Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. "ನನಗೆ ಬಡವರಿಂದ ಹಣ ಪಡೆಯುವ ದಾರಿದ್ರ್ಯ...

"ನನಗೆ ಬಡವರಿಂದ ಹಣ ಪಡೆಯುವ ದಾರಿದ್ರ್ಯ ಬಂದಿಲ್ಲ": ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಝಮೀರ್ ಅಹ್ಮದ್ ಪ್ರತಿಕ್ರಿಯೆ

"ಬಿ ಆರ್ ಪಾಟೀಲ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ"

ವಾರ್ತಾಭಾರತಿವಾರ್ತಾಭಾರತಿ24 Jun 2025 2:15 PM IST
share
ನನಗೆ ಬಡವರಿಂದ ಹಣ ಪಡೆಯುವ ದಾರಿದ್ರ್ಯ ಬಂದಿಲ್ಲ: ವಸತಿ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಝಮೀರ್ ಅಹ್ಮದ್ ಪ್ರತಿಕ್ರಿಯೆ

ಬೆಂಗಳೂರು: ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವಂತಹ ದ್ರಾರಿದ್ರ್ಯ ನನಗೆ ಬಂದಿಲ್ಲ. ಮನೆಗಳನ್ನು ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಬೇರೆಯವರು ಕೇಳುವುದು ಬೇಡ ನಾನೇ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ವಸತಿ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ.

ಮಂಗಳವಾರ ನಗರದಲ್ಲಿರುವ ತಮ್ಮ ಸರಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲ ಬಾರಿ ಶಾಸಕನಾದಗಲೇ ಸಚಿವ ಸ್ಥಾನ ಸಿಕ್ಕಿತ್ತು. ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ನನ್ನ ಒಂದು ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದವನು ನಾನು. ಅಧಿಕಾರಕ್ಕೆ ಅಂಟಿಕೊಂಡು ಕೂರುವ ಜಾಯಮಾನ ನನ್ನದಲ್ಲ ಎಂದು ತಿಳಿಸಿದರು.

ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ. ಅದಕ್ಕೆ ನಮ್ಮ ಇಲಾಖೆಯಲ್ಲಿ ಅವಕಾಶ ಇಲ್ಲ. ಶಾಸಕ ಬಿ.ಆರ್.ಪಾಟೀಲ್ ತುಂಬಾ ಹಿರಿಯರು. ಬಡವರ ಬಗ್ಗೆ ಕಾಳಜಿ ಇರುವವರು. ಯಾವ ಅರ್ಥದಲ್ಲಿ ಅವರು ಹೇಳಿಕೆ ನೀಡಿದ್ದಾರೆ ಎಂದು ಗೊತ್ತಿಲ್ಲ. ನಾನು ಹಣ ಪಡೆದಿರುವುದಾಗಿ ಅವರು ಹೇಳಿದ್ದಾರಾ? ಅವರ ಆಡಿಯೋದಲ್ಲಿ ಮಿನಿಸ್ಟರ್ ಅಂತ ಹೇಳಿದ್ದಾರಾ? ಯಾರು ಹಣ ಪಡೆದವರು ಎಂದು ನಿರ್ದಿಷ್ಟವಾಗಿ ಹೇಳಬೇಕು ತಾನೇ? ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಬಿ.ಆರ್.ಪಾಟೀಲ್ ಆರೋಪದಲ್ಲಿ ಏನಾದರೂ ಸ್ಪಷ್ಟತೆ ಇದೆಯಾ? ಯಾವ ಅಧಿಕಾರಿ ಹಣ ಕೇಳಿದ ಎಂಬುದರ ಬಗ್ಗೆಯೂ ಹೇಳಿಲ್ಲ. ಪಂಚಾಯತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ಕೊಡಲಿ. ಈ ಆರೋಪದ ಬಗ್ಗೆ ತನಿಖೆಗೆ ಆದೇಶಿಸಲಾಗುವುದು. ತನಿಖೆಯಲ್ಲಿ ಯಾರಾದರೂ ತಪ್ಪು ಮಾಡಿರುವುದು ಸಾಬೀತಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ವಿಚಾರದ ಬಗ್ಗೆ ಎಲ್ಲ ಮಾಹಿತಿ ತಿಳಿಸಿದ್ದೇನೆ. ನಾನು ಪ್ರವಾಸದಲ್ಲಿದ್ದ ಕಾರಣ ಬಿ.ಆರ್.ಪಾಟೀಲ್ ಅವರೊಂದಿಗೆ ಮಾತನಾಡಲು ಆಗಲಿಲ್ಲ. ಈ ಬಗ್ಗೆ ಅವರ ಜೊತೆ ಚರ್ಚೆ ಮಾಡುತ್ತೇನೆ. ಮನೆಗಳ ಹಂಚಿಕೆ ಸಂಬಂಧ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ನಾನು ವಸತಿ ಸಚಿವನಾದ ನಂತರ ಬಡವರಿಗೆ 36 ಸಾವಿರ ಮನೆಗಳನ್ನು ನೀಡಿದ್ದೇನೆ. ಬಿಜೆಪಿ, ಜೆಡಿಎಸ್‍ನವರು ಒಂದು ಮನೆ ಕೊಟ್ಟಿದ್ದಾರಾ? ಕೊಟ್ಟಿದ್ದರೆ ಹೇಳಲಿ. ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ. ಮೂರು ಹಂತಗಳಲ್ಲಿ ನಾವು ಮನೆಗಳನ್ನು ನೀಡುತ್ತಿದ್ದೇವೆ. ಶಾಸಕರ ಒತ್ತಡದಿಂದಾಗಿ ಬಡವರ ಮನೆಗಳಿಗೆ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು 1.20 ಲಕ್ಷ ರೂ.ಗಳಿಂದ 3.50 ಲಕ್ಷ ರೂ.ಗಳಿಗೆ ಹೆಚ್ಚಿಸಲು ಮುಖ್ಯಮಂತ್ರಿ ಸಹಮತಿ ನೀಡಿದರು ಎಂದು ಅವರು ತಿಳಿಸಿದರು.

ಆಳಂದ ಕ್ಷೇತ್ರಕ್ಕೆ ಬಿ.ಆರ್.ಪಾಟೀಲ್ ಅವರ ಪತ್ರದ ಆಧಾರದಲ್ಲೇ 950 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಈ ಹಿಂದೆ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 14 ಲಕ್ಷ ಮನೆ ಕೊಟ್ಟಿದ್ದರು. ನಂತರ ಬಂದ ಸಮ್ಮಿಶ್ರ ಸರಕಾರ 5.8 ಲಕ್ಷ ಮನೆಗಳನ್ನು ನೀಡಿದೆ. ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿ ಇಲ್ವಾ? ಎಂದು ಝಮೀರ್ ಅಹ್ಮದ್ ಖಾನ್ ಪ್ರಶ್ನಿಸಿದರು.

ರಾಜೀವ್ ಗಾಂಧಿ ವಸತಿ ನಿಗಮದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಝಮೀರ್ ಅಹ್ಮದ್ ರಾಜೀನಾಮೆ ನೀಡಲಿ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೇಳೂರು ಗೋಪಾಲಕೃಷ್ಣ ಅವರಿಗೆ ವಾಸ್ತವ ಪರಿಸ್ಥಿತಿ ಬಗ್ಗೆ ಮಾಹಿತಿ ಇಲ್ಲ. ಮನೆ ಹಂಚಿಕೆ ವಿಚಾರದಲ್ಲಿ ಸಚಿವರ ಪಾತ್ರವೇ ಇರುವುದಿಲ್ಲ. ಫಲಾನುಭವಿಗಳ ಆಯ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತದೆ. ಶಾಸಕರ ಪತ್ರದ ಆಧಾರದಲ್ಲಿ ಮನೆ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

Tags

Zameer Ahmed Khan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X