‘ಭೂ ಕಂದಾಯ(2ನೆ ತಿದ್ದುಪಡಿ) ವಿಧೇಯಕ’ | ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚನೆ

ಕೃಷ್ಣ ಬೈರೇಗೌಡ
ಬೆಂಗಳೂರು, ಸೆ.23: 2025ನೆ ಸಾಲಿನ ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ)ವಿಧೇಯಕವನ್ನು ಇತ್ತೀಚೆಗೆ ನಡೆದ ವಿಧಾನಸಭೆಯ ಅಧಿವೇಶನದಲ್ಲಿ ಅನೇಕ ಸದಸ್ಯರ ಕೋರಿಕೆ ಮೇರೆಗೆ ಈ ವಿಧೇಯಕವನ್ನು ಸಮಗ್ರವಾಗಿ ಪರಿಶೀಲಿಸಿ ವರದಿಯನ್ನು ನೀಡಲು ಪರಿಶೀಲನಾ ಸಮಿತಿಗೆ ವಹಿಸಲಾಗಿದೆ.
ಸದನದ ನಿರ್ಣಯದಂತೆ ಈ ವಿಧೇಯಕವನ್ನು ಪರಿಶೀಲಿಸಿ, ವರದಿಯನ್ನು ನೀಡಲು ಸ್ಪೀಕರ್ ಯು.ಟಿ.ಖಾದರ್ ಅವರು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ, ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ವಿಧಾನಸಭೆ ಸದಸ್ಯರಾದ ಎ.ಎಸ್.ಪೊನ್ನಣ್ಣ, ಡಾ. ಮಂತರ್ ಗೌಡ, ಎಚ್.ವಿ.ವೆಂಕಟೇಶ್, ಡಾ.ಶ್ರೀನಿವಾಸ್ ಎನ್.ಟಿ., ಗಣೇಶ್ ಪ್ರಕಾಶ್ ಹುಕ್ಕೇರಿ, ಭೀಮಣ್ಣ ಟಿ.ನಾಯ್ಕ, ಅರವಿಂದ ಬೆಲ್ಲದ, ಡಾ.ಸಿ.ಎನ್.ಅಶ್ವಥ್ ನಾರಾಯಣ್ ಮತ್ತು ಎಂ.ಟಿ.ಕೃಷ್ಣಪ್ಪ ಅವರನ್ನು ಸದಸ್ಯರುಗಳನ್ನಾಗಿ ನೇಮಿಸಿ, ಸಮಿತಿ ರಚಿಸಿದ್ದಾರೆ.
ಈ ಸಮಿತಿಯು ವರದಿಯನ್ನು ನೀಡಲು ಮೂರು ತಿಂಗಳ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





