Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಈಗ ಸಂವಿಧಾನ ಯಾರನ್ನು ಗೌರವಿಸುತ್ತಿಲ್ಲ :...

ಈಗ ಸಂವಿಧಾನ ಯಾರನ್ನು ಗೌರವಿಸುತ್ತಿಲ್ಲ : ಪೇಜಾವರ ಶ್ರೀಗೆ ಮಾವಳ್ಳಿ ಶಂಕರ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ26 Nov 2024 9:20 PM IST
share
ಈಗ ಸಂವಿಧಾನ ಯಾರನ್ನು ಗೌರವಿಸುತ್ತಿಲ್ಲ : ಪೇಜಾವರ ಶ್ರೀಗೆ ಮಾವಳ್ಳಿ ಶಂಕರ್ ಪ್ರಶ್ನೆ

ಬೆಂಗಳೂರು : ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನತೀರ್ಥ ಶ್ರೀಗಳು ಇತ್ತೀಚಿಗೆ ‘ಎಲ್ಲರನ್ನು ಗೌರವಿಸುವ ಸಂವಿಧಾನ ಬರಲಿ’ ಎಂದು ರಾಜ್ಯಪಾಲರಿಗೆ ಮನವಿ ಕೊಟ್ಟಿದ್ದಾರೆ. ‘ಈಗ ‘ಸಂವಿಧಾನ ಯಾರನ್ನು ಗೌರವಿಸುತ್ತಿಲ್ಲ’ ಎಂದು ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಪ್ರಶ್ನೆ ಮಾಡಿದ್ದಾರೆ.

ಮಂಗಳವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ದಸಂಸ ಬೆಂಗಳೂರು ಜಿಲ್ಲಾ ಸಮಿತಿಯ ವತಿಯಿಂದ ಸಂವಿಧಾನ ದಿನದ ಪ್ರಯುಕ್ತ ಆಯೋಜಿಸಿದ್ದ ಬಿಟಿ ಕಾಯ್ದೆ-1979 ರದ್ದುಗೊಳಿಸುವಂತೆ ಆಗ್ರಹಿಸಿ, ‘ಬೌದ್ಧರ ಧಾರ್ಮಿಕ ಹಕ್ಕಿಗಾಗಿ ಧರಣಿ’ಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣರು, ವೈದಿಕರು ಮತ್ತು ಬ್ರಾಹ್ಮಣ್ಯವನ್ನು ಗೌರವಿಸುವಂತಹ ಸಂವಿಧಾನ ಬರಬೇಕಂತೆ, ಇದರ ಅರ್ಥ ಏನು? ಪೇಜಾವರ ಶ್ರೀ ಅಂತಹವರು ಯಾಕೆ ಸಂವಿಧಾನವನ್ನು ವಿರೋಧಿಸುತ್ತಾರೆ ಎಂದರೆ ಭಾರತದ ಸಂವಿಧಾನ ಎಲ್ಲ ಧರ್ಮಗಳು ಒಂದೇ ಎಂದು ಹೇಳುತ್ತದೆ. ಅದಕ್ಕೆ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ಹೇಳುವುದು ಜಾತ್ಯತೀತತೆ, ಸಮಾಜವಾದವನ್ನು. ಭಾರತ ಯಾವುದೇ ಕಾರಣಕ್ಕೂ ಹಿಂದೂ ರಾಷ್ಟ್ರವಾಗಲು ಸಾಧ್ಯವಿಲ್ಲ. ಸುಪ್ರೀಂಕೋರ್ಟ್ ತೀರ್ಪು ನೀಡಿ, ಸಂವಿಧಾನದ ಪೀಠಿಕೆಯನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆದರೆ ಕೆಲವರಿಗೆ ಸಂವಿಧಾನ ಅರಗಿಸಿಕೊಳ್ಳಲು ಆಗುತ್ತಿಲ್ಲ. ದೇಶದ ಬಹು ಸಂಖ್ಯಾತರಿಗೆ ಸಂವಿಧಾನ ಸರಿಯಾಗಿ ಅರ್ಥವಾಗುತ್ತಿಲ್ಲ. ನಾವು ಸಂವಿಧಾನ ಅರ್ಥ ಮಾಡಿಕೊಳ್ಳದಿದ್ದರೆ ಮತ್ತೆ ನಾವು ಬ್ರಾಹ್ಮಣ್ಯದ ಗುಲಾಮಗಿರಿಗೆ ಹೋಗುತ್ತೇವೆ ಎಂದು ತಿಳಿಸಿದರು.

ಧರಣಿಯಲ್ಲಿ ದಲಿತ ಹೋರಾಟಗಾರ ಹೆಣ್ಣೂರು ಶ್ರೀನಿವಾಸ್, ದಸಂಸ ಸಂಚಾಲಕ ಜ್ಯೋತಪ್ಪ ಹೊಸಳ್ಳಿ, ಜಿಲ್ಲಾ ಸಂಚಾಲಕ ಟಿ.ಸಂಪಂಗಿರಾಮ್, ಜಿಲ್ಲಾ ಸಮಿತಿ ಸದಸ್ಯೆ ಧನಮ್ಮ ಮತ್ತಿತರರು ಹಾಜರಿದ್ದರು.

‘ಎಲ್ಲಿಯ ತನಕ ಬ್ರಾಹ್ಮಣ್ಯದ ಹಿಡಿತದಿಂದ ಹೊರಗೆ ಬರುವುದಿಲ್ಲವೋ, ಅಲ್ಲಿಯ ತನಕ ದಲಿತರ ಮೇಲೆ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳು ನಿಲ್ಲುವುದಿಲ್ಲ. ಇದನ್ನು ಅರಿತು ಅಂಬೇಡ್ಕರ್ ಅವರು ಹೋರಾಟ ಮಾಡಿದರು. ಹೊಟ್ಟೆಪಾಡಿಗಾಗಿ ಮೀಸಲಾತಿಯನ್ನು ತಂದು ಕೊಟ್ಟರು. ಮಾನಸಿಕ ಗುಲಾಮಗಿರಿಯ ವಿಮೋಚನೆಗಾಗಿ ಬುದ್ಧನನ್ನು ತೋರಿಸಿದರು. ನಾವು ಹೊಟ್ಟೆಪಾಡನ್ನು ನೋಡಿದೆವೋ, ಆದರೆ ಜ್ಞಾನದ ಕಡೆಗೆ ಹೋಗಲಿಲ್ಲ ಅದಕ್ಕಾಗಿ ಇದುವರೆಗೂ ಶೋಷಣೆ ತಪ್ಪಲಿಲ್ಲ’

-ಮಾವಳ್ಳಿ ಶಂಕರ್, ದಸಂಸ ಪ್ರಧಾನ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X