Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ...

ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ, ಸರಕಾರದ ತೀರ್ಮಾನಕ್ಕೂ ಸಂಬಂಧವಿಲ್ಲ : ಸಚಿವ ಎಂ.ಬಿ.ಪಾಟೀಲ್‌

ವಾರ್ತಾಭಾರತಿವಾರ್ತಾಭಾರತಿ4 Sept 2024 6:00 PM IST
share
ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ, ಸರಕಾರದ ತೀರ್ಮಾನಕ್ಕೂ ಸಂಬಂಧವಿಲ್ಲ : ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು : "ಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ" ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಬಿಜೆಪಿಯ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

"ನಾನು ಬಾಗ್ಮನೆಯಿಂದ 4 ಕೋಟಿ ರೂ. ಸಾಲ ತೆಗೆದುಕೊಂಡಿದ್ದು 2001ರಲ್ಲಿ, ನೀವು ಬೊಬ್ಬೆ ಹೊಡೆಯುತ್ತಿರುವಂತೆ 2023ರಲ್ಲೂ ಅಲ್ಲ, ಚುನಾವಣೆ ಖರ್ಚಿಗಾಗಿಯೂ ಅಲ್ಲ. ಅವೆಲ್ಲ ನಮ್ಮ ಕೌಟುಂಬಿಕ ವ್ಯವಹಾರ. ಅನೇಕ ಸಲ ಸಾಲ ಪಡೆದು, ವಾಪಸ್ ಕೂಡ ಕೊಟ್ಟಿದ್ದೇನೆ. ಬಾಕಿಯೂ ಇದೆ. ಬಿಜೆಪಿಯವರ ಆರೋಪಗಳು ಸತ್ಯಕ್ಕೆ ದೂರವಾದದ್ದು ಹಾಗೂ ಕುಚೇಷ್ಟೆ ಮತ್ತು ದುರುದ್ದೇಶದಿಂದ ಕೂಡಿವೆ” ಎಂದು ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ʼಬಾಗ್ಮನೆ ಸಂಸ್ಥೆ ಮತ್ತು ನಮ್ಮ ಕುಟುಂಬದ ಒಡನಾಟಕ್ಕೂ ಸರಕಾರದ ತೀರ್ಮಾನಕ್ಕೂ ಯಾವ ಸಂಬಂಧವೂ ಇಲ್ಲ. 2021ರಲ್ಲಿ ಬಿಜೆಪಿ ಸರಕಾರವೇ ತನ್ನ ಆದೇಶದಲ್ಲಿ ನಿಗದಿಪಡಿಸಿದ್ದ ಹಂಚಿಕೆ ದರವನ್ನೇ ವಿಧಿಸಲಾಗಿದೆ. ಇದರಲ್ಲಿ ಯಾವುದೇ ರಿಯಾಯಿತಿ ನೀಡಿಲ್ಲʼ ಎಂದು ಸ್ಪಷ್ಟಪಡಿಸಿದರು.

ನಿವೇಶನ ಹಂಚಿಕೆಗೆ ಪರಿಗಣಿಸುವ ಮಾನದಂಡ ಸಂಸ್ಥೆಯ ಅರ್ಹತೆ, ಸಾಮರ್ಥ್ಯ, ಅನುಭವ ಇತ್ಯಾದಿಯೇ ಹೊರತು ವ್ಯಕ್ತಿ ನಿಷ್ಟ ಮಾನದಂಡಗಳಲ್ಲ. ವಿವಿಧ ಇಲಾಖೆಗಳ ಉನ್ನತಾಧಿಕಾರಿಗಳನ್ನು ಒಳಗೊಂಡ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯ ಸಾಮೂಹಿಕ ಹಾಗೂ ಒಮ್ಮತದ ತೀರ್ಮಾನವೇ ಹೊರತು ವೈಯಕ್ತಿಕ ನಿರ್ಧಾರವಲ್ಲ ಎಂದು ತಿಳಿಸಿದ್ದಾರೆ.

ಚುನಾವಣಾ ಅಫಿಡವಿಟ್‍ನಲ್ಲಿ ಬಹಿರಂಗ : ‘ಚುನಾವಣೆ ವೆಚ್ಚಕ್ಕೆಂದು ಬಾಗ್ಮನೆ ಡೆವಲಪರ್ಸ್‍ನಿಂದ ಸಚಿವ ಎಂ.ಬಿ.ಪಾಟೀಲ್ 4ಕೋಟಿ ರೂ. ಪಡೆದಿರುವುದು ಅವರ ಚುನಾವಣಾ ಅಫಿಡವಿಟ್‍ನಲ್ಲಿಯೆ ಬಹಿರಂಗವಾಗಿದೆ. ಚುನಾವಣೆ ಮುಗಿದ ತತಕ್ಷಣ ಬಾಗ್ಮನೆ ಡೆವಲಪರ್ಸ್‍ನ ಪಾಲುದಾರರ ಮತ್ತೊಂದು ಕಂಪನಿಯಾದ ವೈಗೈ ಇನ್ವೆಸ್ಟ್‍ಮೆಂಟ್ ಪ್ರೈ.ಲಿ ಗೆ ಬೆಂಗಳೂರಿನ ಡಿಫೆನ್ಸ್ ಎಸ್‍ಇಝಡ್ ಪಾರ್ಕ್‍ನಲ್ಲಿ ಅಂದಾಜು 160ಕೋಟಿ ರೂ.ಬೆಲೆಬಾಳುವ 8 ಎಕರೆ ಭೂಮಿ ನೀಡಲಾಗಿದೆ ಎಂದು ಬಿಜೆಪಿ ದೂರಿದೆ.

ಬುಧವಾರ ಈ ಸಂಬಂಧ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ‘ವೈಗೈ ಇನ್ವೆಸ್ಟ್‍ಮೆಂಟ್ ಪ್ರೈ.ಲಿಗೆ ಭೂಮಿ ನೀಡಿದ್ದು ತಮ್ಮ ಸಾಲದ ಋಣಬಾಬತ್ತನ್ನು ತೀರಿಸಲೋ ಅಥವಾ ಅದರಲ್ಲಿಯೂ ವಸೂಲಿಬಾಜಿ ನಡೆದಿದೆಯೋ ಎಂಬುದನ್ನು ಟಕಾಟಕ್ ಎಂದು ಭೂಮಿ ಮಂಜೂರು ಮಾಡಿರುವ ಎಂ.ಬಿ.ಪಾಟೀಲರೇ ತಿಳಿಸಬೇಕು’ ಎಂದು ಆಗ್ರಹಿಸಿತ್ತು.

ಅಲ್ಲದೆ, ಬಾಗ್ಮನೆಗೆ 2005, 2006 ಮತ್ತು 2009ರಲ್ಲೆಲ್ಲ ಅಂದಂದಿನ ಸರಕಾರಗಳು ಕೈಗಾರಿಕಾ ಭೂಮಿ ನೀಡಿವೆ. 2009ರಲ್ಲಿ ಇದೇ ಬಾಗ್ಮನೆ ಸಮೂಹದ ಚಂದ್ರಾ ಡೆವಲಪರ್ಸ್ ಗೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ 25 ಎಕರೆ ಭೂಮಿ ನೀಡಿದ್ದಾಗ ನಿಮ್ಮದೇ ಸರ್ಕಾರ ಇತ್ತಲ್ಲವೇ? ಎಂದು ಎಂ.ಬಿ.ಪಾಟೀಲ್‌ ಪ್ರಶ್ನಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X