Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅರ್ಹ ಫಲಾನುಭವಿಗಳಿಗಾಗಿ ‘ಗ್ಯಾರಂಟಿ’...

ಅರ್ಹ ಫಲಾನುಭವಿಗಳಿಗಾಗಿ ‘ಗ್ಯಾರಂಟಿ’ ಪರಿಷ್ಕರಣೆ ನಡೆಯುತ್ತಿದೆ : ಸಚಿವ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ14 Aug 2024 7:27 PM IST
share
ಅರ್ಹ ಫಲಾನುಭವಿಗಳಿಗಾಗಿ ‘ಗ್ಯಾರಂಟಿ’ ಪರಿಷ್ಕರಣೆ ನಡೆಯುತ್ತಿದೆ : ಸಚಿವ ಕೆ.ಎಚ್.ಮುನಿಯಪ್ಪ

ಹೊಸದಿಲ್ಲಿ : ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಪಡಿತರ ಚೀಟಿದಾರರಿಗೆ ಮತ್ತು ಗೃಹ ಜ್ಯೋತಿ ಬಳಸುವ ಅರ್ಹರಿಗೆ ಮಾತ್ರ ಸೌಲಭ್ಯಗಳನ್ನು ಕಲ್ಪಿಸಲು ಪರಿಷ್ಕರಣೆ ಮಾಡುತ್ತಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಹೊಸದಿಲ್ಲಿ ಪ್ರವಾಸದಲ್ಲಿರುವ ಅವರು ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯ ಸರಕಾರ ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಈಗಾಗಲೆ, ಅವುಗಳಿಗೆ ಅಗತ್ಯವಿರುವ ಹಣವನ್ನು ಮೀಸಲಿಟ್ಟಿದ್ದೇವೆ. ಗ್ಯಾರಂಟಿಗಳನ್ನು ಮುಂದುವರೆಸುವುದರ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 14 ಬಜೆಟ್ ಗಳನ್ನು ಮಂಡಿಸಿದ್ದು, ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಗ್ಯಾರಂಟಿಗಳಿಗೂ ಹಣವನ್ನು ಮೀಸಲಿಟ್ಟಿದ್ದಾರೆ. ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದ ಸುಮಾರು 4.5 ಕೋಟಿ ಜನರಿಗೆ ಸಹಕಾರಿಯಾಗುತ್ತಿದೆ ಎಂದು ಮುನಿಯಪ್ಪ ಹೇಳಿದ್ದಾರೆ.

ಎಪಿಎಲ್ ಪಡಿತರದಾರರಿಗೂ ನಾವು 15ರೂ. ದರದಲ್ಲಿ ಒಂದು ಕೆಜಿಯಂತೆ ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ನೀಡುತ್ತೇವೆ. ಹಿಂದಿನ ಸರಕಾರದಲ್ಲಿ ಪಡಿತರ ಚೀಟಿಗಾಗಿ ಸಲ್ಲಿಕೆಯಾಗಿರುವ 2.95 ಲಕ್ಷ ಅರ್ಜಿಗಳು ವಿಲೇವಾರಿಗೆ ಬಾಕಿಯಿದ್ದವು. ಇವುಗಳನ್ನು ಪರಿಷ್ಕರಿಸಿದಾಗ 2.38 ಲಕ್ಷ ಅರ್ಜಿಗಳು ಬಿಪಿಎಲ್‍ಗೆ ಒಳಪಡುತ್ತಿದ್ದು, ಉಳಿದ 30-40 ಸಾವಿರ ಅರ್ಜಿಗಳು ಎಪಿಎಲ್‍ಗೆ ಒಳಪಡುತ್ತವೆ ಎಂದು ಅವರು ತಿಳಿಸಿದ್ದಾರೆ.

ಮುಡಾ ವಿಚಾರ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ: ಮುಡಾ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಯಾವುದೆ ಹುರುಳಿಲ್ಲ. ಈಗಾಗಲೇ ಈ ಪ್ರಕರಣದ ಕುರಿತು ತನಿಖೆ ನಡೆಸಲು ನ್ಯಾಯಾಂಗ ಆಯೋಗ ರಚನೆ ಮಾಡಿದ್ದೇವೆ. ಅಲ್ಲದೇ, ಬಿಜೆಪಿ ಸರಕಾರದ ಅವಧಿಯಲ್ಲಿ ನಿವೇಶನ ಹಂಚಿಕೆ ಮಾಡಿದ್ದು, ಇದರಲ್ಲಿ ಸಿದ್ದರಾಮಯ್ಯ ಪಾತ್ರ ಏನು ಇಲ್ಲ ಎಂದು ಮುನಿಯಪ್ಪ ಹೇಳಿದ್ದಾರೆ.

ಕ್ಷುಲ್ಲಕ ಕಾರಣ ಇಟ್ಟುಕೊಂಡು ಬೆಂಗಳೂರಿನಿಂದ ಮೈಸೂರುವರೆಗೆ ವಿರೋಧ ಪಕ್ಷಗಳು ಪಾದಯಾತ್ರೆ ಮಾಡಿವೆ. ಕೇಂದ್ರದಲ್ಲಿ ಸರಕಾರ ರಚಿಸಿ ಅಧಿಕಾರ ನಡೆಸಲು ಜನ ಅವರಿಗೆ ಅವಕಾಶ ಕೊಟ್ಟಿದ್ದಾರೆ. ಅದೇ ರೀತಿ, ರಾಜ್ಯದಲ್ಲಿ 136 ಸ್ಥಾನಗಳನ್ನು ಕೊಟ್ಟು ನಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ಅಲ್ಲಿ, ನಾವು ಇಲ್ಲಿ ಕೆಲಸ ಮಾಡಬೇಕೆ ಹೊರತು, ಕುತಂತ್ರದಿಂದ ರಾಜಕೀಯ ಮಾಡಬಾರದು ಎಂದು ಮುನಿಯಪ್ಪ ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಸೇರಿದಂತೆ ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ರಾಜ್ಯದ ಅಭಿವೃದ್ಧಿಗಾಗಿ ನಮ್ಮ ಸರಕಾರಕ್ಕೆ ಸಹಕಾರ ನೀಡಬೇಕು ಎಂದು ಅವರು ಕೋರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X