ಋತುಚಕ್ರ ರಜೆ ನೀತಿ: ಕಾನೂನು ಆಯೋಗದ ಅಧ್ಯಕ್ಷರೊಂದಿಗೆ ಸಚಿವ ಸಂತೋಷ್ ಲಾಡ್ ಚರ್ಚೆ

ಬೆಂಗಳೂರು: ಋತುಚಕ್ರ ರಜೆ ನೀತಿ ಕುರಿತು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ರಾಜ್ಯ ಕಾನೂನು ಆಯೋಗದ ಅಧ್ಯಕ್ಷ ಅಶೋಕ್ ಬಿ.ಹಿಂಚಿಗೇರಿ ಅವರೊಂದಿಗೆ ಚರ್ಚೆ ನಡೆಸಿದರು.
ಸೋಮವಾರ ನಗರದಲ್ಲಿರುವ ಸಚಿವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಅಶೋಕ್ ಬಿ.ಹಿಂಚಿಗೇರಿ, ಋತುಚಕ್ರ ರಜೆ ನೀತಿಗೆ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿರುವ ಸಂಬಂಧ ಚರ್ಚೆ ನಡೆಸಿದರು.
ಈ ನೀತಿಯನ್ವಯ ಖಾಸಗಿ ಮತ್ತು ಸರಕಾರಿ ವಲಯಗಳಲ್ಲಿ ದುಡಿಯುವ ಉದ್ಯೋಗಸ್ಥ ಮಹಿಳೆಯರು ತಿಂಗಳಲ್ಲಿ ಒಂದು ದಿನ ವೇತನ ಸಹಿತ ಋತುಚಕ್ರ ರಜೆಯನ್ನು ಪಡೆಯಬಹುದಾಗಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.
Next Story





