ಕರ್ನಾಟಕ ಬಂದ್ | ಸ್ಯಾಂಡಲ್ವುಡ್ ನಟ-ನಟಿಯರಿಂದ ಪ್ರತಿಭಟನೆ
ಶಿವರಾಜ್ ಕುಮಾರ್, ದರ್ಶನ್, ಉಮಾಶ್ರೀ ಸೇರಿ ಹಲವರು ಭಾಗಿ

ಫೋಟೊ - twitter.com
ಬೆಂಗಳೂರು: ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ.
ಸ್ಯಾಂಡಲ್ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸಾಥ್ ನೀಡಿದರು.
ಬೆಂಗಳೂರಿನ ಕರ್ನಾಟಕದ ಫಿಲ್ಮ್ ಚೇಂಬರ್ ಸಮೀಪ ಇರುವ ಗುರುರಾಜ್ ಕಲ್ಯಾಣ ಮಂಟಪದಲ್ಲಿ ಚಿತ್ರರಂಗ ಪ್ರತಿಭಟನೆ ಆಯೋಜನೆ ಮಾಡಲಾಗಿದೆ. ಚಿತ್ರರಂಗದ ಹಲವು ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗಿ ಆಗಿದ್ದಾರೆ. ಉಪೇಂದ್ರ, ಶಿವರಾಜ್ಕುಮಾರ್, ಸೃಜನ್ ಲೋಕೇಶ್, ಗಿರಿಜಾ ಲೋಕೇಶ್, ಉಮಾಶ್ರೀ ಮೊದಲಾದವರು ಭಾಗಿ ಆಗಿದ್ದರು. ಈ ವೇಳೆ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.
Next Story





