Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನಕಪುರ ಬೆಂಗಳೂರಿಗೆ ಸೇರುತ್ತದೆ: ಡಿಸಿಎಂ...

ಕನಕಪುರ ಬೆಂಗಳೂರಿಗೆ ಸೇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ24 Oct 2023 12:13 PM IST
share
ಕನಕಪುರ ಬೆಂಗಳೂರಿಗೆ ಸೇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಕನಕಪುರ: ಶಿವನಹಳ್ಳಿ ಗ್ರಾಮ ಹೆದ್ದಾರಿಯ ಪಕ್ಕದಲ್ಲಿದೆ, ಯಾವುದೇ ಕಾರಣಕ್ಕೂ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು.

ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ ಪೂಜೆ ಮತ್ತು ಶಿಲಾ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು "ಕೆಎಂಎಫ್ ಡೇರಿ ಇದೆ, ಕನಕಪುರ ಪಟ್ಟಣವಾಗಿ ಇಲ್ಲಿಯ ತನಕ ಬೆಳೆಯಲಿದೆ ಆದ್ದರಿಂದ, ಎಲ್ಲರಲ್ಲಿ ಮನವಿ ಮಾಡುತ್ತೇನೆ, ಭೂಮಿ ಮಾರಾಟ ಮಾಡಬೇಡಿ. ಸಿಂಧ್ಯಾ ಅವರು ಇದನ್ನೇ ದಶಕಗಳಿಂದ ಹೇಳುತ್ತಾ ಬಂದಿದ್ದರು ಎಂದರು.

ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ, ನಿಮ್ಮ ಆಸ್ತಿ ಮೌಲ್ಯಗಳನ್ನ ಹತ್ತು ಪಟ್ಟು ಹೆಚ್ಚು ಮಾಡುವ ಶಕ್ತಿ ದೇವರು ನೀಡಿದ್ದಾನೆ. ನಿಮ್ಮ ಮಕ್ಕಳು, ಮೊಮ್ಮಕ್ಕಳಿಗೆ ವಿದ್ಯೆ ನೀಡಬಹುದು ಅಷ್ಟೇ. ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿನಲ್ಲಿ ಇಟ್ಟುಕೊಳ್ಳಿ ಎಂದು ಕಿವಿಮಾತು ಹೇಳಿದರು.

ಒಂದಲ್ಲ ಒಂದು ದಿನ ಇಲ್ಲಿನ ಗ್ರಾಮಗಳು ಬೆಂಗಳೂರು ಆಗೇ ಆಗುತ್ತವೆ, ಪ್ರತಿ ಅಡಿ ಲೆಕ್ಕದಲ್ಲಿ ಬೆಲೆ ಕಟ್ಟಲಾಗುತ್ತದೆ. ಆದ ಕಾರಣ ನನ್ನ ಮಾತನ್ನು ನೆನಪಿನಲ್ಲಿ ಇಟ್ಟುಕೊಳ್ಳಿ, ಕನಕಪುರ ಜಿಲ್ಲಾ ಕೇಂದ್ರ ಮಾಡುವ ಕುರಿತು ಸಾರ್ವಜನಿಕವಾಗಿ ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ಹಿಂದೂ ಧರ್ಮದಲ್ಲಿ ಸಾವಿರಾರು ದೇವರುಗಳನ್ನು ಪೂಜಿಸಿಕೊಂಡು ಬರುತ್ತಿರುವ ವಿಚಿತ್ರ ಆಚರಣೆ,‌ ನಂಬಿಕೆ ಮಾಡಿಕೊಂಡು ಬಂದಿದ್ದೇವೆ. ಬೇರೆಯವರೆಲ್ಲಾ ಒಂದೇ ದೇವರು ಪೂಜಿಸುತ್ತಾರೆ. ಭಕ್ತಿಗೆ ಯಾವುದೇ ದೇವರಿಲ್ಲ ಎಂದು ನುಡಿದರು.

ವೀರಭದ್ರ ಶಿವನ ಸ್ವರೂಪ, ದೇವರುಗಳನ್ನೇ ಕಾಪಾಡುವ ದೇವರು ಈತ. ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ನಾವು ನಡೆಯಬೇಕು ಎಂದು ತಿಳಿಸಿದರು.

ವೀರಭದ್ರ ದೇವಸ್ಥಾನ ಉಳಿಸಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಸಂಸದರಾದ ಡಿ.ಕೆ.ಶಿವಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಬಳಿ ಮಾತನಾಡಿದರು, ಯೋಜನಾ ನಕ್ಷೆ ಬದಲಾಯಿಸಲು ಆಗಲಿಲ್ಲ. ಈಗ ಆ ದೇವರ ಅನುಗ್ರಹದಿಂದ ಹೊಸ ದೇವಸ್ಥಾನ ನಿರ್ಮಾಣವಾಗುತ್ತಿದೆ ಎಂದರು.

ಎಲ್ಲರ ಕೈಗಳು ಇರುವುದು ಕಾಯಕ ಮಾಡಲು, ದಾನ‌ಮಾಡಲು, ಡಿ.ಕೆ.ಶಿವಕುಮಾರ್, ಪಿ.ಜಿ.ಆರ್.ಸಿಂಧ್ಯಾ ಎಲ್ಲರ ಕೈಗಳು ಇರುವುದೇ ದಾನ ಮಾಡಲು. ದೇವರ ಕೆಲಸ ಮಾಡುವುದು ನಮ್ಮೆಲ್ಲರ ಕರ್ತವ್ಯ. ಕನಕಪುರ ತಾಲೂಕಿನಲ್ಲಿ ಸುಮಾರು 300 ಕ್ಕೂ ಹೆಚ್ಚು ದೇವಸ್ಥಾನಗಳಿಗೆ ಹೊಸ ರೂಪ ಕೊಟ್ಟಿದ್ದೇವೆ. ನಾವು ಈ ಕ್ಷೇತ್ರದ ಪ್ರತಿನಿಧಿಯಾದ ಮೇಲೆ ಎಷ್ಟು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಿರುವ ಕುರಿತು ಪುಸ್ತಕವನ್ನೇ ಬರೆಯಬಹುದು ಎಂದರು.

ಪ್ರಸ್ತುತ ವೀರಭದ್ರನ ದೇವಸ್ಥಾನಕ್ಕೆ ಎಷ್ಟು ಸಹಾಯ ಮಾಡುತ್ತೇನೆ ಎಂದು ಸಾರ್ವಜನಿಕವಾಗಿ ಹೇಳುವುದಿಲ್ಲ. ನಂತರ ಅದನ್ನೇ ಒಂದು ದೊಡ್ಡ ಸುದ್ದಿ ಮಾಡುತ್ತಾರೆ. ನಮಗೆ ವಿಚಾರ, ಆಚಾರ ಮುಖ್ಯ. ಪ್ರಚಾರವಲ್ಲ, ಈ ದೇವಸ್ಥಾನದಲ್ಲಿ ಪ್ರತಿ ಕುಟುಂಬದ ಹಣವಿರಬೇಕು ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಸ್ಥಾನ ಬೆಂಗಳೂರಿಗೆ ಸೀಮಿತಿ. ಇದು ನನ್ನ ಊರಿನ ಕೆಲಸ. ನಮ್ಮ ಕ್ಷೇತ್ರದ ಯಾವುದೇ ಕೆಲಸ ಇದ್ದರು ನಾವು ಹಿಂಜರಿಯುವುದಿಲ್ಲ, ಆದ ಕಾರಣ ಮೈಸೂರಿನಲ್ಲಿ ಪ್ರಮುಖ ಕೆಲಸವಿದ್ದರೂ ನಾನು ನಮ್ಮ ಕ್ಷೇತ್ರಕ್ಕೆ ಬಂದೆ ಎಂದು ಹೇಳಿದರು.

8 ನೇ ಬಾರಿ ಗೆದ್ದ ನಂತರ ನನ್ನ ಮೊದಲ ಬಾರಿಗೆ ಧಾರ್ಮಿಕ ಕೆಲಸಕ್ಕೆ ಬಂದಿದ್ದೇನೆ. ಹೆಚ್ಚು ಕೆಲಸ ಮಾಡುವ ಶಕ್ತಿ ಆ ದೇವರು, ನಮಗೆ, ನಿಮಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ‌. ಉದಾರ ಮನಸ್ಸಿನಿಂದ ಈ ದೇವಸ್ಥಾನ ಕಟ್ಟಲು ಎಲ್ಲರೂ ಸಹಾಯ ಮಾಡಬೇಕು ಎಂದರು.

ಕಬ್ಬಾಳಮ್ಮನ ದೇವಸ್ಥಾನ ಜೀರ್ಣೋದ್ಧಾರ ಮಾಡುವ ವೇಳೆ, ಒಂದಷ್ಟು ಜನ ದೇವಿಯನ್ನು ಮುಟ್ಟಬೇಡ, ಸುಟ್ಟು ಹೋಗುವೆ ಎಂದರು. ನಂತರ, ನಾನು ನೊಣವಿನಕೆರೆ ಸ್ವಾಮೀಜಿಗಳ ಬಳಿ ಈ ವಿಚಾರ ಪ್ರಸ್ತಾಪ ಮಾಡಿದಾಗ ಒಬ್ಬರ ಹೆಸರು ಸೂಚಿಸಿ ಇವರ ಕಡೆಯಿಂದ ನೆರವೇರಿ ಭಿನ್ನ ಮಾಡು ಎಂದರು. ಈಗ ಅದ್ಭುತವಾದ ದೇವಸ್ಥಾನ ನಿರ್ಮಾಣವಾಗಿದೆ ಎಂದರು.

ನಿಂಬೆಗಿಂ ಹುಳಿಯಿಲ್ಲ, ತುಂಬೆಗಿಂ ಕರಿದಿಲ್ಲ, ನಂಬಿಗೆಯಿಂದಧಿಕ ಗುಣವಿಲ್ಲ, ದೈವವುಂ ಶುಭವಿಂದಿಲ್ಲ ಸರ್ವಜ್ಞ ಎನ್ನುವ ಮಾತಿನಂತೆ ಶಿವನಿಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ದೇವರಿಲ್ಲ, ಆದ ಕಾರಣ ಎಲ್ಲರೂ ನಂಬಿಕೆಯಿಟ್ಟು ಕೆಲಸ ಮಾಡಿ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X