Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನದಿಗಳ ನೀರು ಕಲುಷಿತಗೊಳಿಸುವ ಕಾರ್ಖಾನೆಗಳ...

ನದಿಗಳ ನೀರು ಕಲುಷಿತಗೊಳಿಸುವ ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ10 Sept 2026 8:30 PM IST
share
ನದಿಗಳ ನೀರು ಕಲುಷಿತಗೊಳಿಸುವ ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ನದಿಗಳ ನೀರನ್ನು ಕಲುಷಿತಗೊಳಿಸುವ ಯಾವುದೇ ಕೈಗಾರಿಕೆಗಳು, ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಗುರುವಾರ ನಗರದ ಪರಿಸರ ಭವನದಲ್ಲಿ ಬೆಂಗಳೂರು ಜಲ ಮಂಡಳಿ ಅಧಿಕಾರಿಗಳ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಜೊತೆ ವಿಶೇಷ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.

ಕೈಗಾರಿಕೆಗಳು ತಮ್ಮ ಜವಾಬ್ದಾರಿಯನ್ನು ಮರೆತು ನದಿ ಮೂಲಗಳಿಗೆ ಹಾನಿ ಮಾಡಿದರೆ ಅಂತಹ ಕಾರ್ಖಾನೆಗಳನ್ನು ಯಾವುದೇ ಮುನ್ಸೂಚನೆ ನೀಡದೆ ಮುಚ್ಚಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ನದಿಗಳ ತೀರದಲ್ಲಿರುವ ಎಲ್ಲ ಕಾರ್ಖಾನೆಗಳು ಹಾಗೂ ಕೈಗಾರಿಕೆಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ಸಂದೇಶ ರವಾನಿಸಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಎಸ್‍ಟಿಪಿ(ತ್ಯಾಜ್ಯನೀರು ಶುದ್ಧೀಕರಣ ಘಟಕ) ಅಳವಡಿಸಿಕೊಳ್ಳಬೇಕು. ನಿಯಮ ಮೀರಿ ನೇರವಾಗಿ ನದಿ ನೀರನ್ನು ಕಲುಷಿತಗೊಳಿಸುವ ಕಾರ್ಖಾನೆಗಳ ವಿರುದ್ಧ ಮುಲಾಜಿಲ್ಲದೆ ಬಾಗಿಲು ಹಾಕಿಸಲಾಗುವುದು ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಪ್ರಸ್ತುತ ಕೇವಲ ನಾಲ್ಕೈದು ನದಿಗಳನ್ನು ಹೊರತುಪಡಿಸಿದರೆ ಉಳಿದದ್ದೆಲ್ಲಾ ನದಿಗಳ ನೀರು ಸಂಪೂರ್ಣವಾಗಿ ಕಲುಷಿತಗೊಂಡಿವೆ. ಕೇವಲ ಬೆಂಗಳೂರು ನಗರ ಒಂದರಲ್ಲೇ ಬರೋಬ್ಬರಿ ನಾಲ್ಕು ಲಕ್ಷಕ್ಕೂ ಅಧಿಕ ಬೋರ್‍ವೆಲ್‍ಗಳಿವೆ ಎಂದು ರಾಮಲಿಂಗಾರೆಡ್ಡಿ ಆತಂಕ ವ್ಯಕ್ತಪಡಿಸಿದರು.

ಬೆಂಗಳೂರು ನಗರದಿಂದ ಪ್ರತಿದಿನ ಅಂದಾಜು 2,500 ಎಂಎಲ್‍ಡಿ (ಮಿಲಿಯನ್ ಲೀಟರ್) ಪ್ರಮಾಣದ ಚರಂಡಿ ಹಾಗೂ ಕೊಳಚೆ ನೀರು ಉತ್ಪತ್ತಿಯಾಗುತ್ತಿದೆ. ಈ ಕೊಳಚೆ ನೀರನ್ನು ಪರಿಸರಕ್ಕೆ ಬಿಡುವ ಮುನ್ನ ಕಡ್ಡಾಯವಾಗಿ ಸೆಕೆಂಡರಿ ಟ್ರೀಟ್‍ಮೆಂಟ್ ಅಂದರೆ ದ್ವಿತೀಯ ಹಂತದ ಶುದ್ಧೀಕರಣಕ್ಕೆ ಒಳಪಡಿಸಬೇಕಾದ ಅನಿವಾರ್ಯತೆಯಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸದ್ಯ ಬೆಂಗಳೂರಿನಿಂದ ಹರಿದು ಹೋಗುತ್ತಿರುವ ಒಟ್ಟು ನೀರಿನಲ್ಲಿ ಬಹುಪಾಲು ನೇರವಾಗಿ ಕಾವೇರಿ ನದಿ ಹಾಗೂ ಇತರ ಜಲಮೂಲಗಳನ್ನು ಸೇರುತ್ತಿದೆ. ವಿಶೇಷವಾಗಿ, ಪ್ರತಿದಿನ ಸುಮಾರು 1,100 ಎಂಎಲ್‍ಡಿಯಷ್ಟು ಭಾರಿ ಪ್ರಮಾಣದ ನೀರು ಯಾವುದೇ ರೀತಿಯ ವೈಜ್ಞಾನಿಕ ಟ್ರೀಟ್‍ಮೆಂಟ್ ಇಲ್ಲದೆ ನೇರವಾಗಿ ನದಿಗಳಿಗೆ ಹರಿದು ಹೋಗುತ್ತಿರುವುದು ಆಂತಕಕಾರಿ ವಿಷಯವಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನಿಂದ ಹೊರಹಾಕಲಾಗುತ್ತಿರುವ ಈ ಸಂಸ್ಕರಿಸದ ನೀರಿನಿಂದಲೇ ಕುಡಿಯುವ ನೀರು ಕಲುಷಿತಗೊಳ್ಳುತ್ತಿದೆ ಎಂದು ತಮಿಳುನಾಡು ಸರಕಾರ ಎನ್‍ಜಿಟಿಗೆ ದೂರು ನೀಡಿದೆ. ಈ ಎಲ್ಲಾ ಕಾನೂನು ಹಾಗೂ ಪರಿಸರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ನಮ್ಮ ಸರಕಾರವು ತ್ವರಿತಗತಿಯಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕಗಳ ನಿರ್ಮಾಣ ಹಾಗೂ ಸುಧಾರಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಜಲ ಮಂಡಳಿ ಅಧಿಕಾರಿಗಳು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Minister Ramalingareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X