Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಕನ್ನಡದಲ್ಲಿ ಜಯದೇವ, ಕಿದ್ವಾಯಿ...

ದಕ್ಷಿಣ ಕನ್ನಡದಲ್ಲಿ ಜಯದೇವ, ಕಿದ್ವಾಯಿ ಸ್ಯಾಟಲೈಟ್ ಸೆಂಟರ್ ಸ್ಥಾಪನೆ ಪ್ರಸ್ತಾವ ಇಲ್ಲ : ಸಚಿವ ಭೋಸರಾಜು

ವಾರ್ತಾಭಾರತಿವಾರ್ತಾಭಾರತಿ13 Aug 2025 9:00 PM IST
share
ದಕ್ಷಿಣ ಕನ್ನಡದಲ್ಲಿ ಜಯದೇವ, ಕಿದ್ವಾಯಿ ಸ್ಯಾಟಲೈಟ್ ಸೆಂಟರ್ ಸ್ಥಾಪನೆ ಪ್ರಸ್ತಾವ ಇಲ್ಲ : ಸಚಿವ ಭೋಸರಾಜು

ಬೆಂಗಳೂರು, ಆ.13 : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆಯ ಸ್ಥಳದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಸ್ಯಾಟಲೈಟ್ ಸೆಂಟರ್‍ಗಳನ್ನು ಸ್ಥಾಪಿಸುವ ಸಂಬಂಧ ಯಾವುದೇ ಪ್ರಸ್ತಾವ ಸರಕಾರದ ಮುಂದೆ ಇಲ್ಲ ಎಂದು ಪರಿಷತ್ ಸಭಾನಾಯಕ ಎನ್.ಎಸ್. ಭೋಸರಾಜು ಸ್ಪಷ್ಟಪಡಿಸಿದ್ದಾರೆ.

ಬುಧವಾರ ವಿಧಾನ ಪರಿಷತ್ತಿನಲ್ಲಿ ನಿಯಮ 72ರ ಮೇರೆಗೆ ಗಮನ ಸೆಳೆಯುವ ಸೂಚನೆ ವೇಳೆ ಆಡಳಿತ ಪಕ್ಷದ ಸದಸ್ಯ ಐವನ್ ಡಿಸೋಜಾ ವಿಷಯ ಪ್ರಸ್ತಾಪಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ವೆನ್‍ಲಾಕ್ ಆಸ್ಪತ್ರೆಯ ಅಧೀನದಲ್ಲಿರುವ ಮೂಡಶೆಡ್ಡೆಯಲ್ಲಿ ಕ್ಷಯ ಮತ್ತು ಎದೆರೋಗಗಳ ಆಸ್ಪತ್ರೆಯ 8ಎಕರೆ ಸ್ಥಳದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ಮತ್ತು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ಸ್ಯಾಟಲೈಟ್ ಸೆಂಟರ್‍ಗಳನ್ನು ಮೈಸೂರು ಮತ್ತು ಗುಲ್ಬರ್ಗಾ ಮಾದರಿಯಲ್ಲಿ ಪ್ರಾರಂಭ ಮಾಡಬೇಕು ಎಂದು ಕೋರಿದರು.

ಇದಕ್ಕೆ ಉತ್ತರ ನೀಡಿದ ಸಚಿವ ಭೋಸರಾಜು, ಸರಕಾರಿ ವೆನ್‍ಲಾಕ್ ಆಸ್ಪತ್ರೆಯ ಅಧೀನದಲ್ಲಿರುವ ಮೂಡಶೆಡ್ಡೆಯಲ್ಲಿ ಕ್ಷಯ ಮತ್ತು ಎದೆ ರೋಗಗಳ ಆಸ್ಪತ್ರೆಯ 8 ಎಕರೆ ಸ್ಥಳದಲ್ಲಿ ಜಯದೇವ ಕಿದ್ವಾಯಿ ಸ್ಯಾಟಲೈಟ್ ಸೆಂಟರ್ ಸ್ಥಾಪನೆ ಪ್ರಸ್ತಾಪ ಸರಕಾರದ ಮುಂದೆ ಇಲ್ಲ. ಮುಂದಿನ ದಿನಗಳಲ್ಲಿ ಸೆಂಟರ್ ಪ್ರಾರಂಭ ಮಾಡುವ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಸಚಿವರ ಜೊತೆಗೆ ಚರ್ಚೆ ಮಾಡಿ ಕ್ರಮ ಕೈಗೊಳ್ಳಬಹುದು ಎಂದು ಹೇಳಿದರು.

ಸದಸ್ಯ ಐವನ್ ಡಿಸೋಜಾ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ಕಡೆಗಳಲ್ಲಿ ತಿಂಗಳಿಗೆ 500 ರಿಂದ 600 ಹೃದಯಾಘಾತ ಪ್ರಕರಣಗಳು ಕಂಡುಬರುತ್ತಿವೆ. ಮಂಗಳೂರಿನ 2024ರ ಎ.20 ರಿಂದ 2025ರ ಮಾ.20ರವರೆಗೆ ಜಿಲ್ಲಾಸ್ಪತ್ರೆಯಿಂದ ಸೂಚನೆ ಮೇರೆಗೆ, ವೃದ್ದರ ಆಸ್ಪತ್ರೆಗಳಲ್ಲಿ 422 ಕಾರ್ಡಿಯೋ ಸರ್ಜರಿಯಾಗಿದೆ. ಮೆಡಿಕೋ ಅಂಕೋ ಸರ್ಜರಿ-250, ರೇಡಿಯೇಷನ್ ಅಂಕೋ ಪ್ರಕರಣಗಳು-119 ಒಟ್ಟು ಎಲ್ಲ ಆಸ್ಪತ್ರೆಗಳಲ್ಲಿ 3,471 ಕಾರ್ಡಿಯೋ ಚಿಕಿತ್ಸೆಗಳಾಗಿವೆ ಎಂದರು.

ಇನ್ನೂ ಕ್ಯಾನ್ಸರ್‍ಗೆ ಸಂಬಂಧಿಸಿದಂತೆ ಮೆಡಿಕೋ ಆಂಕೋ - 3,081, ರೇಡಿಯೇಷನ್ ಆಂಕೋ -2,144 ಚಿಕಿತ್ಸೆಗಳು ನಡೆದಿವೆ. ಈ ಮೆಡಿಕೋ ಅಂಕೋ ಆಯುಷ್ಮಾನ್ ಯೋಜನೆಯು 1 ಲಕ್ಷ ರೂ. ಇದ್ದು, ರೇಡಿಯೇಷನ್ ಅಂಕೋ ಆಯುಷ್ಮಾನ್ ಯೋಜನೆ 75 ಸಾವಿರ ರೂ. ಇದೆ. ಇದೇ ವ್ಯವಸ್ಥೆ ಸರಕಾರಿ ಆಸ್ಪತ್ರೆಗಳಿದ್ದರೆ, ಬಡವರಿಗೆ ಸಹಾಯವಾಗಲಿದೆ ಎಂದು ಐವನ್ ಡಿಸೋಜಾ ತಿಳಿಸಿದರು.

Tags

Minister Bhosaraju
share
ವಾರ್ತಾಭಾರತಿ
ವಾರ್ತಾಭಾರತಿ
Next Story
X