Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಹಗರಣದಲ್ಲಿ ಸಿದ್ದರಾಮಯ್ಯರಿಗೆ...

ಮುಡಾ ಹಗರಣದಲ್ಲಿ ಸಿದ್ದರಾಮಯ್ಯರಿಗೆ ತಪ್ಪಿನ ಅರಿವಿಲ್ಲ: ಎಚ್.ಡಿ. ಕುಮಾರಸ್ವಾಮಿ

"ಮೊದಲು ವೈಟ್ನರ್ ಹಚ್ಚಲಾಯಿತು, ಈಗ ಟಾರ್ಚ್ ಬಿಟ್ಟು ತೋರಿಸುವ ವ್ಯರ್ಥ ಪ್ರಯತ್ನ ನಡೆಸಲಾಯಿತು"

ವಾರ್ತಾಭಾರತಿವಾರ್ತಾಭಾರತಿ26 Aug 2024 10:44 PM IST
share
ಮುಡಾ ಹಗರಣದಲ್ಲಿ ಸಿದ್ದರಾಮಯ್ಯರಿಗೆ ತಪ್ಪಿನ ಅರಿವಿಲ್ಲ: ಎಚ್.ಡಿ. ಕುಮಾರಸ್ವಾಮಿ

ಮಂಡ್ಯ: ಮುಡಾ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸಗಿರುವ ತಪ್ಪಿನ ಅರಿವು ಅವರಿಗಿಲ್ಲ. ಮೊದಲು ವೈಟ್ನರ್ ಹಚ್ಚಲಾಯಿತು. ಇವತ್ತು ಅದಕ್ಕೆ ಟಾರ್ಚ್ ಬಿಟ್ಟು ತೋರಿಸುವ ವ್ಯರ್ಥ ಪ್ರಯತ್ನ ನಡೆಸಲಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ನಗರದಲ್ಲಿ ಸೋಮವಾರ ದಿಶಾ ಸಭೆಯ ನಂತರ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಜಾಗ ಅವರ ಪತ್ನಿದಾ? ಬಾಮೈದನದಾ? ಮೊದಲು ಜಾಗ ಯಾರದ್ದು ಹೇಳಲಿ. ಸುಳ್ಳು ದಾಖಲೆ ಸೃಷ್ಟಿಸಿ ಸರಕಾರಿ ಜಾಗ ಲಪಟಾಯಿಸಿದ್ದಾರೆ. ಸರಕಾರದ 67 ಕೋಟಿ ರೂ. ಲೂಟಿ ಮಾಡಿದ್ದಾರೆ. ಈಗ ದಾಖಲೆಗಳಿಗೆ ಟಾರ್ಚ್ ಬಿಟ್ಟು ನೋಡುತ್ತಿದ್ದಾರೆ. ಈ ಪರಿಸ್ಥಿತಿ ಅವರಿಗೆ ಬೇಕಿತ್ತಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ನನ್ನ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆ ಇಟ್ಟುಕೊಂಡು ಏನೇನು ನಡೆಸುತ್ತಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನಾನೂ ಸಿದ್ಧನಿದ್ದೇನೆ, ಏನು ಬೇಕಾದರೂ ಮಾಡಲಿ. ನಾನು ಜೈಲಿಗೆ ಹೋಗುವಂತದ್ದು ಏನು ಮಾಡಿಲ್ಲ. ನೂರುಜನ್ಮ ಎತ್ತಿ ಬಂದರೂ ನನ್ನನ್ನು ಏನು ಮಾಡಲು ಆಗಲ್ಲ ಎಂದು ಅವರು ಹೇಳಿದರು.

ಜಂತಕಲ್ ಗಣಿಗಾರಿಕೆಯ ಗುತ್ತಿಗೆಗೆ ಸಂಬಂಧಿಸಿದ ಸಾಯಿ ವೆಂಕಟೇಶ್ವರ ಪ್ರಕರಣ ಯಾವತ್ತೊ ಸತ್ತಿರುವ ಪ್ರಕರಣ. ಅದರಲ್ಲಿ ನನ್ನ ಪಾತ್ರ ಏನಿದೆ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ದೂರಿದರು.

ಆಪರೇಷನ್ ಕಮಲ ನಡೆಸಲು ಶಾಸಕರಿಗೆ ತಲಾ 100 ಕೋಟಿ ರೂ. ಆಮಿಷವೊಡ್ಡಲಾಗಿದೆ ಎಂಬ ಶಾಸಕ ರವಿಕುಮಾರ್ ಗಣಿಗ ಆರೋಪಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ನೂರು ಕೋಟಿಗೆ ಎಷ್ಟು ಸಂಖ್ಯೆ ಇದೆ ಎಂದು ಗೊತ್ತಿದೆಯಾ ಅವರಿಗೆ? ಸರಕಾರ ತೆಗೆಯುವುದಕ್ಕೆ 5,000 ಕೋಟಿ ಖರ್ಚು ಮಾಡುತ್ತಾರೆ ಎಂದರೆ ಯಾರಾದರೂ ನಂಬುತ್ತಾರೆಯೇ? ಎಂದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕಣದಲ್ಲಿ ಇರುತ್ತಾರೆ. ಜೆಡಿಎಸ್‍ನಲ್ಲೂ ಸಮರ್ಥ ಕಾರ್ಯಕರ್ತರಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಇನ್ನೂ ಚರ್ಚೆ ಆಗಿಲ್ಲ. ಒಟ್ಟಾರೆ ಎನ್‍ಡಿಎ ಅಭ್ಯರ್ಥಿ ಕಣದಲ್ಲಿರುತ್ತಾರೆ ಎಂದು ಅವರು ಸ್ಪಷ್ಟಪಡಿಸಿದರು.

ನಾನು ಜನರ ಕೆಲಸ ಮಾಡಲು ಬಂದಿದ್ದೇನೆಯೇ ವಿನಃ ರಾಜಕೀಯ ಮಾಡುವುದಕ್ಕಲ್ಲ. ಕಾಂಗ್ರೆಸ್ ಸಚಿವರು, ಶಾಸಕರು ದಿಶಾ ಸಭೆಗೆ ಗೈರಾಗಿರುವುದು ನನಗೆ ಸಂಬಂಧಿಸಿದ್ದಲ್ಲ. ಕೇಂದ್ರ ಮಂತ್ರಿಯಾಗಿ ಏನೆಲ್ಲಾ ಮಾಡಬೇಕೋ ಅಷ್ಟನ್ನು ಮಾಡುತ್ತೇನೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X