡಲ್ಲ. ಬಿಜೆಪಿ ಜಾತಿ-ಧರ್ಮ ಆಧಾರದ ಮೇಲೆ ಚುನಾವಣೆ ಮಾಡೋದು. ಆದರೆ ಕಾಂಗ್ರೆಸ್ ಜನರ ಕಷ್ಟಕ್ಕೆ ಸ್ಪಂದಿಸುವ ರಾಜಕೀಯ ಮಾಡುತ್ತದೆ. ಬಿಜೆಪಿಯರ ತಂತ್ರ -ಕುತಂತ್ರಕ್ಕೆ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದರು.

Tags

Madhu BangarappaJagdish Shettar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X