Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶ...

ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶ ಮರುಕಳಿಸಲಿದೆ: ಸಚಿವ ಝಮೀರ್ ಅಹ್ಮದ್ ಖಾನ್ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ11 Nov 2023 10:33 PM IST
share
ತೆಲಂಗಾಣದಲ್ಲಿ ಕರ್ನಾಟಕದ ಫಲಿತಾಂಶ ಮರುಕಳಿಸಲಿದೆ: ಸಚಿವ ಝಮೀರ್ ಅಹ್ಮದ್ ಖಾನ್ ವಿಶ್ವಾಸ

ಹೈದರಾಬಾದ್, ನ.11: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದ ಫಲಿತಾಂಶವೆ ಮರುಕಳಿಸಲಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶನಿವಾರ ಹೈದರಾಬಾದ್‍ನ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಹತ್ತು ವರ್ಷಗಳ ಕೆಸಿಆರ್ ಆಡಳಿತದಿಂದ ಜನ ಬೇಸರಗೊಂಡಿದ್ದು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕರ್ನಾಟಕದ ಮಾದರಿಯಲ್ಲೆ ಇಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ತೆಲಂಗಾಣದಲ್ಲಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಜಾತ್ಯತೀತ ಮನೋಭಾವದ ಎಲ್ಲ ವರ್ಗ ಕಾಂಗ್ರೆಸ್ ಪರ ವಿಶ್ವಾಸ ಹೊಂದಿದೆ. ಕೆಸಿಆರ್ ಕೊಟ್ಟ ಭರವಸೆ ಈಡೇರಿಸಿಲ್ಲ, ಆಡಳಿತ ವಿರೋಧಿ ಅಲೆ ತೀವ್ರವಾಗಿದೆ. ಕರ್ನಾಟಕದಲ್ಲಿ ನಾವು ಕೊಟ್ಟ ಗ್ಯಾರಂಟಿ ಈಡೇರಿಸಿದ್ದೇವೆ. ಕೋಟ್ಯಂತರ ಕುಟುಂಬಗಳಿಗೆ ನಮ್ಮ ಗ್ಯಾರಂಟಿ ಯೋಜನೆಯ ಫಲ ದೊರಕುತ್ತಿದೆ. ತೆಲಂಗಾಣದಲ್ಲೂ ನಾವು ಆರು ಗ್ಯಾರಂಟಿ ನೀಡಿದ್ದು ಅದನ್ನು ಜಾರಿ ಮಾಡಿಯೆ ತೀರುತ್ತೇವೆ ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಸಮುದಾಯಕ್ಕೆ ಕೊಟ್ಟ ಮಾತು ಉಳಿಸಿಕೊಂಡಿದೆ. ಸ್ಪೀಕರ್, ಎರಡು ಸಚಿವ ಸ್ಥಾನ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ, ವಿಧಾನಪರಿಷತ್ ಮುಖ್ಯ ಸಚೇತಕ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡಿದೆ. ಇದು ಕಾಂಗ್ರೆಸ್ ನ ಬದ್ಧತೆ ಆಗಿದ್ದು ತೆಲಂಗಾಣದಲ್ಲೂ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಹೆಚ್ಚು ಆದ್ಯತೆ ಸಿಗಲಿದೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಕೆ.ಸಿ.ಆರ್ ಐದು ವರ್ಷ ತೋಟದ ಮನೆಯಲ್ಲಿದ್ದು ಇದೀಗ ಚುನಾವಣೆ ಬಂತು ಎಂದು ಹೊರಗೆ ಬಂದಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಿದ್ದ ಶೇ.22 ರಷ್ಟು ಮೀಸಲಾತಿ ವಾಗ್ದಾನ ಈಡೇರಿಸಿಲ್ಲ. ಶೇ.16 ರಿಂದ 17 ರಷ್ಟು ಜನಸಂಖ್ಯೆ ಹೊಂದಿರುವ ಅಲ್ಪಸಂಖ್ಯಾತ ಸಮುದಾಯಕ್ಕೆ ಕೇವಲ 2200 ಕೋಟಿ ರೂ. ಅನುದಾನ ಘೋಷಿಸಿ 800 ರಿಂದ 1000 ಕೋಟಿ ರೂ.ಮಾತ್ರ ಬಿಡುಗಡೆ ಮಾಡಿದ್ದಾರೆ. ಇದು ಮುಸ್ಲಿಂ ಸಮುದಾಯದ ಬಗ್ಗೆ ಅವರಿಗೆ ಇರುವ ಕಾಳಜಿ ಎಂದು ಅವರು ಲೇವಡಿ ಮಾಡಿದರು.

ನಮ್ಮ ಸರಕಾರ ಬಂದರೆ ಐದು ಸಾವಿರ ಕೋಟಿ ರೂ.ಅನುದಾನ, ಬಡ ಮುಸ್ಲಿಂ ಕುಟುಂಬಕ್ಕೆ ಮನೆ ಕಟ್ಟಿಕೊಳ್ಳಲು ಐದು ಲಕ್ಷ ರೂ.ನೆರವು, ಉನ್ನತ ವ್ಯಾಸಂಗ ಮಾಡುವ ಸಮುದಾಯದ ವಿದ್ಯಾರ್ಥಿಗಳಿಗೆ ಐದು ಲಕ್ಷ ರೂ.ವಿದ್ಯಾರ್ಥಿ ವೇತನ, ಇಮಾಮ್, ಮುಅದ್ದೀನ್‍ರಿಗೆ ಮಾಸಿಕ 12 ಸಾವಿರ ರೂ.ಗೌರವ ಧನ, 2004 ರಿಂದ ಖಾಲಿ ಉಳಿದಿರುವ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದೇವೆ ಅದರಂತೆ ನಡೆಯುತ್ತೇವೆ ಎಂದು ಅವರು ಹೇಳಿದರು.

ಕೆ.ಸಿ.ಆರ್ ಅವರು ಅಲ್ಪಸಂಖ್ಯಾತರ ಸಮುದಾಯದ ಕಲ್ಯಾಣಕ್ಕಾಗಿ ಹತ್ತು ವರ್ಷಗಳಿಂದ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಶ್ವೇತ ಪತ್ರ ಹೊರಡಿಸಲಿ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಸಮುದಾಯದ ಕಲ್ಯಾಣಕ್ಕೆ ಹೆಚ್ಚು ಒತ್ತು ನೀಡಿದೆ. ಅದೇ ರೀತಿ ತೆಲಂಗಾಣದಲ್ಲೂ ಕಾರ್ಯಕ್ರಮ ರೂಪಿಸುವ ಗುರಿ ಹೊಂದಿದ್ದೇವೆ ಎಂದು ಝಮೀರ್ ಅಹ್ಮದ್ ಹೇಳಿದರು.

ತೆಲಂಗಾಣದಲ್ಲಿ ಬಿಆರ್‍ಎಸ್, ಬಿಜೆಪಿ, ಎಂಐಎಂ ಎಲ್ಲವೂ ಒಂದೇ. ಕಾಂಗ್ರೆಸ್ ಮಾತ್ರ ಅಪ್ಪಟ ಜಾತ್ಯತೀತವಾದಿ ಪಕ್ಷ ಎಂದು ಅವರು ತಿಳಿಸಿದರು. ಗೋಷ್ಠಿಯಲ್ಲಿ ಎಐಸಿಸಿ ತೆಲಂಗಾಣ ಉಸ್ತುವಾರಿ ಅಜಯ್ ಕುಮಾರ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಕಾಂಗ್ರೆಸ್ ಮಾಧ್ಯಮ ಘಟಕದ ಕಮಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X