Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಕಸಾಪ’ಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ...

‘ಕಸಾಪ’ಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಪಟ್ಟು : ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಸಮಿತಿ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ3 Aug 2025 11:51 PM IST
share
‘ಕಸಾಪ’ಕ್ಕೆ ಆಡಳಿತಾಧಿಕಾರಿ ನೇಮಕಕ್ಕೆ ಪಟ್ಟು : ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಸಮಿತಿ ನಿರ್ಣಯ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರನ್ನು ಅಮಾನತು ಮಾಡುವುದರ ಜತೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲು ರಾಜ್ಯ ಸರಕಾರ ಮುಂದಾಗಬೇಕು ಎಂಬುದು ಸೇರಿದಂತೆ ಹಲವು ನಿರ್ಣಯಗಳನ್ನು ‘ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಸಮಿತಿ’ ಮಂಡಿಸಿದೆ.

ರವಿವಾರ ನಗರದ ಪುರಭವನದಲ್ಲಿ ಕನ್ನಡ ನಾಡು ನುಡಿ ಜಾಗೃತಿ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ ಸಮಿತಿ ಹಮ್ಮಿಕೊಂಡಿದ್ದ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರ ದುರಾಡಳಿತ ಮತ್ತು ಸರ್ವಾಧಿಕಾರವನ್ನು ಖಂಡಿಸಿ ಜಾಗೃತಿ ಸಮಾವೇಶದಲ್ಲಿ ಕಸಾಪ ಅಧ್ಯಕ್ಷರ ವಿರುದ್ಧ ತನಿಖೆ ಮುಗಿಯುವ ವರೆಗೆ ವಾರ್ಷಿಕ ಸಭೆ ನಡೆಸದಂತೆ ನಿರ್ಬಂಧ ಹೇರಬೇಕು. ಸಹಕಾರ ಇಲಾಖೆ ಆರಂಭಿಸಿರುವ ತನಿಖೆಯನ್ನು ತ್ವರಿತಗೊಳಿಸಬೇಕು. ಕಸಾಪ ದಾಖಲೆಗಳನ್ನು ತಕ್ಷಣವೇ ವಶಕ್ಕೆ ಪಡೆಯಬೇಕು. ಆರೋಪಗಳ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಸೇರಿದಂತೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಬಳಿಕ, ಹಿರಿಯ ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಹಂಪ ನಾಗರಾಜಯ್ಯ, ಡಾ.ಬಂಜಗೆರೆ ಜಯಪ್ರಕಾಶ್, ಬಿ.ಜಯಪ್ರಕಾಶ್ ಗೌಡ, ಮೀರಾ ಶಿವಲಿಂಗಯ್ಯ, ಡಾ.ವಸುಂಧರಾ ಭೂಪತಿ, ದಲಿತ ಮುಖಂಡ ಮಾವಳ್ಳಿ ಶಂಕರ್, ವಿಚಾರವಾದಿ ಕೆ.ಎಸ್.ವಿಮಲಾ, ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಪರ ಸಂಘಟನೆಯ ಹೋರಾಟಗಾರರಾದ ಸಾ.ರಾ.ಗೋವಿಂದು, ಜಯಪ್ರಕಾಶ್ ಗೌಡ, ಶಿವರಾಮೇಗೌಡ, ಸಿ.ಕೆ.ರಾಮೇಗೌಡ ಸೇರಿದಂತೆ ಸಮಿತಿಯ ಎಲ್ಲ ಸಂಚಾಲಕರು ಸರಕಾರಕ್ಕೆ ಕಳುಹಿಸುವ ನಿರ್ಣಯಕ್ಕೆ ಸಹಿ ಹಾಕಿದರು.

ಇದಕ್ಕೂ ಮೊದಲು ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ್ತಿ ಮೀನಾಕ್ಷಿ ಬಾಳಿ, ಕಸಾಪ ಅಧ್ಯಕ್ಷ ಮಹೇಶ್ ಜೋಶಿಯ ವರ್ತನೆಯ ಹಿಂದೆ ರಾಜಕೀಯ ಷಡ್ಯಂತ್ರ ಹಾಗೂ ಜನವಿರೋಧಿ ಆರೆಸ್ಸೆಸ್ ಕೈವಾಡ ಇದೆ ಎಂದು ಆಪಾದಿಸಿದರು.

2000ನೆ ಇಸವಿಯ ನಂತರ ಸಾಹಿತ್ಯ ಪರಿಷತ್ತು ಸಾಹಿತಿಗಳ, ಸೂಕ್ಷ್ಮ ಸಂವೇದನೆಯುಳ್ಳವರ ಕೈಯಲ್ಲಿ ಉಳಿದಿಲ್ಲ. ಬಂಡವಾಳಶಾಹಿಗಳ ಕೈಗೆ ಹೋಗಿದೆ. ಇಂತಹ ಸಂದರ್ಭದಲ್ಲಿಯೇ ಪ್ರತಿ ಜಿಲ್ಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತರು ಹಣ ಹಂಚಿ ಜೋಷಿಯನ್ನು ಗೆಲ್ಲಿಸಿದ್ದಾರೆ ಎಂದು ಆರೋಪಿಸಿದರು.

ರೈತ ನಾಯಕಿ ಸುನಂದಾ ಮಾತನಾಡಿ, ಅಸಂಬದ್ಧವಾಗಿ, ಕಾನೂನು ಬಾಹಿರವಾಗಿ ಕಸಾಪದಲ್ಲಿ ಆಗುವ ಬೈಲಾ ತಿದ್ದುಪಡಿ ನಿಲ್ಲಿಸಬೇಕು. ಪರಿಷತ್ತಿನ ಸರ್ವ ಸದಸ್ಯರು ಬೈಲಾ ತಿದ್ದುಪಡಿ ವಿರುದ್ಧ ಗಟ್ಟಿಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.

ಮಾದರಿ ಕನ್ನಡ ಸಾಹಿತ್ಯ ಪರಿಷತ್ತಿನ ಜವಾಬ್ದಾರಿಯನ್ನು ಮುಂದಿನ ಪೀಳಿಗೆಗೆ ಕಲ್ಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಹಾಗಾಗಿ ಕಸಾಪ ಸಿದ್ಧಾಂತ ಉಳಿಸಲು ಎಲ್ಲರು ಕಂಕಣ ಬದ್ಧರಾಗಬೇಕು ಎಂದ ಅವರು, ಪರಿಷತ್ತಿನ ಆಶಯ ಉಳಿಸಬೇಕೆಂದು ನಿಂತಾಗ ಯಾವ ನೋಟಿಸ್‍ಗಳಿಗೂ ನಾವು ಹೆದರಲ್ಲ ಎಂದರು.

ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಮಾತನಾಡಿ, ಕಸಾಪ ಅಧ್ಯಕ್ಷರ ದುರಾಡಳಿತ, ಆರ್ಥಿಕ ಅಶಿಸ್ತು ಹಾಗೂ ಭ್ರಷ್ಟಾಚಾರದ ವಿರುದ್ಧ ತನಿಖೆ ನಡೆಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿಗಳು 6 ಜನ ಉನ್ನತಾಧಿಕಾರಿಗಳ ತನಿಖಾ ತಂಡವನ್ನು ನೇಮಕ ಮಾಡಿ ಆದೇಶಿಸಿದೆ. ಆದರೆ ಈ ತನಿಖಾ ತಂಡಕ್ಕೆ ಮಾರ್ಗದರ್ಶನ ಮಾಡಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಪ್ರಮುಖ ನಿರ್ಣಯಗಳೇನು?

* ಕಸಾಪ ಅಧ್ಯಕ್ಷರ ತನಿಖೆ ಮುಕ್ತಾಯದ ವರೆಗೂ ವಾರ್ಷಿಕ ಸಭೆ ನಡೆಸದಂತೆ ನಿರ್ಬಂಧ ಹೇರಬೇಕು.

* ತಕ್ಷಣವೇ ಕಸಾಪ ದಾಖಲೆಗಳನ್ನು ವಶಕ್ಕೆ ಪಡೆಯಬೇಕು.

* ಕಸಾಪ ಅಧ್ಯಕ್ಷರ ಮೇಲಿನ ಆರೋಪಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು.

* ಸಹಕಾರ ಇಲಾಖೆಯಿಂದ ಆರಂಭವಾಗಿರುವ ತನಿಖೆಯನ್ನು ತ್ವರಿತಗೊಳಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X