Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮನುಷ್ಯನ ಆರೋಗ್ಯಕ್ಕೂ, ಮಣ್ಣಿನ...

ಮನುಷ್ಯನ ಆರೋಗ್ಯಕ್ಕೂ, ಮಣ್ಣಿನ ಆರೋಗ್ಯಕ್ಕೂ ಸಂಬಂಧವಿದೆ : ಚಲುವರಾಯಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ5 Dec 2024 8:18 PM IST
share
ಮನುಷ್ಯನ ಆರೋಗ್ಯಕ್ಕೂ, ಮಣ್ಣಿನ ಆರೋಗ್ಯಕ್ಕೂ ಸಂಬಂಧವಿದೆ : ಚಲುವರಾಯಸ್ವಾಮಿ

ಬೆಂಗಳೂರು: ಮಣ್ಣಿನ ಆರೋಗ್ಯ, ಮಣ್ಣಿನ ಫಲವತ್ತತೆ, ಮಣ್ಣಿನ ಉತ್ಪಾದಕತೆ ಕುರಿತು ರೈತರು ಹಾಗೂ ಸಾರ್ವಜನಿಕರಲ್ಲಿ ಮಣ್ಣಿನ ಮಹತ್ವದ ಬಗ್ಗೆ ಅರಿವು ಮೂಡಿಸಲು ಪ್ರತಿ ವರ್ಷ ಡಿ.5ರಂದು ‘ಜಾಗತಿಕ ಮಣ್ಣಿನ ದಿನ’ ಆಚರಿಸಲಾಗುತ್ತದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಗುರುವಾರ ಕೃಷಿ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಕೃಷಿ ಆಯುಕ್ತಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಜಗವೇ ನಿಂತಿದೆ-ನೇಗಿಲ ಆಳದ ಮಣ್ಣಿನ ಮೇಲೆ’, ‘ಮಣ್ಣು ಬರಿದಾದರೆ-ಕಣ್ಣು ಕುರುಡಾದೀತು’, ‘ನಾವು ಸತ್ತರೇ ಮಣ್ಣಿಗೆ-ಮಣ್ಣೇ ಸತ್ತರೇ ಇನ್ನೆಲ್ಲಿಗೆ’ ಮತ್ತು ‘ಮಣ್ಣೇ ಮಾಣಿಕ್ಯ’ ಎಂಬ ನಾನ್ನುಡಿಗಳು ಮಣ್ಣಿನ ಮಹತ್ವವನ್ನು ಸಾರುತ್ತವೆ. ಮನುಷ್ಯರು ಆರೋಗ್ಯವಾಗಿರಬೇಕೆಂದರೆ ಆರೋಗ್ಯಕರ ಆಹಾರ ಸೇವನೆ ಮಾಡಬೇಕು ಎಂದು ಅವರು ಹೇಳಿದರು.

ಆರೋಗ್ಯಕರವಾದ ಆಹಾರವು ಆರೋಗ್ಯಕರ ಮಣ್ಣಿನಲ್ಲಿ ಬೆಳೆಯುತ್ತದೆ, ಆದುದರಿಂದ, ಮನುಷ್ಯರ ಆರೋಗ್ಯಕ್ಕೂ ಮಣ್ಣಿನ ಆರೋಗ್ಯಕ್ಕೂ ನೇರವಾದ ಸಂಬಂಧವಿದೆ ಎಂದು ಹೇಳಿದ ಅವರು, ಜಾಗತಿಕವಾಗಿ ಶೇ.95 ರಷ್ಟು ಆಹಾರವನ್ನು ಮಣ್ಣಿನಿಂದಲೇ ಬೆಳೆಯಲಾಗುತ್ತದೆ ಹಾಗೂ ಬೆಳೆಗಳಿಗೆ ಬೇಕಾಗುವ 15 ಅಗತ್ಯ ಪೋಷಕಾಂಶಗಳನ್ನೂ ಕೂಡಾ ಮಣ್ಣೇ ಒದಗಿಸುತ್ತದೆ ಎಂದು ತಿಳಿಸಿದರು.

ಹಸಿರು ಕ್ರಾಂತಿಯ ಅವಧಿಯಲ್ಲಿ-ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣವು ಶೇ.0.75 ರಿಂದ 1 ರಷ್ಟಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಒಂದೇ ಬೆಳೆಯನ್ನು ಬೆಳೆಯುವುದರಿಂದ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರವನ್ನು ಬಳಸುವುದರಿಂದ ಮತ್ತು ಅವೈಜ್ಞಾನಿಕವಾಗಿ ಹೆಚ್ಚಾಗಿ ನೀರನ್ನು ಬಳಸುವುದರಿಂದ ಪ್ರಸ್ತುತ ಮಣ್ಣಿನಲ್ಲಿ ಸಾವಯವ ಇಂಗಾಲದ ಪ್ರಮಾಣವು ಶೇಕಡಾ 0.3 ರಿಂದ 0.4 ರಷ್ಟು ಮಾತ್ರವಿದೆ ಎಂದು ಚಲುವರಾಯಸ್ವಾಮಿ ಹೇಳಿದರು.

ಮಣ್ಣಿನಲ್ಲಿ ಸಾವಯವ ಪದಾರ್ಥ ಹಾಗೂ ಸೂಕ್ಷ್ಮ ಜೀವಾಣುಗಳು ಇರುವುದರಿಂದ ಮಣ್ಣು ಕೂಡಾ ಒಂದು ಜೀವಂತ ವಸ್ತುವೆಂದು ಪರಿಗಣಿಸಲಾಗಿದೆ. ನಿಸರ್ಗದಲ್ಲಿ ಒಂದು ಇಂಚು ಮಣ್ಣು ತಯಾರಾಗಲು ಸಾವಿರ ವರ್ಷಗಳೇ ಬೇಕು. ಆದರೆ ಮಣ್ಣಿನ ಸಮತಟ್ಟು ಮಾಡದೇ, ಮಣ್ಣನ್ನು ಸೂಕ್ತ ನಿರ್ವಹಣೆ ಮಾಡದೇ ಇದ್ದಲ್ಲಿ ಒಂದೆ ರಭಸದ ಮಳೆಗೆ ಹಾಲಿನ ಕೆನೆಯಂತಿರುವ ಫಲವತ್ತಾದ ಮೇಲ್ಮಣ್ಣು ಕೊಚ್ಚಿ ನೀರಿನೊಂದಿಗೆ ಹರಿದು ಹೋಗಿ ಕೆಳಪದರಿನ ಸತ್ವ ರಹಿತ ಮಣ್ಣು ಮಾತ್ರ ಉಳಿದುಕೊಳ್ಳುತ್ತದೆ, ಈ ಹಿನ್ನಲೆಯಲ್ಲಿ ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಆಯುಕ್ತ ವೈ.ಎಸ್.ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತ ಮಹೇಶ್ ಶಿರೂರು, ಕೃಷಿ ಇಲಾಖೆ ನಿರ್ದೇಶಕ ಡಾ.ಪುತ್ರ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X