Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ...

ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ: ಸಚಿವ ಕೃಷ್ಣಬೈರೇಗೌಡ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2026 11:09 PM IST
share
ಸಮಗ್ರ ಯೋಜನೆ ರೂಪಿಸಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ: ಸಚಿವ ಕೃಷ್ಣಬೈರೇಗೌಡ ಸೂಚನೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಸಮಗ್ರ ಯೋಜನೆ ರೂಪಿಸಿಕೊಂಡು, ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಲ್ಲಿ ಜುಲೈ 1ರಿಂದ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’ ಕೈಗೆತ್ತಿಕೊಳ್ಳುವ ಸಂಬಂಧ ಸೋಮವಾರ ನಗರದಲ್ಲಿ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಆದೇಶ ಹಾಗೂ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣಾ ಕಾಯ್ದೆಯನ್ನು ಪಾಲಿಸಬೇಕು ಎಂದರು.

ಮೊದಲಿಗೆ ಯಾವ ಯಾವ ರಸ್ತೆಗಳಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂಬುದರ ಪಟ್ಟಿಯನ್ನು ಸಿದ್ಧಪಡಿಸಬೇಕು. ನಂತರ ಅಂಗಡಿ ಮಾಲಕರು ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸಬೇಕು. ಅನಂತರ ನೋಟಿಸ್ ನೀಡಿ, ಅದರ ಬಳಿಕ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣಬೈರೇಗೌಡ ನಿರ್ದೇಶನ ನೀಡಿದರು.

ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಪಾಲಿಕೆಯ ಅಧಿಕಾರಿಗಳು, ಉದ್ದಿಮೆ ಪರವಾನಗಿ ನೀಡುವ ಆರೋಗ್ಯಾಧಿಕಾರಿಗಳು, ಭದ್ರತೆಗಾಗಿ ಪೆÇಲೀಸ್ ಸಿಬ್ಬಂದಿ ಹಾಗೂ ಒತ್ತುವರಿ ತೆರವು ತಂಡಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳು ಸೇರಿದಂತೆ ಪ್ರಮುಖ ರಸ್ತೆಗಳನ್ನು ನಾನ್-ವೆಂಡಿಂಗ್ ವಲಯಗಳಾಗಿ ಅಧಿಸೂಚನೆ ಹೊರಡಿಸಲು ಕ್ರಮವಹಿಸಬೇಕು ನಗರದಲ್ಲಿ ಸುಮಾರು 15 ಸಾವಿರ ಕಿ.ಮೀ. ರಸ್ತೆಗಳಿದ್ದು, ಅವುಗಳಲ್ಲಿ ಸುಮಾರು 1500 ಕಿ.ಮೀ. ರಸ್ತೆಗಳನ್ನು ನಾನ್-ವೆಂಡಿಂಗ್ ವಲಯಗಳಾಗಿ ಗುರುತಿಸಬೇಕು. ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ನಡೆಸಲು ಬೀದಿ ವ್ಯಾಪಾರಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ನಗರದಲ್ಲಿ ಬೀದಿ ವ್ಯಾಪಾರಿಗಳು ಜೀವನ ನಡೆಸಲು ಮುಕ್ತ ಅವಕಾಶವಿದೆ. ಪಾಲಿಕೆ ಗುರುತಿಸುವ ನಾನ್-ವೆಂಡಿಂಗ್ ವಲಯಗಳ ರಸ್ತೆಗಳನ್ನು ಹೊರತುಪಡಿಸಿ ಉಳಿದ ರಸ್ತೆಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಮುಕ್ತವಾಗಿ ವ್ಯಾಪಾರ ನಡೆಸಬಹುದು ಎಂದು ಕೃಷ್ಣಬೈರೇಗೌಡ ಹೇಳಿದರು.

ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಕುರಿತು ನಾಗರಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು. ಯಾವ ರಸ್ತೆಗಳಲ್ಲಿ ಕಾರ್ಯಾಚರಣೆ ನಡೆಯಲಿದೆಯೋ, ಆ ರಸ್ತೆಗಳಲ್ಲಿ ಮುಂಚಿತವಾಗಿಯೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಾಗೃತಿ ಕಾರ್ಯಕ್ರಮದ ವೇಳೆ ಒತ್ತುವರಿಯನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸದಿದ್ದರೆ ಪಾಲಿಕೆಯಿಂದ ತೆರವುಗೊಳಿಸಿ, ಕಾನೂನಿನ ಪ್ರಕಾರ ದಂಡ ವಿಧಿಸಲಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡಬೇಕು ಎಂದು ಕೃಷ್ಣಬೈರೇಗೌಡ ತಿಳಿಸಿದರು.

ನಗರದಲ್ಲಿ ಎಲ್ಲೆಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತದೆಯೋ, ಅದೇ ಸ್ಥಳಗಳಲ್ಲಿ ಸಮಾನಾಂತರವಾಗಿ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನೂ ತಕ್ಷಣ ಕೈಗೊಳ್ಳಬೇಕು. ಪಾದಚಾರಿಗಳಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡಿ, ಹಾಳಾಗಿರುವ ಸ್ಲ್ಯಾಬ್‍ಗಳು, ಕರ್ಬ್‍ಗಳು ಹಾಗೂ ಅಗತ್ಯ ಸಿವಿಲ್ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಕೃಷ್ಣಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್., ಪೊಮ್ಮಲ ಸುನೀಲ್ ಕುಮಾರ್, ಜಿ.ಜಗದೀಶ್, ರಮೇಶ್ ಕೆ.ಎನ್., ಡಾ.ರಾಜೇಂದ್ರ ಕೆ.ವಿ., ಸಂಚಾರ ಪೊಲೀಸ್ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಹಾಗೂ ಸಂಬಂಧಪಟ್ಟ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Minister Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X