Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ...

‘1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ’ | ಪ್ರಗತಿ ಕೇಂದ್ರಿತ ಹೊಸ ಕೈಗಾರಿಕಾ ನೀತಿ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Oct 2024 9:11 PM IST
share
‘1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ’ | ಪ್ರಗತಿ ಕೇಂದ್ರಿತ ಹೊಸ ಕೈಗಾರಿಕಾ ನೀತಿ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಕರ್ನಾಟಕವನ್ನು 1 ಟ್ರಿಲಿಯನ್ ಡಾಲರ್ (85 ಲಕ್ಷ ಕೋಟಿ ರೂ.) ಆರ್ಥಿಕವಾಗಿ ಬೆಳೆಸುವ ಗುರಿಯೊಂದಿಗೆ ಉದ್ಯಮ ಪರಿಣಿತರ ಆಧಾರದ ಮೇಲೆ 2025-30ರ ಅವಧಿಗೆ ಪ್ರಗತಿ ಕೇಂದ್ರಿತ ಕೈಗಾರಿಕಾ ನೀತಿ ರೂಪಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾ (ಆಮ್ ಚಾಮ್) ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ 'ಪರಿವರ್ತನೆಯಾಗುತ್ತಿರುವ ಕರ್ನಾಟಕ' ಕಾರ್ಯಕ್ರಮದಲ್ಲಿ ಅವರು ಪ್ರಕಟಿಸಿದ್ದಾರೆ.

ಅಗತ್ಯಕ್ಕೆ ತಕ್ಕಂತೆ ತಿದ್ದುಪಡಿಗೆ ಅವಕಾಶ ಇರುವಂತಹ ನೀತಿಯನ್ನು ರೂಪಿಸುತ್ತದೆ. ಈ ಎಲ್ಲಾ ವಲಯಗಳ ಉದ್ದಿಮೆದಾರರು ನೀತಿ ರೂಪಿಸುವಲ್ಲಿ ಸಹಕರಿಸಬೇಕು. ಎಲ್ಲ ಹಿತಾಸಕ್ತಿದಾರರೊಂದಿಗೆ ಸಮಾಲೋಚನೆ ನಡೆಸಿ ಎಂದು ಅವರು ಹೇಳಿದರು.

ಆರ್ಥಿಕತೆಯ ಗುರಿಗೆ ಹೆಚ್ಚಿನ ಸಹಭಾಗಿತ್ವಗಳನ್ನು ಸಾಧಿಸಲಾಗುತ್ತದೆ. ಜೊತೆಗೆ, ಮೂಲಸೌಕರ್ಯ, ಕೌಶಲಾಭಿವೃದ್ಧಿ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿನ ಕೊರತೆಗಳನ್ನು ನಿವಾರಿಸಲು ಒತ್ತು ನೀಡಲಾಗುವುದು.ಹೊಸದಾಗಿ ಸ್ಥಾಪನೆಯಾಗುತ್ತಿರುವ ಉದ್ದಿಮೆಗಳ ಬೇಡಿಕೆಗಳನ್ನು ಒದಗಿಸಲು ನಮ್ಮ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲು ಗಮನ ಕೇಂದ್ರೀಕರಿಸಲಾಗಿದೆ ಎಂದು ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.

ಸರ್ಕಾರಿ ಸಂಸ್ಥೆಗಳ ನೆರವಿನಿಂದ ಸಮಗ್ರ ಕೌಶಲ ಕೊರತೆ ಅಧ್ಯಯನ ನಡೆಸಲಾಗಿದೆ. ಈ ಮೂಲಕ, ಪ್ರಸ್ತುತ ಇರುವ ಕೌಶಲಗಳು ಹಾಗೂ ಉದ್ದಿಮೆಗಳಿಗೆ ಕೌಶಲಗಳನ್ನು ಗುರುತಿಸಲಾಗಿದೆ. ಇದನ್ನು ಆಧರಿಸಿ ತರಬೇತಿ ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಕೇವಲ ಆರ್ಥಿಕ ಬೆಳವಣಿಗೆಯಲ್ಲಿದೆ ನಮ್ಮ ವಿವಿಧ ಸಮುದಾಯಗಳ ಜನರನ್ನು ಮೇಲೆತ್ತುವಂಥ ಅವಕಾಶಗಳ ಸೃಷ್ಟಿಗೆ ಸರಕಾರ ಆದ್ಯತೆ ನೀಡಲಿದೆ. ಯುವ ಜನತೆಯ ಸಬಲೀಕರಣದ ಮೂಲಕ ರಾಜ್ಯದಲ್ಲಿ ಎಲ್ಲರನ್ನೂ ಒಳಗೊಳ್ಳುವ ಮೂಲಕ ಪ್ರಗತಿ ಸಾಧಿಸುವುದು ನಮ್ಮ ಉದ್ದೇಶವಾಗಿದೆ. ಉದ್ಯಮದ ನಿರೀಕ್ಷೆ ಹಾಗೂ ನಾಗರಿಕರ ನಿರೀಕ್ಷೆ ಇರುವುದಕ್ಕೆ ಸೂಕ್ತವಾದ ಪರಿಸರ ಸೃಷ್ಟಿಸುತ್ತದೆ ಎಂದು ಎಂ.ಬಿ.ಪಾಟೀಲ್ ನುಡಿದರು.

ಅಮೆರಿಕ ಚೇಂಬರ್ ಆಫ್ ಕಾಮರ್ಸ್ ಇನ್ ಇಂಡಿಯಾದ (ಆಮ್ ಚಾಮ್) ರಂಜನಾ ಖನ್ನಾ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ಸೆಲ್ವಕುಮಾರ್ ಸೇರಿದಂತೆ ವಿವಿಧ ಉದ್ಯಮಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X