Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾನೂನಿನ ಪ್ರಕಾರವೇ ಜಿಂದಾಲ್‌‌ ಕಂಪನಿಗೆ...

ಕಾನೂನಿನ ಪ್ರಕಾರವೇ ಜಿಂದಾಲ್‌‌ ಕಂಪನಿಗೆ ಜಮೀನು ಮಾರಾಟ : ಸಚಿವ ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ23 Aug 2024 5:21 PM IST
share
ಕಾನೂನಿನ ಪ್ರಕಾರವೇ ಜಿಂದಾಲ್‌‌ ಕಂಪನಿಗೆ ಜಮೀನು ಮಾರಾಟ : ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಜಿಂದಾಲ್ ಉಕ್ಕು ಕಂಪನಿಗೆ ಕೋರ್ಟ್ ನಿರ್ದೇಶನ ಮತ್ತು ಅದನ್ನು ಅನುಸರಿಸಿ ಹೊರಡಿಸಿದ ಸರಕಾರಿ ಆದೇಶ ಹಾಗೂ ಸಂಪುಟ ಸಭೆಯ ನಿರ್ಣಯದಂತೆಯೇ ಕಾನೂನಿಗೆ ಅನುಸಾರವಾಗಿ 3,677 ಎಕರೆ ಭೂಮಿಯನ್ನು ಗುತ್ತಿಗೆ ಮಾರಾಟ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಸರಕಾರದ್ದು ಎಳ್ಳಷ್ಟೂ ತಪ್ಪಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ.ಪಾಟೀಲ್ ಅವರು ಸಮರ್ಥಿಸಿಕೊಂಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಳ್ಳಾರಿ ಜಿಲ್ಲೆಯಲ್ಲಿ ಕಾರ್ಖಾನೆ ಹೊಂದಿರುವ ಜಿಂದಾಲ್ ಕಂಪನಿಗೆ ನಾವೇನೂ ರಿಯಾಯಿತಿ ಕೊಟ್ಟಿಲ್ಲ. ಮಾರುಕಟ್ಟೆ ಬೆಲೆ ಹಿಂದೆ ಏನಿದೆಯೋ ಅದನ್ನು ನಿಗದಿಪಡಿಸಿದ್ದೇವೆ. ಕಂಪನಿ ಕೂಡ ಸರಕಾರದ ಷರತ್ತುಗಳನ್ನು ಪಾಲಿಸಿದೆ. ರಾಜ್ಯದಲ್ಲಿ ಇರುವ ಒಂದು ಲಕ್ಷ ಕೈಗಾರಿಕೆಗಳಿಗೆ ಯಾವ ನಿಯಮ ಹೇಳಿದ್ದೇವೋ ಅದನ್ನೇ ಜಿಂದಾಲ್ ಗೂ ಅನ್ವಯಿಸಲಾಗಿದೆ. ವಾಸ್ತವವಾಗಿ ಒಂಬತ್ತು ವರ್ಷಗಳ‌ ಕಾಲ ಇದನ್ನು ವೃಥಾ ಎಳೆದಾಡಿದ್ದೇವೆ" ಎಂದಿದ್ದಾರೆ.

ಇನ್ನು ಆರು ತಿಂಗಳಲ್ಲಿ ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಜಿಂದಾಲ್ ರಾಜ್ಯದಲ್ಲಿ 90 ಸಾವಿರ ಕೋಟಿ ರೂ. ಹೂಡಿದ್ದು, 50 ಸಾವಿರ ಉದ್ಯೋಗ ಕೊಟ್ಟಿದೆ. ಇಂತಹ ಸಂದರ್ಭದಲ್ಲಿ ಸರಕಾರದ ಕಡೆಯಿಂದ ಹೂಡಿಕೆದಾರರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಹೇಳಿದರು.

ಸರಕಾರವು ಉದ್ಯಮಿಗಳಿಗೆ ಜಮೀನು ಕೊಡುತ್ತದೆ. ಅದರಲ್ಲಿ ಹತ್ತು ವರ್ಷಗಳಲ್ಲಿ ಶೇ 51ರಷ್ಟು ಭೂಮಿಯನ್ನು ಅವರು ಬಳಸಿಕೊಂಡು, ಕಂಪನಿಯನ್ನು ಸಕ್ರಿಯವಾಗಿ ಇಟ್ಟಿರಬೇಕು. ಆಗ ಕೈಗಾರಿಕಾ ನೀತಿಯಂತೆ ಗುತ್ತಿಗೆ ಮಾರಾಟ ಮಾಡಲಾಗುತ್ತದೆ. ಇದರಲ್ಲಿ ಜಿಂದಾಲ್ ಎಲ್ಲೂ ಎಡವಿಲ್ಲ ಎಂದು ಅವರು ನುಡಿದರು.

ನಾವು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿಂದ ಕೈಗಾರಿಕಾ ಕ್ಷೇತ್ರದಲ್ಲಿ ಭಾರೀ ಪೈಪೋಟಿ ಎದುರಿಸುತ್ತಿದ್ದೇವೆ. ಎಷ್ಟೋ ರಾಜ್ಯಗಳು ಉದ್ದಿಮೆಗಳಿಗೆ ಉಚಿತವಾಗಿ ಭೂಮಿ ಕೊಡುತ್ತಿವೆ. ಹಿಂದೆ ಜಿಂದಾಲ್ ಕಂಪನಿಗೆ ಭೂಮಿಯನ್ನು ಲೀಸ್ ಕಂ ಸೇಲ್ ಮಾಡಲು ಕೆಲವರು ಯಾಕೆ ವಿರೋಧಿಸಿದರೋ ಗೊತ್ತಿಲ್ಲ ಎಂದು ಅವರು ವಿವರಿಸಿದ್ದಾರೆ.

ಹಿಂದೆ ನಾವು ಜಿಂದಾಲ್ ವಿರುದ್ಧವೇನೂ ಪ್ರತಿಭಟಿಸಿಲ್ಲ. ಆಗ ನಾವು ಜನಾರ್ದನ ರೆಡ್ಡಿ ವಿರುದ್ಧವಷ್ಟೇ ದನಿ ಎತ್ತಿದ್ದೆವು. ಜತೆಗೆ ಈಗ ಜಿಂದಾಲ್ ಗೆ ಕೊಡುತ್ತಿರುವ ಭೂಮಿಯಲ್ಲಿ ಗಣಿಗಾರಿಕೆಯೇನೂ ನಡೆಯುತ್ತಿರಲಿಲ್ಲ ಎಂದು ಎಂ.ಬಿ.ಪಾಟೀಲ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಆಗಿದೆ :

ಮುಡಾ ಹಗರಣದ ವಿಚಾರದಲ್ಲಿ ರಾಜ್ಯಪಾಲರು ಸ್ವಂತ ವಿವೇಚನೆಯಿಂದ ನಡೆದುಕೊಂಡಿಲ್ಲ. ರಾಜಭವನ ಈಗ ಬಿಜೆಪಿ ಕಚೇರಿಯಾಗಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರ ತಪ್ಪೇನೂ ಇಲ್ಲ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X