Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ...

ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ʼʼBJP ಭ್ರಷ್ಟಾಚಾರದ ಹಿಮಾಲಯ ಇದ್ದಂತೆʼʼ

ವಾರ್ತಾಭಾರತಿವಾರ್ತಾಭಾರತಿ17 Oct 2023 1:33 PM IST
share
ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಕಳೆದ ಮೂರು ದಿನಗಳಿಂದ ನಡೆದ ಐಟಿ ದಾಳಿಯಲ್ಲಿ ಕೆಲವು ಡೈರಿ, ಪುಸ್ತಕಗಳು ಪತ್ತೆಯಾಗಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಈ ದಾಖಲೆಗಳು ಬಹಿರಂಗಗೊಂಡರೆ, ದಾಳಿಯಲ್ಲಿ ಸಿಕ್ಕಿರುವ ಹಣ ಯಾರಿಗೆ ಸಂಬಂಧಿಸಿದ್ದು ಎಂಬ ಸತ್ಯಾಂಶ ಹೊರಬರುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ವಿರೋಧ ಪಕ್ಷಗಳ ನಾಯಕ ಟೀಕೆ ವಿಚಾರವಾಗಿ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯದಲ್ಲಿ ಆಗಿರುವ ಭ್ರಷ್ಟಾಚಾರಗಳನ್ನು ಮಾಡಿರುವುದು ಬಿಜೆಪಿ ಪಕ್ಷ. ಇಡೀ ಭ್ರಷ್ಟಾಚಾರಕ್ಕೆ ಬಿಜೆಪಿಯೇ ಅಡಿಪಾಯ. ಅದು ಭ್ರಷ್ಟಾಚಾರದ ಹಿಮಾಲಯ ಇದ್ದಂತೆ. ಹೀಗಾಗಿ ಕರ್ನಾಟಕದ ಜನತೆ ಅವರನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆʼʼ ಎಂದು ಟೀಕಿಸಿದರು.

ʼʼಈಗ ನಡೆದಿರುವ ಐಟಿ ದಾಳಿಯಲ್ಲಿ ಸಿಕ್ಕಿರುವ ಹಣ ಬಿಜೆಪಿಗೆ ಸೇರಿದ್ದು, ಈ ಹಣಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಈ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ನೀಡಿರುವುದು ಬಿಜೆಪಿ ಸರ್ಕಾರ. ಇದು ಬಿಜೆಪಿಯ ಪಾಪದ ಕೂಸು” ಎಂದು ತಿಳಿಸಿದರು.

ಕಾಂಗ್ರೆಸ್ ಹೈಕಮಾಂಡ್ ನಡುಗುತ್ತಿದೆ ಎಂಬ ಆರ್. ಅಶೋಕ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ನಡುಗುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಅಲ್ಲ, ಬಿಜೆಪಿ ಹೈಕಮಾಂಡ್. ಈ ಭ್ರಷ್ಟಾಚಾರಕ್ಕೆಲ್ಲ ಅಡಿಪಾಯವೇ ಆರ್.ಅಶೋಕ್, ನಕಲಿ ಸ್ವಾಮಿ, ಲೂಟಿ ರವಿ, ನವರಂಗಿ ನಾರಾಯಣ, ಬ್ಲಾಕ್ ಮೇಲರ್ ಗಳು. ಈ ಅಕ್ರಮಗಳ ಹಿಂದೆ ಇವರ ಹೆಸರಿದೆ. ಅವರು ಯಾರಿಂದ ತನಿಖೆ ಮಾಡಿಸುತ್ತಾರೋ ಮಾಡಿಸಲಿ. ಈ ವಿಚಾರವಾಗಿ ತನಿಖೆ ಆಗಲಿ. ಅದನ್ನೇ ನಾವು, ನಮ್ಮ ನಾಯಕರು ಹೇಳುತ್ತಿದ್ದೇವೆ. ಅವರ ಕಾಲದಲ್ಲಿ ಆಗಿರುವ ಬ್ರಹ್ಮಾಂಡ ಭ್ರಷ್ಟಾಚಾರವೇ ಇದಕ್ಕೆ ಅಡಿಪಾಯ. ಆದಾಯ ತೆರಿಗೆ ಅಧಿಕಾರಿಗಳು ತಮ್ಮ ದಾಳಿ ಮುಗಿಸಿ ಅಧಿಕೃತ ಹೇಳಿಕೆ ಪ್ರಕಟಿಸಲಿ ಎಂದು ನಾವು ಇಷ್ಟು ದಿನ ಮಾತನಾಡಿರಲಿಲ್ಲ. ನಿನ್ನೆ ಐಟಿ ಅಧಿಕಾರಿಗಳು ಹೇಳಿಕೆ ಪ್ರಕಟಿಸಿದ್ದಾರೆ. ಐಟಿ, ಇಡಿ ಎಲ್ಲಾ ತನಿಖಾ ಸಂಸ್ಥೆಗಳು ಅವರ ಕೈಯಲ್ಲೇ ಇವೆ. ಈಗ ಎಲ್ಲಾ ದಾಖಲೆಗಳು ಅವರ ಬಳಿಯೇ ಇವೆ. ಅವುಗಳನ್ನು ಬಿಚ್ಚಿಡಲಿ” ಎಂದು ಸವಾಲೆಸೆದರು.

ಬಿಜೆಪಿಯು ಕಲೆಕ್ಷನ್ ಮಾಸ್ಟರ್ ಎಂಬ ಪೋಸ್ಟರ್ ಬಿಡುಗಡೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಬಿಜೆಪಿಯ ಭ್ರಷ್ಟಾಚಾರ ಹಿಮಾಲಯ ಪರ್ವತದಷ್ಟಿದೆ. ಸಿಎಂ ಹುದ್ದೆಗೆ 2500 ಕೋಟಿ ಕಲೆಕ್ಷನ್ ಮಾಡಲಾಗಿತ್ತು. ಮುಖ್ಯಮಂತ್ರಿ ಕಚೇರಿಯಲ್ಲೇ ಎಷ್ಟು ಭ್ರಷ್ಟಾಚಾರ ನಡೆದಿತ್ತು ಎಂದು ಬಿಜೆಪಿಯ ಶಾಸಕರು, ಮಾಜಿ ಮಂತ್ರಿಗಳೇ ಹೇಳಿದ್ದಾರೆ. ಈಗ ಮಾತಾಡುತ್ತಿರುವವರು ಅದನ್ನು ಒಮ್ಮೆ ನೋಡಲಿ ” ಎಂದು ಕುಟುಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X