Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೋದಿಯವರ ಮಹಿಳಾ ಮೀಸಲಾತಿ 2034 ರಲ್ಲೂ...

ಮೋದಿಯವರ ಮಹಿಳಾ ಮೀಸಲಾತಿ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Sept 2023 8:28 PM IST
share
ಮೋದಿಯವರ ಮಹಿಳಾ ಮೀಸಲಾತಿ 2034 ರಲ್ಲೂ ಜಾರಿ ಆಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಇಲ್ಲ. ಡೀಲಿಮಿಟೇಷನ್, ಜಾತಿ ಗಣತಿಯ ಕೊಕ್ಕೆ ಹಾಕಿ ಮಸೂದೆಗೆ 15 ವರ್ಷ ಆಯಸ್ಸು ಫಿಕ್ಸ್ ಮಾಡಿದ್ದೇಕೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು ಸೆ 23: ʼಮಹಿಳಾ ಮೀಸಲಾತಿಗೆ ಡೀಲಿಮಿಟೇಷನ್, ಜನ ಗಣತಿಯ ಕೊಕ್ಕೆ ಹಾಕಿ ಆಯಸ್ಸು ಫಿಕ್ಸ್ ಮಾಡಿರುವುದು ಬಿಜೆಪಿಯ ಡೋಂಗಿತನ. ಆದ್ದರಿಂದ ಮಹಿಳಾ ಮೀಸಲಾತಿ ಜಾರಿ ಆಗುವುದೇ ಸಂಶಯʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಡಾ.ರಾಮ ಮನೋಹರ ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಮತ್ತು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ "ಮಹಿಳಾ ಮೀಸಲಾತಿ" ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರಿಗೆ ಮೀಸಲಾತಿ ಕೊಡಬೇಕು ಎನ್ನುವ ಪ್ರಾಮಾಣಿಕ ಕಾಳಜಿ ಬಿಜೆಪಿಗೆ ಇದ್ದಿದ್ದರೆ ಇಷ್ಟೊಂದು ಅಡೆತಡೆಗಳನ್ನು ಹಾಕುತ್ತಿರಲಿಲ್ಲ. ನರೇಂದ್ರ ಮೋದಿಯವರು ಜಾರಿ ಮಾಡಿರುವ ಮಹಿಳಾ ಮೀಸಲಾತಿಗೆ ಕೇಂದ್ರ ಸರ್ಕಾರ 15 ವರ್ಷ ಆಯಸ್ಸು ಫಿಕ್ಸ್ ಮಾಡಿದೆ. ಕಾಯ್ದೆ ಜಾರಿಯಾದ ದಿನದಿಂದ 15 ವರ್ಷ ಆಯಸ್ಸು ಇದೆ. ಅಂದರೆ ಈಗ ಕಾಯ್ದೆ ಜಾರಿ ಆಗಿದೆ. ಇದಕ್ಕೆ ಇನ್ನು 15 ವರ್ಷ ಮಾತ್ರ ಆಯಸ್ಸು. ಆದರೆ, ಜಾತಿ ಜನಗಣತಿ ಮತ್ತು ಡೀಲಿಮಿಟೇಷನ್ ಎನ್ನುವ ಎರಡು ಕೊಕ್ಕೆ ಹಾಕಿಟ್ಟಿದ್ದಾರೆ. ಇವರೆಡೂ ಮುಗಿಯುವ ವೇಳೆಗೆ 15 ವರ್ಷ ಆಗಿರತ್ತೆ. ಹೀಗಾಗಿ ಮಹಿಳಾ ಮೀಸಲಾತಿ ಕಾಯ್ದೆಗೆ ಜಾರಿ ಆಗುವ ಮೊದಲೇ ಅದರ ಆಯಸ್ಸೇ ಮುಗಿದು ಹೋಗಿರುತ್ತದೆ. ಇದು ಮಹಿಳೆಯರಿಗೆ ಮಾಡಿರುವ ಪರಮ ವಂಚನೆ ಎಂದು ಟೀಕಿಸಿದರು.

ಮಹಿಳಾ ಮೀಸಲಾತಿ ಜಾರಿ ಮಾಡುವುದಕ್ಕೆ ದೇವರೇ ನನ್ನನ್ನು ಕಳುಹಿಸಿದ್ದು ಎಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಮೊನ್ನೆ ಹೇಳಿದರು. ಈಗ ನೋಡಿದ್ರೆ ಈ ರೀತಿ ವಂಚನೆ ಮಹಿಳೆಯರಿಗೆ ಆಗಿದೆ. ಮಹಿಳೆಯರಿಗೆ ವಂಚನೆ ಮಾಡಿ ಅಂತನಾ ದೇವರು ನಿಮ್ಮನ್ನು ಕಳುಹಿಸಿದ್ದು ಎಂದು ಮುಖ್ಯಮಂತ್ರಿ ಗಳು ವ್ಯಂಗ್ಯವಾಗಿ ಪ್ರಧಾನಿಯವರನ್ನು ಪ್ರಶ್ನಿಸಿದರು.

ಮಹಿಳಾ ಮೀಸಲಾತಿ ಬಿಲ್ ಸಿದ್ದಪಡಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಯಾವತ್ತೂ ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಇದೆ. ಮಹಿಳಾ ಮೀಸಲಾತಿಯಲ್ಲೂ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಮೀಸಲಾತಿ ಇರಬೇಕು ಎನ್ನುವುದಕ್ಕೆ ನನ್ನ ಪೂರ್ಣ ಬೆಂಬಲ ಇದೆ. ಅದರಲ್ಲೂ ಶೇ 33 ಮಾತ್ರವಲ್ಲ, ಶೇ 50 ರಷ್ಟು ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದರು.

ಈಗ ಮೋದಿಯವರು ಜಾರಿ ಮಾಡಿದ್ದೇನೆ ಎನ್ನುತ್ತಿರುವ ಈ ಮಹಿಳಾ ಮೀಸಲಾತಿ 2024 ರಲ್ಲೂ ಜಾರಿ ಆಗುವುದಿಲ್ಲ. 2029 ರಲ್ಲೂ ಜಾರಿ ಆಗುವುದಿಲ್ಲ. 2034 ರಲ್ಲೂ ಜಾರಿ ಆಗುವುದಿಲ್ಲ. ಅಷ್ಟೊತ್ತಿಗೆ ಕಾಯ್ದೆಯ ಆಯಸ್ಸೇ ಮುಗಿದಿರುತ್ತದೆ ಎಂದು ಬಿಡಿ ಬಿಡಿಯಾಗಿ ಬಿಜೆಪಿಯ ತಂತ್ರವನ್ನು ವಿವರಿಸಿದರು.

ಮಹಿಳೆಯರೂ ಶೂದ್ರರ ರೀತಿ ಶಿಕ್ಷಣದಿಂದ ಸಂಪೂರ್ಣ ವಂಚಿತರಾಗಿದ್ದರು. ಮಹಿಳೆಯರ ಹೋರಾಟ ಮತ್ತು ಸಂವಿಧಾನದ ಕಾರಣಕ್ಕೆ ಶಿಕ್ಷಣದಲ್ಲಿ ಅವಕಾಶ ದೊರೆಯಿತು. ಅವಕಾಶ ಸಿಕ್ಕಾಗ ಪುರುಷರಿಗಿಂತ ಶಿಕ್ಷಣದಲ್ಲಿ ಮುಂದಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಹಿಳಾ ಮೀಸಲಾತಿ ಜಾರಿ ಆಗಿಬಿಟ್ಟಿತು ಎಂದು ಸುಳ್ಳು ನಂಬಿಕೊಂಡು ಸುಳ್ಳು ಚಪ್ಪಾಳೆ ಹೊಡಿಬೇಡಿ. ಮಹಿಳಾ ಮೀಸಲಾತಿ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಾವು, ನೀವೆಲ್ಲಾ ಹೋರಾಟ ಮುಂದುವರೆಸಬೇಕು ಎಂದು ಕರೆ ನೀಡಿದರು.

ಶಿಕ್ಷಣ ತಜ್ಞ, ರಾಜಕೀಯ ವಿಶ್ಲೇಷಕರಾದ ಪ್ರೊ.ಮುಝಫ್ಫರ್ ಅಸಾದಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಪ್ರೊ.ರವಿವರ್ಮ ಕುಮಾರ್ ವಿಷಯ ಮಂಡಿಸಿದರು.

ಶಾಸಕಿ ನಯನ ಮೋಟಮ್ಮ, ನ್ಯಾಯವಾದಿ ಅಶ್ವಿನಿ ಓಬಳೇಶ್, ಹಿಂದುಳಿದ ವರ್ಗಗಳ ಒಕ್ಕೂಟದ ನಾಯಕರಾದ ಕೆ.ಎಂ.ರಾಮಚಂದ್ರಪ್ಪ, ದಲಿತ ಹೋರಾಟಗಾರ ಮಾವಳ್ಳಿ ಶಂಕರ್, ನ್ಯಾಯವಾದಿ ಎನ್.ಅನಂತ ನಾಯಕ್, ಬಿ.ಟಿ.ಲಲಿತಾ ನಾಯಕ್ ಮತ್ತು ಚುಕ್ಕಿ ನಂಜುಂಡಸ್ವಾಮಿ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X