Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ,...

ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆ: ಬಿ.ಕೆ ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ23 May 2024 3:02 PM IST
share
ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆ: ಬಿ.ಕೆ ಹರಿಪ್ರಸಾದ್

ಬೆಂಗಳೂರು: ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷವನ್ನು ಬೆದರಿಸುವುದು, ಕಿವಿ ಹಿಂಡುವುದನ್ನು, ಬುದ್ದಿ ಹೇಳುವುದನ್ನು ಬಿಟ್ಟು,ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ತನ್ನ ಜವಾಬ್ದಾರಿ ನಿರ್ವಹಿಸಲಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯೂ ಹಿಂದೆಂದೂ ನಡೆಯದ ದ್ವೇಷ, ಅರಾಜಕತೆ, ಪಕ್ಷಪಾತಿತನದಿಂದಲೇ ನಡೆಯುತ್ತಿರುವುದನ್ನ ಮತದಾರರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ಬಾರಿಯ ಚುನಾವಣೆ ಪ್ರಜಾಪ್ರಭುತ್ವ, ಸಂವಿಧಾನದ ಅಳಿವು-ಉಳಿವಿನ ಪ್ರಶ್ನೆಯಾಗಿದೆ. ಇಂತಹ ಅಪಾಯವನ್ನು ದೇಶದ ಜನರಿಂದ ಮುಚ್ಚಿಡಬೇಕೆಂದು ಚುನಾವಣಾ ಆಯೋಗ ತಾಕೀತು ಮಾಡಿರುವುದು ಆಶ್ಚರ್ಯ ಎಂದಿದ್ದಾರೆ.

ಬಿಜೆಪಿ ಸಂಸದರು, ಹಿರಿಯ ನಾಯಕರುಗಳು ಈ ಬಾರಿ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನ ಬದಲಾವಣೆ ಮಾಡಿಯೇ ಸಿದ್ಧ ಎಂದು ಬಹಿರಂಗ ಹೇಳಿಕೆಗಳನ್ನು ನೀಡಿದ್ದಾರೆ. "ದೇಶದ ಹಿತಕ್ಕಾಗಿ ಸಂವಿಧಾನ ಬದಲಾವಣೆ ಮಾಡುವುದು ಅನಿವಾರ್ಯ" ಎಂದು ಬಹಿರಂಗ ಚುನಾವಣಾ ಪ್ರಚಾರದಲ್ಲಿ ರಾಜಸ್ತಾನದ ನಾಗೌರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜ್ಯೋತಿ ಮಿರ್ಧಾ ಹೇಳಿಕೆ ನೀಡಿದ್ದಾರೆ. "ಮತ್ತೆ ಅಧಿಕಾರಕ್ಕೆ ಬಂದರೆ ದೇಶಕ್ಕೆ ಹೊಸ ಸಂವಿಧಾನ ನೀಡುತ್ತೇವೆ" ಎಂದು ಅಯೋಧ್ಯೆಯ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಲಲ್ಲೂ ಸಿಂಗ್ ಕೂಡ ಹೇಳಿಕೆ ನೀಡಿದ್ದಾರೆ. ಇನ್ನೂ ಮುಂದುವರೆದು ಹಾಲಿ ಸಂಸದ, ಕೇಂದ್ರದ ಮಾಜಿ ಮಂತ್ರಿ ಅನಂತ್ ಕುಮಾರ ಹೆಗಡೆ "ಸಂವಿಧಾನ ಬದಲಾವಣೆ ಮಾಡಲು 400 ಸ್ಥಾನಗಳು ಬಿಜೆಪಿಗೆ ಅನಿವಾರ್ಯ" ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ. ಇಂತಹ ಅಪಾಯಕಾರಿ ಹೇಳಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿಯಾಗಲಿ, ಬಿಜೆಪಿ ಪಕ್ಷವಾಗಲಿ ಕನಿಷ್ಟ ಸ್ಪಷ್ಟನೆಯನ್ನೂ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿಯ ಸುತ್ತಮುತ್ತ ಸಂವಿಧಾನ ಬದಲಾಯಿಸುವವರನ್ನೇ ಆರ್ಥಿಕ ಸಲಹೆಗಾರರನ್ನಾಗಿ ಮಾಡಿಕೊಂಡಿದ್ದಾರೆ. ಪ್ರಧಾನಿಯ ಆರ್ಥಿಕ ಮುಖ್ಯ ಸಲಹೆಗಾರ "ಬಿಬೇಕ್ ದೇಬ್ರಾಯ್" ಹೊಸ ಸಂವಿಧಾನದ ಅಗತ್ಯವಿದೆ ಎಂದು ಅಂಕಣವೇ ಬರೆದಿದ್ದು ಜಗಜ್ಜಾಹೀರಾಗಿದೆ. ಸಂವಿಧಾನ ಹಾಗೂ ಮೀಸಲಾತಿ ವಿರೋಧಿ ಮನಸ್ಥಿತಿ ಬಿಜೆಪಿಯ ಹುಟ್ಟಿನಿಂದಲೇ ಇರುವುದು ಗೌಪ್ಯ ವಿಷಯವಲ್ಲ. ಆದರೆ ಸಂವಿಧಾನದಡಿಯಲ್ಲಿ ಕಾರ್ಯನಿರ್ಹವಹಿಸಬೇಕಾದ ಚುನಾವಣಾ ಆಯೋಗದ ಮೌನದ ಹಿಂದಿನ ಉದ್ದೇಶವೇನು? ಈ ಕ್ಷಣದವರೆಗೂ ನೋಟಿಸ್ ನೀಡಲು ಕೂಡ ಯಾರ ಒಪ್ಪಿಗೆಗೆ ಕಾಯುತ್ತಿದೆ? ದೇಶದ ಅತಿದೊಡ್ಡ ವಿರೋಧ ಪಕ್ಷವನ್ನು ಬೆದರಿಸುತ್ತಿರುವುದು ಯಾರ ಅಣತಿಯಂತೆ? ಎಂದು ಪ್ರಶ್ನಿಸಿದ್ದಾರೆ.

"ದೇಶದ ಸಂವಿಧಾನವನ್ನು ರದ್ದುಪಡಿಸಬಹುದು ಎಂಬಂತಹ ತಪ್ಪು ಭಾವನೆ ಮೂಡಿಸುವ ಹೇಳಿಕೆಗಳನ್ನು ನೀಡಬಾರದು" ಎಂದು ಕಾಂಗ್ರೆಸ್ ಪಕ್ಷವನ್ನು ತಾಕೀತು ಮಾಡುತ್ತಿರುವುದನ್ನು ನೋಡಿದರೆ ಸಂವಿಧಾನ ಬದಲಾವಣೆ ಮಾಡುವ ಬಿಜೆಪಿಯ ಉದ್ದೇಶಕ್ಕೆ ಚುನಾವಣಾ ಆಯೋಗದ ಸಮ್ಮಿತಿ ಇದೆಯೇ? ಸಂವಿಧಾನ ಅಪಾಯದಲ್ಲಿರುವುದು ದೇಶದ ಜನರಿಗೆ ತಿಳಿಸುವುದು ತಪ್ಪೇ? ಧರ್ಮದ ಆಧಾರದಲ್ಲಿ ಪ್ರಧಾನಿಯಾದಿಯಾಗಿ ಬಿಜೆಪಿಯ ನಾಯಕರು ಬಹಿರಂಗವಾಗಿ ದ್ವೇಷ ಭಾಷಣವನ್ನು ಮಾಡುತ್ತಿದ್ದರೂ ಚುನಾವಣಾ ಆಯೋಗದ ಕಣ್ಣಿಗೆ ಕಾಣಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಭಾರತದ ಚುನಾವಣಾ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಚುನಾವಣಾ ಆಯೋಗದ ಪಕ್ಷಪಾತಿತನ ಹಾಗೂ ನಿಷ್ಕ್ರಿಯತೆಯನ್ನು ದೇಶ ನೋಡುತ್ತಿದೆ. ದೇಶದ ಮತದಾರರೂ ಚುನಾವಣಾ ಆಯೋಗದ ಮೇಲಿನ ಸಂಪೂರ್ಣ ಭರವಸೆ ಕಳೆದುಕೊಳ್ಳುವ ಮೊದಲು, ತನ್ನ ಘನತೆ,ಪರಂಪರೆಗೆ ಪೂರಕವಾಗಿ ಕಾರ್ಯನಿರ್ವಹಿಸಲಿ ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X