Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಿಬಿಎ | ದೂರುಗಳ ಪರಿಹಾರಕ್ಕಾಗಿ ‘ಸಹಾಯ...

ಜಿಬಿಎ | ದೂರುಗಳ ಪರಿಹಾರಕ್ಕಾಗಿ ‘ಸಹಾಯ 3.0’ ತಂತ್ರಾಂಶ ಅಭಿವೃದ್ಧಿ : ಸಚಿವ ಕೃಷ್ಣಬೈರೇಗೌಡ

ವಾರ್ತಾಭಾರತಿವಾರ್ತಾಭಾರತಿ9 Sept 2026 6:16 PM IST
share
ಜಿಬಿಎ | ದೂರುಗಳ ಪರಿಹಾರಕ್ಕಾಗಿ ‘ಸಹಾಯ 3.0’ ತಂತ್ರಾಂಶ ಅಭಿವೃದ್ಧಿ : ಸಚಿವ ಕೃಷ್ಣಬೈರೇಗೌಡ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯಲ್ಲಿ ಸಾರ್ವಜನಿಕರ ದೂರುಗಳ ಪರಿಹಾರ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿ, ಪಾರದರ್ಶಕ ಹಾಗೂ ಪರಿಣಾಮಕಾರಿಗೊಳಿಸುವ ಉದ್ದೇಶದಿಂದ ‘ಸಹಾಯ 3.0’ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಜಿಬಿಎ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ನಗರದಲ್ಲಿ ‘ಸಹಾಯ 3.0’ ತಂತ್ರಾಂಶ ಹಾಗೂ ರಸ್ತೆ ಇನ್‍ಫ್ರಾಸ್ಟ್ರಕ್ಚರ್ ಮ್ಯಾನೇಜ್‍ಮೆಂಟ್ ಸಿಸ್ಟಮ್ ಕುರಿತು ಬುಧವಾರ ಜಿಬಿಎ ಕೇಂದ್ರ ಕಚೇರಿಯ ನೌಕರರ ಭವನದಲ್ಲಿ ನಾಗರಿಕರೊಂದಿಗೆ ನಡೆದ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ‘ಸಹಾಯ 2.0’ ತಂತ್ರಾಂಶದಲ್ಲಿ ಈಗಾಗಲೇ ಕೆಲವು ಬದಲಾವಣೆಗಳನ್ನು ತರಲಾಗಿದೆ. ಇದೀಗ ಅದನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ನಾಗರಿಕರೊಂದಿಗೆ ಸಮಾಲೋಚನೆ ನಡೆಸಿ, ಅವರು ನೀಡುವ ಮೌಲ್ಯಯುತ ಸಲಹೆಗಳನ್ನು ಅಳವಡಿಸಿಕೊಂಡು ‘ಸಹಾಯ 3.0’ ತಂತ್ರಾಂಶವನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ನಾಗರಿಕರು ದೂರು ಸಲ್ಲಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಲು ಫೋಟೋ ಮತ್ತು ಲೊಕೇಶನ್ ಜೊತೆಗೆ ಧ್ವನಿ ಸಂದೇಶ ಅಪ್‍ಲೋಡ್ ಮಾಡುವ ಸೌಲಭ್ಯವೂ ಇರಬೇಕು. ಇದರಿಂದ ದೂರುದಾರರಿಗೆ ತಮ್ಮ ದೂರುಗಳನ್ನು ದಾಖಲಿಸಲು ಮತ್ತಷ್ಟು ಅನುಕೂಲವಾಗಲಿದ್ದು, ದೂರು ಬರೆಯಲು ತೆಗೆದುಕೊಳ್ಳುವ ಸಮಯವೂ ಉಳಿತಾಯವಾಗಲಿದೆ. ಈ ನಿಟ್ಟಿನಲ್ಲಿ ಇನ್ನೂ ಹಲವು ಅಗತ್ಯತೆಗಳಿದ್ದು, ಸಾರ್ವಜನಿಕರು ಹಾಗೂ ತಜ್ಞರಿಂದ ಉತ್ತಮ ಸಲಹೆ-ಆಲೋಚನೆಗಳನ್ನು ಸ್ವೀಕರಿಸಿ ‘ಸಹಾಯ 3.0’ ತಂತ್ರಾಂಶವನ್ನು ಮತ್ತಷ್ಟು ಪರಿಣಾಮಕಾರಿಗೊಳಿಸುವುದು ಈ ಸಮಾಲೋಚನಾ ಸಭೆಯ ಪ್ರಮುಖ ಉದ್ದೇಶವಾಗಿದೆ ಎಂದು ಕೃಷ್ಣ ಬೈರೇಗೌಡ ವಿವರಿಸಿದರು.

ಸರಕಾರದ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕೊರತೆ ನಮ್ಮ ರಾಜ್ಯದ ಅತ್ಯಂತ ಹಳೆಯ ಸಮಸ್ಯೆಗಳಲ್ಲಿ ಒಂದಾಗಿದೆ. ಹೀಗಾಗಿ ಎಲ್ಲಾ ಇಲಾಖೆಗಳನ್ನೂ ಒಳಗೊಂಡ ಒಂದು ಸಮಗ್ರ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಸದ್ಯ ರಸ್ತೆ ಇನ್‍ಫ್ರಾಸ್ಟ್ರಕ್ಚರ್ ಮ್ಯಾನೇಜ್‍ಮೆಂಟ್ ಸಿಸ್ಟಮ್ ಎಂಬ ಹೆಸರಿನಲ್ಲಿ ದತ್ತಾಂಶಗಳನ್ನು ಸ್ವೀಕರಿಸಲಾಗುತ್ತಿದೆ. ಶೀಘ್ರದಲ್ಲೇ ಈ ಪೋರ್ಟಲ್‍ಗೆ ಸೂಕ್ತವಾದ ಹೆಸರನ್ನು ಇಡಲಾಗುವುದು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ರಸ್ತೆ ನಿರ್ಮಾಣ, ಪೈಪ್‍ಲೈನ್ ಅಳವಡಿಕೆ, ವಿದ್ಯುತ್ ಕೇಬಲ್ ಅಳವಡಿಕೆ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳುವ ಮುನ್ನ ವಿವಿಧ ಇಲಾಖೆಗಳ ನಡುವೆ ಸಮನ್ವಯ ಸಾಧಿಸಲು ಈ ಪೋರ್ಟಲ್ ಸಹಕಾರಿಯಾಗಬೇಕು. ಯಾವುದೇ ರಸ್ತೆ ಅಥವಾ ಮೂಲಸೌಕರ್ಯ ಕಾಮಗಾರಿ ಆರಂಭವಾಗುವ ಕನಿಷ್ಠ ಆರು ತಿಂಗಳ ಮುಂಚಿತವಾಗಿಯೇ ಪೋರ್ಟಲ್‍ನಲ್ಲಿ ಮಾಹಿತಿ ದಾಖಲಿಸುವಂತಿರಬೇಕು. ಇದರಿಂದ ಸಾರ್ವಜನಿಕರು ತಮ್ಮ ವೈಯಕ್ತಿಕ ಯೋಜನೆಗಳನ್ನು ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ರಸ್ತೆ ಗುಂಡಿ, ಬೀದಿ ದೀಪದಂತಹ ಪ್ರತಿಯೊಂದು ಸಮಸ್ಯೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಬೇರೆ ಬೇರೆ ತಂತ್ರಾಂಶಗಳ ಅಗತ್ಯವಿಲ್ಲ. ಒಂದೇ ತಂತ್ರಾಂಶದ ಮೂಲಕ ಸಾರ್ವಜನಿಕರಿಂದ ದೂರು ಸ್ವೀಕರಿಸುವುದು, ದೂರು ಪರಿಹರಿಸುವುದು, ಕಾಮಗಾರಿಗಳ ಯೋಜನೆ ಹಾಗೂ ಪ್ರಗತಿ ಪರಿಶೀಲನೆ, ದತ್ತಾಂಶ ನಿರ್ವಹಣೆ ಮತ್ತು ಬ್ಯಾಕ್‍ಎಂಡ್‍ನಲ್ಲಿ ಪಾವತಿ ಪ್ರಕ್ರಿಯೆಗಳನ್ನು ಕೈಗೊಳ್ಳುವಂತಿರಬೇಕು ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಈ ವೇಳೆ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ನಗರ ಪಾಲಿಕೆ ಆಯುಕ್ತರಾದ ರಮೇಶ್ ಡಿ.ಎಸ್., ಜಿ.ಜಗದೀಶ್, ರಮೇಶ್ ಕೆ.ಎನ್., ಡಾ.ರಾಜೇಂದ್ರ ಕೆ.ವಿ., ಉಪ ಆಯುಕ್ತೆ ಗಾಯತ್ರಿ ನಾಯ್ಕ್, ನಾಗರಿಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

‘ಸಹಾಯ 3.0’ ತಂತ್ರಾಂಶ ಕುರಿತು: ಜಿಬಿಎ ವ್ಯಾಪ್ತಿಯಲ್ಲಿ ನಾಗರಿಕರ ದೂರುಗಳನ್ನು ಸ್ವೀಕರಿಸಿ, ಪರಿಹರಿಸುವ ಉದ್ದೇಶದಿಂದ ‘ಸಹಾಯ 2.0’ ಮೂಲಕ ಮೊಬೈಲ್ ಮೂಲಕ ದೂರು ಸಲ್ಲಿಕೆ, ನಿಗದಿತ ಅಧಿಕಾರಿಗಳ ಜವಾಬ್ದಾರಿ, ಎಸ್‍ಎಲ್‍ಎ ಆಧಾರಿತ ದೂರು ಪರಿಹಾರ ವ್ಯವಸ್ಥೆ ಹಾಗೂ ಮೂರು ಹಂತದ ಮೇಲ್ಮನವಿ ವ್ಯವಸ್ಥೆಯನ್ನು ಒಳಗೊಂಡ ಏಕೀಕೃತ ಡಿಜಿಟಲ್ ದೂರು ಪರಿಹಾರ ವೇದಿಕೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ.

ಇದೀಗ ‘ಸಹಾಯ 3.0’ ಅನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಇರುವ ತಂತ್ರಾಂಶದಲ್ಲಿಯೆ ಹೊಸ ವೈಶಿಷ್ಟ್ಯಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ನಾಗರಿಕರು ದೂರುಗಳನ್ನು ಸುಲಭವಾಗಿ ದಾಖಲಿಸುವಂತಾಗಿಸುವುದು ಹಾಗೂ ದೂರು ಪರಿಹಾರದ ಪ್ರತಿಯೊಂದು ಹಂತದಲ್ಲೂ ಹೆಚ್ಚಿನ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸುವುದು ‘ಸಹಾಯ 3.0’ರ ಪ್ರಮುಖ ಉದ್ದೇಶವಾಗಿದೆ.

‘ಸಹಾಯ 3.0’ರಲ್ಲಿ ಪ್ರಸ್ತಾವಿತ ಸುಧಾರಣೆಗಳು :

► ಭಾರತೀಯ ಭಾಷೆಗಳ ಬೆಂಬಲ: ವಿವಿಧ ಭಾರತೀಯ ಭಾಷೆಗಳಲ್ಲಿ ದೂರು ದಾಖಲಿಸಲು ಅನುಕೂಲವಾಗುವ ವ್ಯವಸ್ಥೆ.

► ಧ್ವನಿ ಆಧಾರಿತ ದೂರು ನೋಂದಣಿ: ಟೈಪ್ ಮಾಡುವ ಅಗತ್ಯವಿಲ್ಲದೆ ಧ್ವನಿ ಮೂಲಕ ದೂರು ದಾಖಲಿಸುವ ವ್ಯವಸ್ಥೆ.

► ಕಡಿಮೆ ಬ್ಯಾಂಡ್‍ವಿಡ್ತ್‌ ನಲ್ಲಿಯೂ ಬಳಕೆ: ಕಡಿಮೆ ಇಂಟರ್ನೆಟ್ ವೇಗದಲ್ಲಿಯೂ ವೇದಿಕೆಯನ್ನು ಸುಗಮವಾಗಿ ಬಳಸುವ ವ್ಯವಸ್ಥೆ.

► ಆಯ್ದ ಪ್ರಕರಣಗಳಲ್ಲಿ ಅನಾಮಧೇಯ ದೂರು: ಅಗತ್ಯವಿರುವ ನಿರ್ದಿಷ್ಟ ಪ್ರಕರಣಗಳಲ್ಲಿ ನಾಗರಿಕರ ಗುರುತನ್ನು ಬಹಿರಂಗಪಡಿಸದೆ ದೂರು ಸಲ್ಲಿಸಲು ಅವಕಾಶ.

► ಸರಳ ಮರುತೆರೆಯುವ ವ್ಯವಸ್ಥೆ: ಸಮರ್ಪಕವಾಗಿ ಪರಿಹಾರವಾಗದ ದೂರುಗಳನ್ನು ನಾಗರಿಕರು ಸುಲಭವಾಗಿ ಮರುತೆರೆಯಲು ಅವಕಾಶ.

► ಮುಕ್ತಾಯಕ್ಕೂ ಮುನ್ನ ನಾಗರಿಕರ ದೃಢೀಕರಣ: ದೂರುವನ್ನು ಮುಕ್ತಾಯಗೊಳಿಸುವ ಮೊದಲು ಪರಿಹಾರವಾಗಿರುವುದರ ಕುರಿತು ನಾಗರಿಕರಿಂದ ದೃಢೀಕರಣ ಪಡೆಯುವ ವ್ಯವಸ್ಥೆ.

► ಸಾರ್ವಜನಿಕ ಕಾರ್ಯಕ್ಷಮತೆ ಡ್ಯಾಶ್‍ಬೋರ್ಡ್: ದೂರುಗಳ ಸ್ವೀಕೃತಿ, ಪರಿಹಾರ ಹಾಗೂ ಬಾಕಿ ಇರುವ ಪ್ರಕರಣಗಳ ಕುರಿತು ಸಾರ್ವಜನಿಕರಿಗೆ ಪಾರದರ್ಶಕ ಮಾಹಿತಿಯನ್ನು ಒದಗಿಸುವ ವ್ಯವಸ್ಥೆ.

► ಸ್ವಯಂಚಾಲಿತ ಎಸ್.ಎಲ್.ಎ. ಎಚ್ಚರಿಕೆಗಳು: ನಿಗದಿತ ಎಸ್.ಎಲ್.ಎ. ಅವಧಿ ಮೀರದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ವಯಂಚಾಲಿತ ಎಚ್ಚರಿಕೆ ನೀಡುವ ವ್ಯವಸ್ಥೆ.

► ಅಧಿಕಾರಿಗಳ ಜವಾಬ್ದಾರಿಯ ಸ್ಪಷ್ಟತೆ: ಪ್ರತಿ ದೂರಿಗೆ ಸಂಬಂಧಿಸಿದ ಜವಾಬ್ದಾರಿಯುತ ಅಧಿಕಾರಿಯ ವಿವರಗಳನ್ನು ಸ್ಪಷ್ಟವಾಗಿ ಪ್ರದರ್ಶಿಸುವ ವ್ಯವಸ್ಥೆ.

► ಏಕರೂಪದ ಸ್ಥಳ ಪರಿಶೀಲನೆ: ದೂರುಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಏಕರೂಪದ ಸ್ಥಳ ಪರಿಶೀಲನಾ ವ್ಯವಸ್ಥೆಯನ್ನು ಜಾರಿಗೆ ತರುವುದು.

Tags

Minister Krishna Byre Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X