Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಾದೇಶಿಕ ಅಸ್ಮಿತೆಯನ್ನು...

ಪ್ರಾದೇಶಿಕ ಅಸ್ಮಿತೆಯನ್ನು ಕಳೆದುಕೊಂಡಿರುವ ಜೆಡಿಎಸ್ ‘ಪ್ರಾದೇಶಿಕ ಪಕ್ಷ’ವಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ16 April 2024 7:16 PM IST
share
ಪ್ರಾದೇಶಿಕ ಅಸ್ಮಿತೆಯನ್ನು ಕಳೆದುಕೊಂಡಿರುವ ಜೆಡಿಎಸ್ ‘ಪ್ರಾದೇಶಿಕ ಪಕ್ಷ’ವಲ್ಲ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಾದೇಶಿಕ ಅಸ್ಮಿತೆಯ ಘನತೆಯನ್ನು ನರೇಂದ್ರ ಮೋದಿ ಕಾಲಿನ ಕೆಳಗೆ ಇಟ್ಟಿರುವ ಜೆಡಿಎಸ್ ‘ಪ್ರಾದೇಶಿಕ ಪಕ್ಷ’ ಎಂದು ಕರೆಸಿಕೊಳ್ಳಲು ಯಾವ ಅರ್ಹತೆಯನ್ನೂ ಹೊಂದಿಲ್ಲ. ಅಸ್ತಿತ್ವಕ್ಕಾಗಿ ನಿಮ್ಮ ಪಕ್ಷ ಸ್ವಾಭಿಮಾನ ಮಾರಿಕೊಂಡಿರಬಹುದು, ಆದರೆ ಕನ್ನಡಿಗರ ಸ್ವಾಭಿಮಾನ ಮಾರಾಟಕ್ಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಅವರು, ಕುಟುಂಬದ ಕೇವಲ 3 ಸೀಟಿಗಾಗಿ 6 ಕೋಟಿ ಕನ್ನಡಿಗರನ್ನು ‘ಕೇವಲ’ ಮಾಡಿಬಿಟ್ಟಿರಲ್ಲ ದೇವೇಗೌಡರೇ. ನಿಮ್ಮ ಹಿರಿತನ, ನಿಮ್ಮ ಮುತ್ಸದ್ದಿತನ ಎಲ್ಲವೂ ಒಂದೇ ಏಟಿಗೆ ಮಣ್ಣುಪಾಲು ಮಾಡಿಬಿಟ್ಟಿರಲ್ಲ ಎಂದು ಹೇಳಿದ್ದಾರೆ.

ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯ ಕರ್ನಾಟಕ, ಕನ್ನಡಿಗರ ಶ್ರಮದ ದುಡಿಮೆಯಿಂದ ದೇಶ ನಡೆಯುತ್ತಿದೆ ಎಂಬ ಸಂಗತಿ ಕೇವಲವೇ? ಐಟಿ, ಬಿಟಿ ಕ್ಷೇತ್ರದಲ್ಲಿ ಇಡೀ ದೇಶದಲ್ಲಿ ಅತಿ ಹೆಚ್ಚು ಕೊಡುಗೆ ನೀಡುತ್ತಿರುವುದು ಕರ್ನಾಟಕ, ಕನ್ನಡಿಗರ ಈ ಸಾಧನೆ ಕೇವಲವೇ? ಎಂದು ಪ್ರಶ್ನಿಸಿದ್ದಾರೆ.

ನಾವೀನ್ಯತೆಯ ಸೂಚ್ಯಂಕದಲ್ಲಿ ಇಡೀ ದೇಶದಲ್ಲಿ ಕರ್ನಾಟಕವೇ ಒಂದನೇ ಸ್ಥಾನದಲ್ಲಿದೆ, ಇದು ಕೇವಲದ ವಿಷಯವೇ? ಕಾನೂನು ಸುವ್ಯವಸ್ಥೆಯಲ್ಲಿ ಕರ್ನಾಟಕ ಇಡೀ ದೇಶದಲ್ಲೇ ನಂಬರ್ 1 ಸ್ಥಾನ ಕಾಯ್ದುಕೊಂಡು ಬಂದಿದೆ, ಇದು ಕೇವಲದ ಸಂಗತಿಯೇ? ಇಂದು ದೇಶದ ಆರ್ಥಿಕತೆಯಲ್ಲಿ ಬಹುದೊಡ್ಡ ಪಾಲು ಕನ್ನಡಿಗರದ್ದಿದೆ, ಎಂಬ ಸಂಗತಿ ಮರೆತುಬಿಟ್ಟಿರಾ? ಎಂದು ಪ್ರಿಯಾಂಕ್ ಖರ್ಗೆ ಕೇಳಿದ್ದಾರೆ.

ದೇವೇಗೌಡರೇ, ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ನೀವೀಗ ಮಾಜಿ ಪ್ರಧಾನಿ ಎಂಬುದನ್ನು ಮರೆತು ಹಾದಿಬೀದಿಯಲ್ಲಿರುವ ಮೋದಿ ಭಕ್ತನಂತೆ ಮಾತಾಡುತ್ತಿರುವುದು ಶೋಭೆಯಲ್ಲ. ನಿಮ್ಮ ಪ್ರಕಾರ ಪ್ರಧಾನಿ ಎಂದರೆ ಚಕ್ರವರ್ತಿಯೇ, ಒಂದು ರಾಜ್ಯದ ಮುಖ್ಯಮಂತ್ರಿ ಎಂದರೆ ಕಪ್ಪ ಕೊಡುವ ಸಾಮಂತ ರಾಜರೇ? ಎಂದು ಅವರು ಪ್ರಶ್ನಿಸಿದ್ದಾರೆ.

ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ, ಮಾಜಿ ಪ್ರಧಾನಿಯಾಗಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಈ ಪರಿ ಕಳಂಕ ತರುತ್ತಿರುವುದು ಸಹಿಸುವ ಸಂಗತಿಯಲ್ಲ. ಪ್ರಾದೇಶಿಕ ಅಸ್ಮಿತೆಯ ಘನತೆಯನ್ನು ಮೋದಿ ಕಾಲಿನ ಕೆಳಗೆ ಇಟ್ಟಿರುವ ಜೆಡಿಎಸ್ ‘ಪ್ರಾದೇಶಿಕ ಪಕ್ಷ’ ಎಂದುಕೊಳ್ಳಲು ಯಾವ ಅರ್ಹತೆಯನ್ನೂ ಹೊಂದಿಲ್ಲ. ಅಸ್ತಿತ್ವಕ್ಕಾಗಿ ನಿಮ್ಮ ಪಕ್ಷ ಸ್ವಾಭಿಮಾನ ಮಾರಿಕೊಂಡಿರ ಬಹುದು, ಆದರೆ ಕನ್ನಡಿಗರ ಸ್ವಾಭಿಮಾನ ಮಾರಾಟಕ್ಕಿಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕುಟುಂಬದ ಕೇವಲ 3 ಸೀಟಿಗಾಗಿ 6 ಕೋಟಿ ಕನ್ನಡಿಗರನ್ನು "ಕೇವಲ" ಮಾಡಿಬಿಟ್ಟಿರಲ್ಲ ದೇವೇಗೌಡರೇ..ನಿಮ್ಮ ಹಿರಿತನ, ನಿಮ್ಮ ಮುತ್ಸದ್ದಿತನ ಎಲ್ಲವೂ ಒಂದೇ ಏಟಿಗೆ ಮಣ್ಣುಪಾಲು ಮಾಡಿಬಿಟ್ಟಿರಲ್ಲ.ಇಡೀ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಎರಡನೇ ರಾಜ್ಯ ಕರ್ನಾಟಕ,ಕನ್ನಡಿಗರ ಶ್ರಮದ ದುಡಿಮೆಯಿಂದ ದೇಶ ನಡೆಯುತ್ತಿದೆ ಎಂಬ ಸಂಗತಿ ಕೇವಲವೇ?ಐಟಿ,… pic.twitter.com/1oddIXxy0I

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 16, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X