Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಆರೋಗ್ಯ ಸಂಜೀವಿನಿ’: ಸರಕಾರಿ ನೌಕರರಿಗೆ...

‘ಆರೋಗ್ಯ ಸಂಜೀವಿನಿ’: ಸರಕಾರಿ ನೌಕರರಿಗೆ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕಲ್ಪಿಸಿ ರಾಜ್ಯ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Jun 2026 12:14 AM IST
share
‘ಆರೋಗ್ಯ ಸಂಜೀವಿನಿ’: ಸರಕಾರಿ ನೌಕರರಿಗೆ ವೈದ್ಯಕೀಯ ತಪಾಸಣೆ ಸೌಲಭ್ಯವನ್ನು ಕಲ್ಪಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಟ್ಟ 40 ವರ್ಷ ಮೀರಿದ ಸರಕಾರಿ ನೌಕರರಿಗೆ ‘ವಾರ್ಷಿಕ ವೈದ್ಯಕೀಯ ತಪಾಸಣೆ' ಸೌಲಭ್ಯವನ್ನು ಕಲ್ಪಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಆಧುನಿಕ ಜೀವನ ಶೈಲಿಯು ಒತ್ತಡದಿಂದ ಕೂಡಿರುವುದರಿಂದ ಆರೋಗ್ಯಕರ ಜೀವನ ನಡೆಸಲು ದೇಹಕ್ಕೆ ಬೇಕಾದ ವ್ಯಾಯಾಮದ ಕೊರತೆ ಇರುವುದರಿಂದ 40 ವರ್ಷ ವಯಸ್ಸು ಮೀರಿದ ಸರಕಾರಿ ನೌಕರರು ಸಾಮಾನ್ಯವಾಗಿ ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗಳಿಂದ ಬಳಲುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿವೆ. ಇಂತಹ ಕಾಯಿಲೆಗಳಿಗೆ ತುತ್ತಾಗಿರುವ ಅರಿವು ಇಲ್ಲದೇ ನೌಕರರು ಹೃದಯಾಘಾತ, ಪಾಶ್ರ್ವವಾಯು ಮುಂತಾದ ರೋಗಗಳಿಗೆ ಒಳಗಾಗುತ್ತಿದ್ದಾರೆ.

ಸೂಕ್ತ ಸಮಯದಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಒಮ್ಮೆ ಕೆಲವು ಅಗತ್ಯ ಸಾಮಾನ್ಯ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಿಕೊಂಡಲ್ಲಿ ಆರಂಭದ ಹಂತದಲ್ಲಿ ಅವಶ್ಯಕ ಔಷದೋಪಚಾರಗಳನ್ನು ಪಡೆದು ಇಂತಹ ಗಂಭೀರ, ಅಪಾಯಕರ ಅನಾರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಆರೋಗ್ಯವನ್ನು ರಕ್ಷಿಸಿಕೊಳ್ಳಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಸರಕಾರಿ ನೌಕರರಿಗೆ ಒದಗಿಸಲಾಗಿರುವ ‘ಮುನ್ನೆಚ್ಚರಿಕೆ ಆರೋಗ್ಯ ತಪಾಸಣೆ’ನ ಮಾದರಿಯಲ್ಲಿ ರಾಜ್ಯ ಸರಕಾರಿ ನೌಕರರಿಗೂ ‘ವಾರ್ಷಿಕ ವೈದ್ಯಕೀಯ ತಪಾಸಣೆ’ ಸೌಲಭ್ಯವನ್ನು ಒದಗಿಸುವ ಬಗ್ಗೆ ಆರೋಗ್ಯ ಇಲಾಖೆಯ ಅಭಿಪ್ರಾಯ ಪಡೆದು ಪರಿಶೀಲಿಸಿ, ಕೆಎಎಸ್‍ಎಸ್ ಯೋಜನೆಯಡಿ ನೋಂದಣಿಯಾಗಿರುವ ಸರಕಾರಿ ನೌಕರರಿಗೆ ವಾರ್ಷಿಕ ಆರೋಗ್ಯ ತಪಾಸಣೆಯನ್ನು ಒದಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸೌಲಭ್ಯವನ್ನು ಪಡೆಯಲು ಕೆಲವು ಷರತ್ತುಗಳನ್ನು ಸೂಚಿಸಲಾಗಿದ್ದು, ಸ್ವ-ಇಚ್ಛೆಯಿಂದ ಯೋಜನೆಗೆ ಒಳಪಡದ ಸರಕಾರಿ ನೌಕರರು ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ. ವಾರ್ಷಿಕ ಆರೋಗ್ಯ ತಪಾಸಣೆ ಸರಕಾರಿ ನೌಕರರಿಗೆ ಮಾತ್ರ ಅನ್ವಯವಾಗುತ್ತದೆ. ಸರಕಾರಿ ನೌಕರರ ಕುಟುಂಬದ ಅವಲಂಬಿತ ಸದಸ್ಯರು ಈ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಈ ತಪಾಸಣೆಗಳನ್ನು ಸರಕಾರಿ ಆಸ್ಪತ್ರೆ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಪಡೆಯಬಹುದು. ಈ ತಪಾಸಣೆಗಳನ್ನು ಒಂದೇ ಸಂಸ್ಥೆಯಲ್ಲಿ ಪಡೆದು ಒಂದೇ ಕ್ಲೇಮಿನಲ್ಲಿ ಅವುಗಳನ್ನು ಇತ್ಯರ್ಥಪಡಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ನಿಗದಿಪಡಿಸಿರುವ ವಾರ್ಷಿಕ ವೈದ್ಯಕೀಯ ತಪಾಸಣೆಗಳಿಗೆ ಪುರುಷ ನೌಕರರಿಗೆ 2ಸಾವಿರ ರೂ., ಮಹಿಳಾ ನೌಕರರಿಗೆ 2,200ರೂ.ಸಂಚಿತ ದರಗಳನ್ನು ನಿಗದಿಪಡಿಸಲಾಗಿದೆ. ವಿವಿಧ ತಪಾಸಣೆಗಳಿಗೆ ಸರಕಾರ ನಿಗದಿಪಡಿಸಿದ ಗರಿಷ್ಠ ಮೊತ್ತದ ಮಿತಿಗೊಳಪಟ್ಟು ಮಂಜೂರಾತಿ ನೀಡಬೇಕು. ವಾರ್ಷಿಕ ವೈದ್ಯಕೀಯ ತಪಾಸಣೆಗಳನ್ನು ಕೆಎಎಸ್‍ಎಸ್ ಯೋಜನೆಯಡಿ ಅಳವಡಿಸಿಕೊಳ್ಳಲು ಹಾಗೂ ಈ ಸಂಬಂಧ ನೋಂದಾಯಿತ ಖಾಸಗಿ ಆಸ್ಪತ್ರೆಗಳೊಂದಿಗೆ ಸೂಕ್ತ ಒಡಂಬಡಿಕೆಯನ್ನು ಮಾಡಿಕೊಳ್ಳಲು ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಪ ಕಾರ್ಯದರ್ಶಿ ಎಸ್.ಆರ್.ಶಿವಶಂಕರ್ ಆದೇಶದಲ್ಲಿ ಸೂಚಿಸಿದ್ದಾರೆ.

Tags

Arogya SanjeeviniKarnataka Govt
share
ವಾರ್ತಾಭಾರತಿ
ವಾರ್ತಾಭಾರತಿ
Next Story
X