Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಆರ್‌ಟಿಐ ಕಾರ್ಯಕರ್ತರ ಬ್ಲ್ಯಾಕ್‍ಮೇಲ್...

‘ಆರ್‌ಟಿಐ ಕಾರ್ಯಕರ್ತರ ಬ್ಲ್ಯಾಕ್‍ಮೇಲ್ ದಂಧೆಗೆ ಕಡಿವಾಣ ಹಾಕಬೇಕು’ ; ವಿಧಾನಸಭೆಯಲ್ಲಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ12 Aug 2025 5:46 PM IST
share
‘ಆರ್‌ಟಿಐ ಕಾರ್ಯಕರ್ತರ ಬ್ಲ್ಯಾಕ್‍ಮೇಲ್ ದಂಧೆಗೆ ಕಡಿವಾಣ ಹಾಕಬೇಕು’ ; ವಿಧಾನಸಭೆಯಲ್ಲಿ ಚರ್ಚೆ

ಬೆಂಗಳೂರು, ಆ. 12: ‘ಮಾಹಿತಿ ಹಕ್ಕು ಕಾಯ್ದೆ’(ಆರ್‌ಟಿಐ) ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಬ್ಲ್ಯಾಕ್‍ಮೇಲ್ ಮಾಡುತ್ತಿರುವ ಆರ್‌ಟಿಐ ಕಾರ್ಯಕರ್ತರಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು’ ಎಂದು ಪಕ್ಷಬೇಧ ಮರೆತು ಸದಸ್ಯರು ಆಗ್ರಹಿಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಆಡಳಿತ ಪಕ್ಷದ ಸದಸ್ಯ ಕೌಜಲಗಿ ಮಹಾಂತೇಶ್ ಕೇಳಿದ ಪ್ರಶ್ನೆಗೆ ಧ್ವನಿಗೂಡಿಸಿದ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್, ‘ಆರ್‌ಟಿಐ ಕಾರ್ಯಕರ್ತರು ಭವ್ಯ ಬಂಗಲೆಗಳನ್ನು ಕಟ್ಟಿಕೊಂಡು ಮನೆ ಮುಂದೆ ಕಾರುಗಳನ್ನು ನಿಲ್ಲಿಸಿಕೊಂಡು ವೈಭೋಗದ ಜೀವನ ನಡೆಸುತ್ತಿದ್ದಾರೆ. ಇವರಿಗೆ ಹಣ ಎಲ್ಲಿಂದ ಬರುತ್ತದೆ?’ ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಬ್ಲ್ಯಾಕ್‍ಮೇಲ್ ಮಾಡುವುದೇ ಇವರ ಕಸುಬಾಗಿದೆ. ಹೀಗಾಗಿ ಭ್ರಷ್ಟಾಚಾರ ತಡೆಯಲು ಕಾಯ್ದೆಯನ್ನು ರೂಪಿಸಲಾಗಿದೆ. ಅದೇ ಮಾದರಿಯಲ್ಲೇ ಆರ್‌ಟಿಐ ಕಾರ್ಯಕರ್ತರ ಭ್ರಷ್ಟಾಚಾರವನ್ನು ತಡೆಗಟ್ಟಲು ಅಗತ್ಯ ಕಾನೂನು ರೂಪಿಸಬೇಕು. ಅಲ್ಲದೆ, ಇವರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಅವರು ಆಗ್ರಹಿಸಿದರು.

ಆ ಬಳಿಕ ಸಿಎಂ ಪರವಾಗಿ ಉತ್ತರ ನೀಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ಮಾಹಿತಿ ಹಕ್ಕು ಕಾಯ್ದೆ ದುರುಪಯೋಗವಾಗುತ್ತಿರುವುದನ್ನು ಅಲ್ಲಗಳೆಯಲಾಗದು. ಆದರೆ, ದೇಶದ ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಹಾಗೂ ಪಾರದರ್ಶಕತೆಗೆ ಕಾಯ್ದೆ ಅನುಕೂಲವಾಗಿದೆ. ದುರುಪಯೋಗ ತಡೆಯಲು ನಿಯಮಗಳನ್ನು ರೂಪಿಸಲು ರಾಜ್ಯ ಸರಕಾರಕ್ಕೆ ಅವಕಾಶಗಳಿವೆ. ಸದಸ್ಯರು ನಿರ್ದಿಷ್ಟ ಪ್ರಕರಣಗಳನ್ನು ಉಲ್ಲೇಖಿಸಿ ಮಾಹಿತಿ ನೀಡಬೇಕು’ ಎಂದು ಕೋರಿದರು.

ಆರ್‌ಟಿಐ ಕಾಯ್ದೆ ದುರುಪಯೋಗ ಸಂಬಂಧ ಇದುವರೆಗೆ ಯಾವ ಅಧಿಕಾರಿಯು ದೂರು ನೀಡಿಲ್ಲ. ಆದರೂ, ಸರಕಾರ ಪರಿಶೀಲನೆ ನಡೆಸಿ 26 ಮಂದಿಯನ್ನು ಕಪ್ಪು ಪಟ್ಟಿಗೆ ಸೇರಿಸಿದೆ. ಲೋಕಾಯುಕ್ತ ದಾಳಿಯ ವೇಳೆ ಸಿಕ್ಕಿ ಬಿದ್ದಿರುವ ಮಾಹಿತಿ ಆಯುಕ್ತ ರವೀಂದ್ರ ಗುರುನಾಥ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸದಸ್ಯರಾದ ಸುರೇಶ್ ಕುಮಾರ್, ಸಿ.ಕೆ.ರಾಮಮೂರ್ತಿ, ಆಡಳಿತ ಪಕ್ಷದ ಕೋನರೆಡ್ಡಿ ಪ್ರತಿಕ್ರಿಯಿಸಿ ಸಂಬಂಧ ವಿಶೇಷ ಚರ್ಚೆಗೆ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದರು. ಈ ವೇಳೆ ಮಧ್ಯಪ್ರವೇಶಿಸಿ ಸ್ಪೀಕರ್ ಖಾದರ್, ಈಗಾಗಲೇ ಅರ್ಧಗಂಟೆ ಚರ್ಚೆ ಆಗಿದೆ. ಪುನಃ ಚರ್ಚೆ ಅವಶ್ಯಕತೆ ಇಲ್ಲ ಎಂದು ನಿರಾಕರಿಸಿದರು.

Tags

Monsoon sessionRTI activist
share
ವಾರ್ತಾಭಾರತಿ
ವಾರ್ತಾಭಾರತಿ
Next Story
X