Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೆಆರ್‌ಐಡಿಎಲ್‍ನ ಅಧಿಕಾರಿಗಳ ವಿರುದ್ಧ...

ಕೆಆರ್‌ಐಡಿಎಲ್‍ನ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ; ವರದಿ ಬಳಿಕ ಕ್ರಮ : ಸಚಿವ ಈಶ್ವರ್‌ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ4 Sept 2026 3:16 PM IST
share
ಕೆಆರ್‌ಐಡಿಎಲ್‍ನ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ; ವರದಿ ಬಳಿಕ ಕ್ರಮ : ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು : ಕೆ.ಆರ್.ಐ.ಡಿ.ಎಲ್.ನಲ್ಲಿ ಶೇ.7 ರಷ್ಟು ಜಾಬ್ ಉಳಿತಾಯ ಕಡಿತಕ್ಕೆ ಬಿಜೆಪಿ ಸರಕಾರದ ಅವಧಿಯಲ್ಲೇ ಸುತ್ತೋಲೆ ಹೊರಡಿಸಲಾಗಿದ್ದರೂ, ಪ್ರತಿಪಕ್ಷ ನಾಯಕರು ಕಾಂಗ್ರೆಸ್ ಸರಕಾರ ದೂಷಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕೆ.ಆರ್.ಐ.ಡಿ.ಎಲ್.ನ ಇಬ್ಬರು ಎಂಜಿನಿಯರುಗಳ ಮೇಲೆ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಆರೋಪ ಮಾಡಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಷಯ ತಿಳಿದ ಕೂಡಲೇ ತಾವು ಸೂಪರಿಂಟೆಂಡೆಂಟ್ ಎಂಜಿನಿಯರ್ ದರ್ಜೆಯ ಅಧಿಕಾರಿ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿ, 7 ದಿನಗಳಲ್ಲಿ ವರದಿ ನೀಡಲು ಸೂಚಿಸಿರುವುದಾಗಿ ತಿಳಿಸಿದರು.

ವರದಿಯಲ್ಲಿ ಶಾಸಕರು ಹೆಸರಿಸಿರುವ ಎಂಜಿನಿಯರುಗಳು ಭ್ರಷ್ಟಾಚಾರ ಮಾಡಿರುವುದು ಸಾಬೀತಾದರೆ, ಅಮಾನತು ಮಾಡಿ, ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದ ಅವರು, ತನಿಖಾ ವರದಿ ಬರುವ ಮೊದಲೇ ಪ್ರತಿಪಕ್ಷದ ನಾಯಕರು ಆತುರ ತೋರುತ್ತಿರುವುದು ಹಾಸ್ಯಾಸ್ಪದ ಎಂದರು.

ಗ್ರಾಮೀಣಾಭಿವೃದ್ಧಿ ಇಲಾಖೆ ಪಾರದರ್ಶಕ, ಜನಸ್ನೇಹಿ ಮತ್ತು ಭ್ರಷ್ಟಾಚಾರ ಮುಕ್ತವಾಗಿರಬೇಕು ಎಂಬುದು ತಮ್ಮ ಆಶಯವಾಗಿದೆ ಎಂದ ಈಶ್ವರ ಖಂಡ್ರೆ, ಯಾವುದೇ ಅಧಿಕಾರಿ, ಸಿಬ್ಬಂದಿ ಸಚಿವರ ಹೆಸರು ಹೇಳಿ ಭ್ರಷ್ಟಾಚಾರ ಮಾಡಿರುವ ಬಗ್ಗೆ ಸಾಕ್ಷ್ಯ, ಪುರಾವೆ ಸಹಿತ ದೂರು ಬಂದರೆ ಯಾವ ಮುಲಾಜಿಗೂ ಒಳಗಾಗದೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿದರು.

ಅಶೋಕ್ ಕುಮಾರ್ ರೈ ಅವರ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ಐ.ಡಿ.ಎಲ್. ಎಂ.ಡಿ. ಸ್ಪಷ್ಟೀಕರಣ ನೀಡಿದ್ದಾರೆ. ಕೆಆರ್.ಐ.ಡಿ.ಎಲ್.ನ 203ನೇ ಆಡಳಿತ ಮಂಡಳಿ ಸಭೆಯಲ್ಲೇ ನಿರ್ಣಯ ಕೈಗೊಂಡು 2021ರ ಆಗಸ್ಟ್ 21ರಂದು ಶೇ.7ರಷ್ಟು ಜಾಬ್ ಉಳಿತಾಯ ಕಡಿತಕ್ಕೆ ಸುತ್ತೋಲೆ ಹೊರಡಿಸಲಾಗಿದೆ. ಆಗ ಯಾರ ಸರಕಾರ ಇತ್ತು, ಯಾರು ಕೆ.ಆರ್.ಐ.ಡಿ.ಎಲ್. ಅಧ್ಯಕ್ಷರಾಗಿದ್ದರು ಎಂದು ಈಶ್ವರ್‌ ಖಂಡ್ರೆ ಪ್ರಶ್ನಿಸಿದರು.

ಕೆಆರ್.ಐ.ಡಿ.ಎಲ್. ಸರಕಾರಿ ಸ್ವಾಮ್ಯದ ಸಾರ್ವಜನಿಕ ಉದ್ದಿಮೆಯಾಗಿದ್ದು, 203ನೇ ಆಡಳಿತದ ಮಂಡಳಿ ಸಭಾ ನಡಾವಳಿಯಂತೆ ಈ ರೀತಿ ಚಾರ್ಚ್ ಪಡೆಯಲು ಅವಕಾಶ ಇದೆ. ಬಹುಶಃ ಮಾಹಿತಿಯ ಕೊರತೆಯಿಂದ ಶಾಸಕರು ಪತ್ರ ಬರೆದಿರಬಹುದು ಎಂದು ಈಶ್ವರ್‌ ಖಂಡ್ರೆ ಹೇಳಿದರು.

ಆದರೂ ಸಚಿವರ ಹೆಸರು ಹೇಳಿ ಹಣ ಕೇಳುತ್ತಿದ್ದಾರೆ ಎಂಬ ಗುರುತರ ಆರೋಪ ಬಂದಿರುವ ಹಿನ್ನೆಲೆಯಲ್ಲಿ ತನಿಖೆಗೆ ಆದೇಶ ಕೊಟ್ಟಿದ್ದೇನೆ. ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗವುದು ಎಂದರು.

1998ರಿಂದ 2006ರವರೆಗೆ ಅಶೋಕ್ ಅವರು ಬಗರ್ ಹುಕುಂ ಸಮಿತಿ ಅಧ್ಯಕ್ಷರಾಗಿದ್ದರು. ಆಗ ಕಾನೂನು ಬಾಹೀರವಾಗಿ ಅನರ್ಹ ಫಲಾನುಭವಿಗಳಿಗೆ 2500 ಎಕರೆ ಗೋಮಾಳವನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಬಂದಿತ್ತು. ಅಶೋಕ್ ಸೇರಿ 10 ಜನರ ವಿರುದ್ಧ ಎಫ್.ಐ.ಆರ್. ಕೂಡ ದಾಖಲಾಗಿತ್ತು. ಅದಾದ ಬಳಿಕ 2019ರಿಂದ 2023ರವರೆಗೆ ಅವರು ಕಂದಾಯ ಸಚಿವರಾಗಿದ್ದರು. ಆಗ ಅವರು ರಾಜೀನಾಮೆ ಕೊಟ್ಟರೇನು? ಎಂದು ಪ್ರಶ್ನಿಸಿದರು.

ಲೊಟ್ಟೆ ಗೊಲ್ಲಹಳ್ಳಿಯ ಜಮೀನು ಡಿನೋಟಿಫಿಕೇಷನ್ ಗೆ ಸಂಬಂಧಿಸಿದ ಮತ್ತೊಂದು ಆರೋಪವೂ ಅವರ ಮೇಲಿತ್ತು. ರಾಜಕೀಯದಲ್ಲಿ ಆಧಾರ ರಹಿತ ಆರೋಪಗಳೂ ಬರುತ್ತವೆ. ಪ್ರತಿಪಕ್ಷಗಳು ತಾಳ್ಮೆಯಿಂದ ಇರಬೇಕು ಎಂದು ಆರ್. ಅಶೋಕ್ ಅವರಿಗೆ ಕಿವಿಮಾತು ಹೇಳಿದರು.

.

Tags

Minister Ishwar Khandre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X