Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಮೋದಿ ಚುನಾವಣೆ ಕಾರಣಕ್ಕೆ...

ಪ್ರಧಾನಿ ಮೋದಿ ಚುನಾವಣೆ ಕಾರಣಕ್ಕೆ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರುತ್ತಿರುವುದು ಆತಂಕಕಾರಿ : ಸಚಿವ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ8 May 2024 10:33 PM IST
share
ಪ್ರಧಾನಿ ಮೋದಿ ಚುನಾವಣೆ ಕಾರಣಕ್ಕೆ ಮುಸ್ಲಿಂ ಸಮುದಾಯದ ವಿರುದ್ದ ದ್ವೇಷ ಕಾರುತ್ತಿರುವುದು ಆತಂಕಕಾರಿ : ಸಚಿವ ಮಹದೇವಪ್ಪ

ಬೆಂಗಳೂರು : ಇತ್ತೀಚೆಗೆ ಅಂಬೇಡ್ಕರ್ ಮೇಲೆ ನಕಲಿ ಪ್ರೀತಿ ತೋರುತ್ತಿರುವ ಪ್ರಧಾನಿ ಮೋದಿ, ಅವರ ಮಾತುಗಳನ್ನು ಗಾಳಿಗೆ ತೂರಿ ತಾನೊಬ್ಬ ಎಲ್ಲ ಸಮುದಾಯಗಳ ಪ್ರಧಾನಿ ಎಂಬುದನ್ನು ಮರೆತು, ಚುನಾವಣೆಯ ಕಾರಣಕ್ಕೆ ಮುಸ್ಲಿಂ ಸಮುದಾಯಗಳ ವಿರುದ್ದ ದ್ವೇಷ ಕಾರುತ್ತಿರುವುದು ಆತಂಕಕಾರಿ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬುಧವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ಈ ದೇಶದ ಅಲ್ಪಸಂಖ್ಯಾತರು, ಇಲ್ಲಿನ ಬಹುಸಂಖ್ಯಾತರ ಮೇಲೆ ನಂಬಿಕೆಯಿಟ್ಟು ಜೀವಿಸಲು ನಿರ್ಧರಿಸಿದ್ದಾರೆ. ನಮ್ಮ ಮೇಲೆ ವಿಶ್ವಾಸವಿಟ್ಟ ಅವರೊಂದಿಗೆ ಸೌಹಾರ್ದತೆಯಿಂದ ಇದ್ದು ಅವರನ್ನು ಕಾಪಾಡಬೇಕಾದ್ದು ಭಾರತೀಯರಾದ ನಮ್ಮ ಜವಾಬ್ದಾರಿ ಎಂದು ಅಂಬೇಡ್ಕರ್ ಹೇಳಿದ್ದರು.

ಮೀಸಲಾತಿಯು ದೌರ್ಜನ್ಯ ಹಾಗೂ ಅವಮಾನಕ್ಕೆ ಒಳಗಾದ ಜನ ಸಮುದಾಯಕ್ಕೆ ನೀಡಬೇಕಾದ ಅಂಶ ಎಂಬ ಸಂಗತಿಯು ಸಂವಿಧಾನದಲ್ಲಿ ಸ್ಪಷ್ಟವಾಗಿದ್ದರೂ ಅದನ್ನು ಬದಿಗೆ ತಳ್ಳಿ ಇಡಬ್ಲೂಎಸ್ ಹೆಸರಿನಲ್ಲಿ ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ಆರ್ಥಿಕತೆಯ ಆಧಾರದಲ್ಲಿ ಮೀಸಲಾತಿ ಘೋಷಿಸಿದ್ದ ಪ್ರಧಾನಿ ಮೋದಿ ಇದೀಗ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಾನು ಮೀಸಲಾತಿಯ ಪರವಾಗಿದ್ದೇನೆ ಎಂದು ಹೇಳುತ್ತಿರುವುದು ನಿಜಕ್ಕೂ ಬೇಜವಾಬ್ದಾರಿ ಪ್ರತೀಕ ಎಂದು ಸಚಿವ ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿ ಮೀಸಲಾತಿ ವಿರೋಧಿ ತಂತ್ರವನ್ನು ಪಾಲಿಸುತ್ತಿದ್ದ ಮತ್ತು ನಾವು ಇರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುವಂತಹ ಸಂಸದರು ಮತ್ತು ಸಚಿವರನ್ನು ತಮ್ಮ ಸಂಪುಟದಲ್ಲಿ ಇಟ್ಟುಕೊಂಡಿರುವ ಪ್ರಧಾನಿ ಮೂಲತಃ ಮೀಸಲಾತಿಯ ವಿರೋಧಿಯೇ ಆಗಿದ್ದು, ಚುನಾವಣಾ ಕಾರಣಕ್ಕಾಗಿ ಸಂವಿಧಾನದ ರಕ್ಷಣೆ ಎಂಬ ಪದವನ್ನು ಬಳಸುತ್ತಿರುವ ಇವರ ಕುತಂತ್ರದ ಮಾತುಗಳನ್ನು ಯಾರೂ ನಂಬಬಾರದು ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X