Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಳಿಗಾಲದ ಅಧಿವೇಶನ ಅಂತ್ಯ: ಸರ್ಕಾರವನ್ನು...

ಚಳಿಗಾಲದ ಅಧಿವೇಶನ ಅಂತ್ಯ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ವಿಫಲ

►ಮೌನಕ್ಕೆ ಶರಣಾದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ►ಬಡ್ಡಿ ಮನ್ನಾ, ಕೈಗಾರಿಕೆ ಕ್ಲಸ್ಟರ್ ಘೋಷಣೆ ಮಾಡಿ ಸದನದಲ್ಲಿ ಸದ್ದು ಮಾಡಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Dec 2023 12:49 PM IST
share
ಚಳಿಗಾಲದ ಅಧಿವೇಶನ ಅಂತ್ಯ: ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ವಿಫಲ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದ್ದು, ಹಲವು ವಿಧೇಯಕಗಳಿಗೆ ಅಂಗೀಕಾರ ನೀಡಲಾಗಿದೆ. ಆದರೆ, ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದು ಬಿಜೆಪಿ ಹಾಗೂ ಜೆಡಿಎಸ್‌ ಹಾಕಿಕೊಂಡಿದ್ದ ಯೋಜನೆಗಳೆಲ್ಲಾ ವಿಫಲವಾಗಿದೆ.

ಹೊಸದಾಗಿ ವಿಪಕ್ಷ ನಾಯಕ ಸ್ಥಾನ ಅಲಂಕರಿಸಿಕೊಂಡಿದ್ದ ಆರ್‌ ಅಶೋಕ್‌ ಅವರು ಅಧಿವೇಶನಕ್ಕೂ ಮುನ್ನ, ʼಸರ್ಕಾರಕ್ಕೆ ಛಾಟಿ ಏಟು ಕೊಡುತ್ತೇವೆʼ, ʼಚಳಿಜ್ವರ ಬಿಡಿಸುತ್ತೇವೆʼ ಎಂದೆಲ್ಲಾ ಹೇಳಿಕೊಂಡಿದ್ದರಾದರೂ ವಿಪಕ್ಷ ನಾಯಕನಾಗಿ ಸರ್ಕಾರವನ್ನು ಪೇಚಿಗೆ ಸಿಲುಕಿಸುವ ಬದಲು ಸ್ವಪಕ್ಷದ ಭಿನ್ನಮತವನ್ನು ನಿಯಂತ್ರಣಕ್ಕೆ ತರುವಲ್ಲಿಯೇ ಹೈರಾಣಾಗಿದ್ದಾರೆ.

ಅಧಿವೇಶನಕ್ಕೂ ಮುನ್ನ ಸರ್ಕಾರದ ವಿರುದ್ಧ ಪೆನ್‌ಡ್ರೈವ್‌ ಪುರಾವೆ ಸೇರಿದಂತೆ ಹಲವಾರು ಆರೋಪಗಳನ್ನು ಮಾಡಿದ್ದ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಕೂಡಾ ನಿರೀಕ್ಷಿತ ಮಟ್ಟದಲ್ಲಿ ಸದನದಲ್ಲಿ ಸದ್ದು ಮಾಡಿಲ್ಲ.

ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪಿಸಲು ಜೆಡಿಎಸ್‌ ಹಾಗೂ ಬಿಜೆಪಿ ಒಂದಾಗುತ್ತಿದ್ದಂತೆ ಅವನ್ನು ಎದುರಿಸಲು ಸಕಲ ಸಜ್ಜಾಗಿದ್ದ ಸಿದ್ದರಾಮಯ್ಯ ಸರ್ಕಾರ ಉತ್ತರ ಕರ್ನಾಟಕಕ್ಕೆ ಹಲವಾರು ಘೋಷಣೆ ಮೂಲಕ ವಿಪಕ್ಷಗಳ ಯೋಜನೆಯನ್ನು ತಲೆ ಕೆಳಗೆ ಮಾಡಿದೆ.

ಸದನದಲ್ಲಿ ಸರ್ಕಾರದ ಲೋಪದೋಷ ಎತ್ತಿ ಹಿಡಿಯುವ ಬದಲು ತಮ್ಮ ಪಕ್ಷದ ನಾಯಕತ್ವ, ಆಂತರಿಕ‌‌ ಗೊಂದಲ, ಹೊಂದಾಣಿಕೆ‌ ಕೊರತೆ, ಪ್ರಬುದ್ದತೆ ಪ್ರದರ್ಶನದಲ್ಲಿ ಬಿಜೆಪಿ ಎಡವಿದ್ದು, ವಿಪಕ್ಷ ನಾಯಕ ಆರ್‌ ಅಶೋಕ್‌ ಬಗ್ಗೆ ಸ್ವಪಕ್ಷ ನಾಯಕರಲ್ಲಿ ಇರುವ ಅಸಮಾಧಾನವೇ ಬಿಜೆಪಿಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದೆ.

ವರ್ಗಾವಣೆ ದಂಧೆ, ಗ್ಯಾರಂಟಿ ಗೊಂದಲ, ಯತೀಂದ್ರ ಪ್ರಕರಣ, ಚೆಲುವರಾಯಸ್ವಾಮಿ ಕೆರೆ ಒತ್ತುವರಿ ಪ್ರಕರಣ, ಬರ ಪರಿಹಾರ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿ ಸರ್ಕಾರವನ್ನು ಪೇಚಿಗೆ ಸಿಲುಕಿಸುವ ಅವಕಾಶ ವಿಪಕ್ಷಗಳಿಗೆ ದಟ್ಟವಾಗಿ ಇತ್ತಾದರೂ, ಸರ್ಕಾರದ ವಿರುದ್ಧ ಹೋರಾಟ ಮಾಡುವ ಬದಲು ಸ್ವಪಕ್ಷದ‌ ಗೊಂದಲ‌ ಬಗೆಹರಿಸುವುದೇ ಬಿಜೆಪಿಗೆ ದೊಡ್ಡ ಸವಾಲಾಗಿ ಮಾರ್ಪಟ್ಟಿತ್ತು.

ಅಧಿವೇಶನದಲ್ಲಿ ಬಿಜೆಪಿಯ ಪ್ರಶ್ನೆಗಳಿಗಿಂತ ಬಿಜೆಪಿಯ ಆಂತರಿಕ ಕಚ್ಚಾಟ ಬಹಿರಂಗವಾದದ್ದೇ ದೊಡ್ಡ ಸುದ್ದಿಯಾಗಿತ್ತು.

ಇನ್ನು, ಹೆಚ್‌ ಡಿ ಕುಮಾರಸ್ವಾಮಿ ಅವರು ಕೂಡಾ ಸದನದಲ್ಲಿ ಮೌನವಾದ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಭ್ರಷ್ಟಾಚಾರದ ಬಗ್ಗೆ ಧ್ವನಿ, ರೈತರ ಸಮಸ್ಯೆ ಬಗ್ಗೆ ಬೆಳಕು ಚೆಲ್ಲುತ್ತೇನೆಂದು ಅಬ್ಬರಿಸಿದ್ದ ಹೆಚ್‌ ಡಿ ಕುಮಾರಸ್ವಾಮಿ ಅವರು ನಾಲ್ಕೈದು ದಿನ ಕಲಾಪಕ್ಕೆ ಆಗಮಿಸಿದರಾದರೂ ಮೌನಕ್ಕೆ ಶರಣಾಗಿ ಅಚ್ಚರಿ ಹುಟ್ಟಿಸಿದ್ದಾರೆ.

ಡಿಕೆಶಿ ಸಿಬಿಐ ಪ್ರಕರಣ ವಾಪಸ್, ಝಮೀರ್ ಅಹಮದ್‌ ಖಾನ್ ವಿಚಾರ, ಗ್ಯಾರಂಟಿ ಜಾರಿ ವೈಫಲ್ಯ, ಅನ್ನಭಾಗ್ಯ ಅಕ್ಕಿ ನೀಡದ‌ ವಿಚಾರ, ಗೃಹ ಲಕ್ಷ್ಮೀ ಜಾರಿಗೆ ತಾಂತ್ರಿಕ ಸಮಸ್ಯೆ, ಖಾಲಿ‌ಹುದ್ದೆಗಳ ಭರ್ತಿ ವಿಳಂಬ, ನೀರಾವರಿ ಯೋಜನೆಗಳು, ಸಚಿವರ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ಹಳಿ ತಪ್ಪಿದ ಸಂಬಂಧ ಸೇರಿದಂತೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಹಲವು ಪ್ರಮುಖ‌ ವಿಷಯಗಳು ಇತ್ತಾದರೂ, ಸದನವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ವಿಪಕ್ಷಗಳು ವಿಫಲವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X