Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಂಗಾರು ಅಧಿವೇಶನ | ಬೆಂಗಳೂರು ಈಗ...

ಮುಂಗಾರು ಅಧಿವೇಶನ | ಬೆಂಗಳೂರು ಈಗ ಡೆಂಗ್ಯೂ’ಳೂರು ಆಗಿದೆ : ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ22 July 2024 5:46 PM IST
share
ಮುಂಗಾರು ಅಧಿವೇಶನ | ಬೆಂಗಳೂರು ಈಗ ಡೆಂಗ್ಯೂ’ಳೂರು ಆಗಿದೆ : ಆರ್.ಅಶೋಕ್

ಬೆಂಗಳೂರು: ಡೆಂಗಿ ಜ್ವರ ಪ್ರಕರಣಗಳು ರಾಜ್ಯದೆಲ್ಲೆಡೆ ಹೆಚ್ಚಾಗುತ್ತಿದ್ದು, ಅದರಲ್ಲೂ ‘ಬೆಂಗಳೂರು ಈಗ ಡೆಂಗ್ಯೂ’ಳೂರು’ ಎನ್ನುವಂತೆ ಆಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.

ಸೋಮವಾರ ವಿಧಾನಸಭೆಯ ಕಲಾಪದಲ್ಲಿ ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡೆಂಗಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಡೆಂಗಿ ಪರೀಕ್ಷೆಗೆ ಸರಕಾರ ದರ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟು ಹಣ ವಸೂಲಿ ಮಾಡುತ್ತಿವೆ. ಹೀಗಾಗಿ ಸರಕಾರದಿಂದಲೇ ಡೆಂಗಿ ಜ್ವರಕ್ಕೆ ಉಚಿತವಾಗಿ ಪರೀಕ್ಷೆ ಮಾಡಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷದ ಜನವರಿ 1ರಿಂದ ಜುಲೈ 19ರ ಅವಧಿಯಲ್ಲಿ ಒಟ್ಟು 10 ಮಂದಿ ಡೆಂಗಿ ಜ್ವರದಿಂದ ಮೃತಪಟ್ಟಿದ್ದಾರೆ. ಇದರಲ್ಲಿ ಮಕ್ಕಳೂ ಸೇರಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಜತೆಗೆ, ಡೆಂಗಿಯಿಂದ ಬಾಧಿತರಾಗುತ್ತಿರುವ ಒಂದು ವರ್ಷದೊಳಗಿನ ಮಕ್ಕಳ ಸಂಖ್ಯೆ ಏರುಗತಿ ಪಡೆದಿದ್ದು, ಒಟ್ಟು 217 ಮಕ್ಕಳು ಡೆಂಗಿ ಪೀಡಿತರಾಗಿದ್ದಾರೆ. 1 ರಿಂದ 18 ವರ್ಷದೊಳಗಿನವರ ಸಂಖ್ಯೆಯೂ 4,592ಕ್ಕೆ ಹೆಚ್ಚಿದೆ ಎಂದು ಅವರು ವಿವರಿಸಿದರು.

ಕೆಲ ಮಕ್ಕಳಲ್ಲಿ ರೋಗಗಳು ಸುಪ್ತವಾಗಿರುತ್ತವೆ. ಎಷ್ಟೇ ಪರೀಕ್ಷೆ ನಡೆಸಿದರೂ ಅವುಗಳು ಪತ್ತೆಯಾಗುವುದೇ ಇಲ್ಲ. ಅಂತಹವರಲ್ಲಿ ರೋಗ ನಿರೋಧಕ ಶಕ್ತಿಯೂ ಕಡಿಮೆ ಇರುತ್ತದೆ. ಡೆಂಗಿ ವೈರಾಣು ಅವರ ದೇಹದ ಒಳ ಹೊಕ್ಕು ಅಂಗಾಂಗಗಳಿಗೆ ಹಾನಿ ಉಂಟು ಮಾಡುತ್ತದೆ. ಹೀಗಾಗಿ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಇನ್ನೂ, ಡೆಂಗಿ ನಿಯಂತ್ರಣಕ್ಕೆ ರಾಜ್ಯ ಸರಕಾರ ಸೊಳ್ಳೆ ಪರದೆಗಳ ಮೊರೆ ಹೋಗಿರುವ ಸುದ್ದಿ ನೋಡಿದ್ದು, ಇದು ಹಾಸ್ಯಾಸ್ಪದ ಎಂದು ಅಶೋಕ್ ಉಲ್ಲೇಖಿಸಿದರು.

ಇದಕ್ಕೆ ಉತ್ತರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಳೆಗೇರಿಗಳಿಗೆ ಸೊಳ್ಳೆ ಪರದೆ ವಿತರಿಸುತ್ತಿಲ್ಲ. ಈಡಿಸ್ ಸೊಳ್ಳೆ ಬೆಳಗ್ಗೆ ಕಚ್ಚುತ್ತದೆ, ರಾತ್ರಿ ಕಚ್ಚುವುದಿಲ್ಲ. ಹೀಗಾಗಿ ಸೊಳ್ಳೆ ಪರದೆಯ ಅಗತ್ಯವಿಲ್ಲ ಎಂದರು. ನಂತರ, ನಿಲುವಳಿ ಸೂಚನೆ ಬದಲಾಗಿ ನಿಯಮ 69ರಡಿ ಚರ್ಚೆಗೆ ಕೊಡುವುದಾಗಿ ಸ್ಪೀಕರ್ ಯು.ಟಿ.ಖಾದರ್ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X