Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆ...

ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆ ಸಿಬ್ಬಂದಿ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ21 Oct 2025 9:04 PM IST
share
ಅನುದಾನಿತ ಖಾಸಗಿ ಶಿಕ್ಷಣ ಸಂಸ್ಥೆ ಸಿಬ್ಬಂದಿ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು : ಹೈಕೋರ್ಟ್

ಬೆಂಗಳೂರು: ಸರಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನೂ ಸರಕಾರದ ಸಿಬ್ಬಂದಿಯ ಭಾಗವೆಂದೇ ಪರಿಗಣಿಸಬಹುದಾಗಿದ್ದು, ಅವರ ವಿರುದ್ಧವೂ ಲೋಕಾಯುಕ್ತರು ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ.

ಲೋಕಾಯುಕ್ತರು ಸಲ್ಲಿಸಿದ್ದ ವರದಿ ಆಧರಿಸಿ, ಕೈಗೊಂಡಿದ್ದ ತನಿಖೆ ಪ್ರಶ್ನಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬೈರಶೆಟ್ಟಿಹಳ್ಳಿಯ ಶ್ರೀ ಬಾಲಾಂಜನೇಯ ಹೈಸ್ಕೂಲ್‌ನ ಗ್ರಂಥಪಾಲಕ ಹಾಗೂ ಗುಮಾಸ್ತ ಬಿ. ಲಕ್ಷ್ಮೇನಾರಾಯಣ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

ಸರಕಾರದಿಂದ ಅನುದಾನ ಪಡೆಯುವ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಯನ್ನು ಕೆಲ ಉದ್ದೇಶಗಳಿಗಾಗಿ ಸರಕಾರದ ಸಿಬ್ಬಂದಿಯ ಭಾಗವೆಂದೇ ಪರಿಗಣಿಸಲಾಗುವುದೆಂದು ಹೈಕೋರ್ಟ್‌ ಹಲವು ಸಂದರ್ಭಗಳಲ್ಲಿ ತೀರ್ಪು ನೀಡಿದೆ. ಅವರ ವೇತನ, ಭತ್ಯೆ ಮತ್ತು ಸೇವಾ ಷರತ್ತುಗಳನ್ನು ಸರಕಾರ ನಿಯಂತ್ರಿಸುತ್ತದೆ. ಆದ್ದರಿಂದ, ಅರ್ಜಿದಾರರ ವಿರುದ್ಧವೂ ಲೋಕಾಯುಕ್ತ ತನಿಖೆ ನಡೆಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ.

ಲೋಕಾಯುಕ್ತ ಕಾಯ್ದೆ ಸೆಕ್ಷನ್‌ 12(3)ರ ಅಡಿ ನೀಡಿರುವ ವರದಿ ಹಾಗೂ ಸಿಸಿಎ ನಿಯಮ 14ಎ ಅಡಿ ಸರಕಾರ ತನಿಖೆ ನಡೆಸಲು ಹೊರಡಿಸಿರುವ ಆದೇಶ ಸರಿಯಾಗಿಯೇ ಇದೆ.‌ ಲೋಕಾಯುಕ್ತರು ಭ್ರಷ್ಟಾಚಾರ ನಿಗ್ರಹ ಕಾಯ್ದೆ (ಪಿಸಿ) ಸೆಕ್ಷನ್‌ 12(3)ರ ಪ್ರಕಾರ ವರದಿ ಸಲ್ಲಿಸಿದ್ದು, ಅದರಲ್ಲಿ ಮೇಲ್ನೋಟಕ್ಕೆ ಅರ್ಜಿದಾರರು ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದಿರುವುದು ದೃಢಪಟ್ಟಿದೆ ಎನ್ನಲಾಗಿದೆ. ನಿಯಮದ ಪ್ರಕಾರ ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ಅರ್ಜಿದಾರರು ಭೂಮಿ ಖರೀದಿ ಮಾಡಿದ್ದಾರೆ. ಆದ್ದರಿಂದ, ಅವರ ವಿರುದ್ಧ ತನಿಖೆ ಮುಂದುವರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಹೇಳಿದೆ.

ಪ್ರಕರಣವೇನು?

ಶಾಲಾ ಆಡಳಿತ ಮಂಡಳಿಯಿಂದ ಅಗತ್ಯ ಅನುಮತಿ ಪಡೆಯದೆ ಬಿ.ಲಕ್ಷ್ಮೇನಾರಾಯಣ ಮತ್ತಿತರ ನಾಲ್ವರು 2004 ಮತ್ತು 2005ರಲ್ಲಿ ವಾಜರಹಳ್ಳಿ ಮತ್ತು ನೆಲಮಂಗಲ ಪಟ್ಟಣದಲ್ಲಿ ಭೂಮಿ ಖರೀದಿ ಮಾಡಿದ್ದಾರೆಂದು 2013ರಲ್ಲಿ ಲೋಕಾಯುಕ್ತದಲ್ಲಿ ದೂರು ಸಲ್ಲಿಕೆಯಾಗಿತ್ತು. ಬಿ.ಲಕ್ಷ್ಮೇನಾರಾಯಣ ವಾಜರಹಳ್ಳಿಯ ತಮ್ಮ ಪಾಲಿನ 2.83 ಕೋಟಿ ರೂ. ಪಡೆದುಕೊಂಡಿದ್ದಾರೆ. ನಿಯಮದಂತೆ ಆಸ್ತಿ ವಿವರ ಸಲ್ಲಿಕೆ ಮಾಡಿಲ್ಲಎಂದು ದೂರುದಾರರು ಆರೋಪಿಸಿದ್ದರು. ಲೋಕಾಯುಕ್ತರು ಪ್ರಾಥಮಿಕ ತನಿಖೆ ನಡೆಸಿ ಸರಕಾರಕ್ಕೆ ಸಲ್ಲಿಸಿದ್ದ ವರದಿ ಆಧರಿಸಿ ಸರಕಾರ ಸಿಸಿಎ ನಿಯಮಗಳಡಿ ಪೂರ್ಣಪ್ರಮಾಣದ ತನಿಖೆ ನಡೆಸಲು ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿಕೊಟ್ಟಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X