Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಮನಗರ ಜಿಲ್ಲೆ ಹೆಸರು ಬದಲಾವಣೆ...

ರಾಮನಗರ ಜಿಲ್ಲೆ ಹೆಸರು ಬದಲಾವಣೆ ಪ್ರಸ್ತಾವಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರೋಧ

ವಾರ್ತಾಭಾರತಿವಾರ್ತಾಭಾರತಿ9 July 2024 7:16 PM IST
share
ರಾಮನಗರ ಜಿಲ್ಲೆ ಹೆಸರು ಬದಲಾವಣೆ ಪ್ರಸ್ತಾವಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರೋಧ

ಹೊಸದಿಲ್ಲಿ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡುವ ಪ್ರಯತ್ನವನ್ನು ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತೀವ್ರವಾಗಿ ವಿರೋಧಿಸಿದ್ದಾರೆ.

ಮಂಗಳವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವರು ಈಗ ಜಿಲ್ಲೆಯ ಹೆಸರು ಬದಲಾವಣೆ ಮಾಡಬಹುದು. ಮತ್ತೆ ನಾನು ರಾಜ್ಯದಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇನೆ. ಆಗ ಇವರು ಇಟ್ಟಿರುವ ಹೆಸರನ್ನು ಕಿತ್ತೆಸೆಯುತ್ತೇನೆ ಎಂದು ಗುಡುಗಿದರು.

ಕಾಂಗ್ರೆಸ್ ಸರಕಾರ ಬಂದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ಇದನ್ನು ಯಾಕೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ಹಣವನ್ನು ತುಂಬಿಸಿಕೊಳ್ಳಬಹುದು ಎಂಬ ಉದ್ದೇಶ ಇರಬಹುದು ಎಂದು ಅವರು ಆರೋಪಿಸಿದರು.

ನಾನು ರಾಮನಗರದ ನಾಲ್ಕೂ ತಾಲೂಕುಗಳನ್ನು ಬೆಂಗಳೂರಿಗೆ ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪ ಮಾಡದೆಯೇ ಕುಮಾರಸ್ವಾಮಿ ಅವರ ವಿರುದ್ಧ ಕಿಡಿಕಾರಿದರು.

ರಾಮದೇವರಿಗೆ ಅಪಚಾರ: ರಾಮನಗರ ಜಿಲ್ಲೆ ಮಾಡಿದ್ದ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ? ರಾಮನ ಹೆಸರು ಇರುವುದು ಒಂದು ಭಾಗ. ಈ ಜಿಲ್ಲೆಗೆ ತನ್ನದೇ ಆದ ಒಂದು ಇತಿಹಾಸ ಇದೆ. ಪುರಾಣ ಐತಿಹ್ಯವಿದೆ. ಈ ಹೆಸರಲ್ಲಿ ರಾಮನ ಹೆಸರು ಇದೆ. ರಾಮದೇವರಿಗೆ ಇವರು ಅಪಚಾರ ಮಾಡಲು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲಿ ಇವರು ಯಾವ ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಟಾಯಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಎನ್ನುವುದು ಕೂಡ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದನ್ನು ಅವರು ಕಲಿಯಲಿ. ನಾನು ಅಧಿಕಾರದಲ್ಲಿದ್ದಾಗ ರಾಮನಗರ ಜಿಲ್ಲೆ ಮಾಡಿದ್ದೆ. ಅದನ್ನು ತೆಗೆಯಬೇಕು ಎನ್ನುವುದು ಅವರ ಉದ್ದೇಶ ಎಂದು ಕುಮಾರಸ್ವಾಮಿ ದೂರಿದರು.

ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಎಂಬುದು ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ. ಹಿಂದೆ ಕನಕಪುರ, ಸಾತನೂರು ಹೇಗಿದ್ದವು, ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು ಎಂದು ಕುಮಾರಸ್ವಾಮಿ ಟೀಕಿಸಿದರು.

ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಎಂದು ಇದೆ. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತದೆ ಎಂಬುದನ್ನು ಅವರು ಜನರಿಗೆ ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರಕಾರಿ ದಾಖಲೆಗಳಿಗೆ ತೊಂದರಯಾಗಲಿದೆ. ಜನರು ಕಚೇರಿಗಳಿಗೆ ಅಲೆಯಬೇಕಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ರಾಮನಗರ-ಚನ್ನಪಟ್ಟಣ ಅವಳಿ ನಗರ: ಜಿಲ್ಲೆಗೆ ಹೆಸರು ಬದಲಾಯಿಸುವುದು ಅನಗತ್ಯ ಎಂದು ಹೇಳಿದ ಅವರು, ರಾಮನಗರ-ಚನ್ನಪಟ್ಟಣ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಅವರಿಗೆ ಬಂದಿರುತ್ತಿತ್ತು. ಅದರ ಬದಲು ಜಿಲ್ಲೆಯ ಹೆಸರನ್ನೇ ಅಳಿಸಿ ಹಾಕಲು ಹುನ್ನಾರ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X