Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಲಾರ | ಕೂಲಿ ಕೇಳಿದ್ದಕ್ಕೆ ದಲಿತ...

ಕೋಲಾರ | ಕೂಲಿ ಕೇಳಿದ್ದಕ್ಕೆ ದಲಿತ ಯುವಕನಿಗೆ ಜಾತಿ ನಿಂದನೆ, ಮಾರಣಾಂತಿಕ ಹಲ್ಲೆ ಪ್ರಕರಣ: ಇಬ್ಬರ ಬಂಧನ, ಓರ್ವ ಪರಾರಿ

ವಾರ್ತಾಭಾರತಿವಾರ್ತಾಭಾರತಿ20 Oct 2023 8:29 PM IST
share
ಕೋಲಾರ | ಕೂಲಿ ಕೇಳಿದ್ದಕ್ಕೆ ದಲಿತ ಯುವಕನಿಗೆ ಜಾತಿ ನಿಂದನೆ, ಮಾರಣಾಂತಿಕ ಹಲ್ಲೆ ಪ್ರಕರಣ: ಇಬ್ಬರ ಬಂಧನ, ಓರ್ವ ಪರಾರಿ

ಕೋಲಾರ, ಅ.20: ಗಾರೆ ಕೆಲಸ ಮಾಡಿ ಕೂಲಿ ಹಣ ಕೇಳಿದಕ್ಕೆ ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ವರದಿಯಾಗಿದೆ.

ಹಲ್ಲೆಗೊಳಗಾದವನನ್ನು ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೊಡ್ಡವಲಗಮಾದಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಅಮರೇಶ್ ಎಂದು ತಿಳಿದುಬಂದಿದೆ. ಈತನನ್ನು ಬಂಗಾರಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಹಲ್ಲೆಮಾಡಿದ ಆರೋಪಿಗಳನ್ನು ದೊಡ್ಡವಲಗಮಾದಿ ಗ್ರಾಮದ ಸವರ್ಣೀಯ ರಜಪೂತ ಸಮುದಾಯದ ಜಗದೀಶ್ ಸಿಂಗ್, ರವೀಂದ್ರ ಸಿಂಗ್ ಮತ್ತು ಸತೀಶ್ ಸಿಂಗ್ ಎಂದು ಗುರುತಿಸಲಾಗಿದೆ.

ಜಗದೀಶ್ ಸಿಂಗ್ ಎಂಬಾತ ತನ್ನ ಮನೆ ನಿರ್ಮಾಣದ ಕೆಲಸಕ್ಕೆ ಅಮರೇಶ್‌ನನ್ನು ಕರೆಸಿ ಕೆಲಸ ಮಾಡಿಸಿಕೊಂಡ ನಂತರ ಕೂಲಿ ಕೊಟ್ಟಿರಲಿಲ್ಲ ಎನ್ನಲಾಗಿದೆ. ಅ.17ರಂದು ಗ್ರಾಮದಲ್ಲಿ ಕೂಲಿ ಹಣವನ್ನು ಕೊಡಿ ಎಂದು ಕೇಳಿದಕ್ಕೆ, ಜಾತಿ ನಿಂದನೆ ಮಾಡಿದಲ್ಲದೇ ಬೆದರಿಕೆ ಹಾಕಿದಲ್ಲದೇ ಜಗದೀಶ್ ಜೊತೆಯಲ್ಲಿದ್ದ ರವೀಂದ್ರ ಸಿಂಗ್ ಮತ್ತು ಸತೀಶ್ ಸಿಂಗ್ ಸೇರಿ ಮೂವರೂ ಕೈಕಾಲುಗಳನ್ನು ಕಟ್ಟಿ ಹಣ ಕೇಳುತ್ತೀಯಾ ಇನ್ನೊಮ್ಮೆ ಕೇಳಿದರೆ ಕಳ್ಳತನ ಮಾಡಿದ್ದೀಯ ಎಂದು ದೂರು ನೀಡುವುದಾಗಿ ಹೆದರಿಸಿ, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅಮರೇಶ್ ಕುಟುಂಬದವರು ಆರೋಪಿಸಿದ್ದಾರೆ.

ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ವಿಷಯ ತಿಳಿದು ಗ್ರಾಮ ಪಂಚಾಯತ್ ಸದಸ್ಯ ಮುನಿರಾಜು, ರಾಮಕೃಷ್ಣ, ವೆಂಕಟೇಶ್, ಉಮೇಶ್ ಮತ್ತಿತರರು ಸ್ಥಳಕ್ಕೆ ದಾವಿಸಿ, ಹಲ್ಲೆಗೊಳಗಾಗಿ ತೀವ್ರ ನಿತ್ರಾಣಗೊಂಡಿದ್ದ ಗಾಯಾಳುವನ್ನು ಬಂಗಾರಪೇಟೆ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಎಂ.ಎಲ್.ಸಿ.ಯಾದ ಕೂಡಲೇ ಬಂಗಾರಪೇಟೆ ಪೊಲೀಸರು ಆಗಮಿಸಿ ಗಾಯಾಳುವಿನ ಹೇಳಿಕೆ ಪಡೆದು, ಪರಿಶಿಷ್ಟ ಜಾತಿ, ಪಂಗಡಗಳ ಮೇಲೆ ದೌರ್ಜನ್ಯ ಕಾಯ್ದೆ-2015 ಅಡಿ ಪ್ರಕರಣ ದಾಖಲಿಸಿದ್ದಾರೆ.

ಪ್ರತಿ ದೂರು ದಾಖಲು

ಇತ್ತ ಅಟ್ರಾಸಿಟಿ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಆರೋಪಿಗಳ ಕಡೆಯಿಂದ ಪ್ರತಿ ದೂರು ದಾಖಲಿಸಿದ್ದಾರೆ. ಅಟ್ರಾಸಿಟಿ ಪ್ರಕರಣದಲ್ಲಿ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂ‘ನಕ್ಕೆ ಒಪ್ಪಿಸಿದ್ದಾರೆ ಇನ್ನೋರ್ವ ತಲೆ ಮರೆಸಿಕೊಂಡಿದ್ದಾನೆ. ತನಿಖಾಧಿಕಾರಿ ಡಿವೈಎಸ್ಪಿ ಗ್ರಾಮಕ್ಕೆ ‘ೇಟಿ ನೀಡಿ ಮಹಜರು ನಡೆಸಿದ್ದಾರೆ.

ದೊಡ್ಡವಲಗಮಾದಿ ಗ್ರಾಮದ ಇತಿಹಾಸದಲ್ಲೇ ಇದೇ ಮೊದಲ ಜಾತಿ ದೌರ್ಜನ್ಯ ಪ್ರಕರಣವೆಂದು ಎನ್ನಲಾಗಿದೆ.

ಅ.25ರಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ

ಘಟನೆ ನಡೆದು ಮೂರು ದಿನಗಳಾದರೂ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ, ತಹಶೀಲ್ದಾರ್, ಜಿಲ್ಲಾ ಜಂಟಿ ನಿರ್ದೇಶಕರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಯಾರೊಬ್ಬರೂ ಹಲ್ಲೆಗೊಳಗಾದ ಸಂತ್ರಸ್ತ ಮತ್ತು ಅವರ ಕುಟುಂಬ ವರ್ಗದವರನ್ನು ‘ೇಟಿ ಮಾಡಿ ಸಾಂತ್ವನ ಹೇಳಿ ಧೈರ್ಯ ತುಂಬುವ ಕೆಲಸ ಮಾಡದೆ, ಸಂತ್ರಸ್ತರಿಗೆ ಪರಿಹಾರವನ್ನೂ ನೀಡದೆ ನಿರ್ಲಕ್ಷ್ಯ ತೋರಿದ್ದಾರೆ. ಕನಿಷ್ಠ ಗ್ರಾಮದಲ್ಲಿ ‘ೈರ್ಯ ತುಂಬುವ ‘ರವಸೆಯ ಸ‘ೆಯನ್ನೂ ನಡೆಸಿಲ್ಲ. ತಾಲೂಕು ಆಡಳಿತದ ಈ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅ.25ರಂದು ದಲಿತ ಸಂಘಟನೆಗಳಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಮತ್ತು ಜನಾಧಿಕಾರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹೂವರಸನಹಳ್ಳಿ ರಾಜಪ್ಪ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ಗ್ರಾಮದಲ್ಲಿ ಸುಮಾರು 20 ಸಮುದಾಯಗಳು ಇದ್ದು, ಎಲ್ಲ ಸಮುದಾಯಗಳು ಪರಸ್ಪರ ಒಗ್ಗಟ್ಟಿನಿಂದ ಸಹಬಾಳ್ವೆ ನಡೆಸಿಕೊಂಡು ಬಂದಿದ್ದೇವೆ. ಗ್ರಾಮದ ಇತಿಹಾಸದಲ್ಲಿ ಇಲ್ಲಿಯ ತನಕ ಒಂದೇ ಒಂದು ಅಟ್ರಾಸಿಟಿ ಪ್ರಕರಣ ದಾಖಲಾಗಿಲ್ಲ. ಜಾತಿ ದೌರ್ಜನ್ಯಗಳೂ ಯಾವುದೂ ನಡೆದಿಲ್ಲ. ಇದೇ ಮೊದಲ ಬಾರಿಗೆ ಜಾತಿ ಹೆಸರಿನಲ್ಲಿ ಪ್ರಕರಣ ದಾಖಲಾಗಿರುವುದು ಗ್ರಾಮಸ್ಥರಿಗೆ ಹಾಗೂ ವೈಯಕ್ತಿಕವಾಗಿ ಮುಜಗರ ತಂದಿದೆ. ಗ್ರಾಮದಲ್ಲಿ ಎಲ್ಲ ಸಮುದಾಯಗಳನ್ನು ಒಟ್ಟಿಗೆ ಸೇರಿಸಿ ಮುಂದೆ ಈ ರೀತಿಯ ಘಟನೆಗಳಿಗೆ ಅವಕಾಶವಾಗದಂತೆ ‘ರವಸೆಯನ್ನು ಅಧಿಕಾರಿಗಳು ನೀಡಬೇಕು. ಇದರಿಂದ ಸಣ್ಣ ಸಣ್ಣ ಸಮುದಾಯಗಳಿಗೂ ಸ್ಥೆ‘ರ್ಯ ಬರುತ್ತದೆ.

- ಅಲೀಂಖಾನ್, ಗ್ರಾಮ ಪಂಚಾಯತ್ ಸದಸ್ಯ, ದೊಡ್ಡವಲಗಮಾದಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X