Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆಫ್ರಿಕಾದ ಗಣಿ ಸಂಸ್ಥೆಯಲ್ಲಿ ಪಾಲಿದ್ದರೆ...

ಆಫ್ರಿಕಾದ ಗಣಿ ಸಂಸ್ಥೆಯಲ್ಲಿ ಪಾಲಿದ್ದರೆ ಈ.ಡಿ ಸಾಬೀತುಪಡಿಸಲಿ : ಸಚಿವ ಸತೀಶ್ ಜಾರಕಿಹೊಳಿ ಸವಾಲು

"ನನ್ನ ವಿರುದ್ಧ ಈ.ಡಿಗೆ ಯಾರು ದೂರು ನೀಡಿದ್ದಾರೆಂಬುದು ಗೊತ್ತಿದೆ"

ವಾರ್ತಾಭಾರತಿವಾರ್ತಾಭಾರತಿ12 Sept 2026 6:23 PM IST
share
ಆಫ್ರಿಕಾದ ಗಣಿ ಸಂಸ್ಥೆಯಲ್ಲಿ ಪಾಲಿದ್ದರೆ ಈ.ಡಿ ಸಾಬೀತುಪಡಿಸಲಿ : ಸಚಿವ ಸತೀಶ್ ಜಾರಕಿಹೊಳಿ ಸವಾಲು

ಬೆಂಗಳೂರು : ‘ಆಫ್ರಿಕಾದಲ್ಲಿ ಚಿನ್ನ ಗಣಿಗಾರಿಕೆ ಸಂಸ್ಥೆಯಲ್ಲಿ ಶೇ.40ರಷ್ಟು ಪಾಲಿದೆ’ ಎಂದು ಜಾರಿ ನಿರ್ದೇಶನಾಲಯದ(ಈಡಿ) ಅಧಿಕಾರಿಗಳು ತಿಳಿಸಿದ್ದು, ಈ ಬಗ್ಗೆ ದಾಖಲೆಯಿದ್ದರೆ ಸಾಬೀತುಪಡಿಸಲಿ’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಸವಾಲು ಹಾಕಿದ್ದಾರೆ.

ಶನಿವಾರ ನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಜಾರಿ ನಿರ್ದೇಶನಾಲಯದ ಮಾಧ್ಯಮ ಪ್ರಕಟಣೆಯಲ್ಲಿ ಹೂಡಿಕೆ ಮತ್ತು ಲೋಕೋಪಯೋಗಿ ಇಲಾಖೆ ಲಂಚ ಪಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಲಾಗಿದೆ. ಈ.ಡಿ ಅಧಿಕಾರಿಗಳು ನೋಟಿಸ್ ನೀಡಿದರೆ ಸೂಕ್ತ ಉತ್ತರ, ಸ್ಪಷ್ಟಣೆ ನೀಡಲಾಗುವುದು’ ಎಂದು ಹೇಳಿದರು.

ನನ್ನ ವಿರುದ್ಧ ಈ.ಡಿಗೆ ಯಾರು ದೂರು ನೀಡಿದ್ದಾರೆಂಬುದು ಗೊತ್ತಿದೆ. ರಾಜಕೀಯವಾಗಿ ನನ್ನ ಹೆಸರಿಗೆ ಕಳಂಕ ತರುವ ಪ್ರಯತ್ನ ಮಾಡಿದ್ದಾರೆ. ಏನೇ ಆದರೂ ಜನರ ತೀರ್ಮಾನವೇ ಅಂತಿಮ. ಜನರೆ ಎಲ್ಲದಕ್ಕೂ ಉತ್ತರ ನೀಡಲಿದ್ದಾರೆ. ಈಡಿ ಅಧಿಕಾರಿಗಳು ನನಗೆ ನೋಟಿಸ್ ನೀಡಲಿ, ಉತ್ತರ ಕೊಡುತ್ತೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ನನ್ನ ವಿರುದ್ಧ ದೂರು ನೀಡಿರುವವರು ಯಾರು ಎಂಬ ವಿಚಾರದ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಗಮನಕ್ಕೆ ತಂದಿದ್ದೇನೆ. ಇದರಲ್ಲಿ ನಮ್ಮ ಪಕ್ಷದವರು ಅಥವಾ ಬಿಜೆಪಿಯವರೇ ಇರಬಹುದು. ಈ ಕುರಿತು ಸಿಎಂ ಗಮನಹರಿಸಲಿದ್ದಾರೆ. ಏನೇ ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವು ಇದ್ದೇವೆ. ರಾಜಕೀಯದಲ್ಲಿ ಇದೆಲ್ಲವೂ ಸರ್ವೇ ಸಾಮಾನ್ಯ ಎಂದು ಅವರು ನುಡಿದರು.

ಕಾಂಗ್ರೆಸ್‍ನವರೇ ಟಾರ್ಗೆಟ್: ಸಚಿವ ಸತೀಶ್ ಜಾರಕಿಹೊಳಿ ಮೇಲೆ ಈಡಿ ದಾಳಿ ವಿಚಾರದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಪರಿಶಿಷ್ಟ ಪಂಗಡ(ಎಸ್‍ಟಿ)ದಿಂದ ಬಂದ ಸತೀಶ್ ಅವರು ಅತ್ಯಂತ ದೊಡ್ಡ ಸ್ಥಾನಕ್ಕೆ ಏರಿದ್ದಾರೆ. ಅವರ ಮೇಲೆ ಈಡಿ ದಾಳಿ ಯಾವ ಕಾರಣಕ್ಕಾಗಿ ನಡೆಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಧಾರವಾಡದಲ್ಲಿ ಪ್ರತಿಕಿಯೆ ನೀಡಿದರು.

ರಾಜಕೀಯ ಕ್ಷೇತ್ರದಲ್ಲಿ ಯಾರನ್ನು ಯಾರೂ ಟಾರ್ಗೆಟ್ ಮಾಡುವುದು ಸರಿಯಲ್ಲ. ಆದರೆ, ಈಡಿ ದಾಳಿಯನ್ನು ಗಮನಿಸಿದರೆ ಶೇ.100ರಲ್ಲಿ ಶೇ.90ರಷ್ಟು ಕಾಂಗ್ರೆಸ್ ಪಕ್ಷದವರ ಮೇಲೆಯೇ ದಾಳಿಗಳನ್ನು ನಡೆಸಲಾಗುತ್ತಿದೆ. ಬಿಜೆಪಿ ನಾಯಕರಾದರೆ ಯಾವ ತಪ್ಪೇ ಮಾಡಿಲ್ಲ ಎಂದು ಕ್ಲೀನ್‍ಚೀಟ್ ನೀಡಲಾಗುತ್ತಿದೆ ಎಂದು ಅವರು ದೂರಿದರು.

ಹೂಡಿಕೆ ಮಾಡಿದರೆ ತಪ್ಪೇನು: ‘ವಿದೇಶದಲ್ಲಿ ಕಾನೂನು ಬದ್ಧವಾಗಿ ಬಂಡವಾಳ ಹೂಡಿಕೆ ಮಾಡಿದ್ದರೆ ತಪ್ಪೇನು?. ಪ್ರಧಾನಿ ಮೋದಿಯವರೇ ಭಾರತೀಯರು ದೇಶ-ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡುವಂತಾಗಬೇಕೆಂದು ಕರೆ ನೀಡಿದ್ದಾರೆ. ಅದೇ ರೀತಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ವಿದೇಶದಲ್ಲಿ ಹೂಡಿಕೆ ಮಾಡಲು ಪ್ರಯತ್ನಿಸುತ್ತಿರುವುದರಲ್ಲಿ ತಪ್ಪೇನಿದೆ. ಆದರೆ, ಈಡಿಯವರು ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಏನೇ ಆರೋಪಗಳಿದ್ದರೂ ಅದಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಬೇಕು’

-ಪ್ರಿಯಾಂಕ್ ಖರ್ಗೆ ಗೃಹ ಸಚಿವ

Tags

Minister Satish Jarkiholi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X