ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಎಚ್.ಡಿ.ಕುಮಾರಸ್ವಾಮಿ

ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ‘ಮತಗಳ್ಳತನಕ್ಕೆ ಒಂದೇ ಮದ್ದು, ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ (ಲಿಂಕ್) ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ’ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹೆಸರು ಉಲ್ಲೇಖಿಸಿದೆ ಆರೋಪಿಸಿದ್ದಾರೆ.
‘ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ. ಕೇಂದ್ರೀಯ ಚುನಾವಣೆ ಆಯೋಗಕ್ಕೆ ನನ್ನ ಮನವಿ ಇಷ್ಟೇ, ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ’ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ.
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 8, 2025
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ.
ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ…







