Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾವೇರಿನಾಡು ಕೊಡಗಿನಲ್ಲಿ ಮುಂಗಾರು...

ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ದುರ್ಬಲ; ಸ್ಪ್ರಿಂಕ್ಲರ್‌ಗಳ ಮೊರೆ ಹೋದ ಕಾಫಿ, ಕಾಳು ಮೆಣಸು ಬೆಳೆಗಾರರು

ವಾರ್ತಾಭಾರತಿವಾರ್ತಾಭಾರತಿ25 Jun 2023 12:05 AM IST
share
ಕಾವೇರಿನಾಡು ಕೊಡಗಿನಲ್ಲಿ ಮುಂಗಾರು ದುರ್ಬಲ; ಸ್ಪ್ರಿಂಕ್ಲರ್‌ಗಳ ಮೊರೆ ಹೋದ ಕಾಫಿ, ಕಾಳು ಮೆಣಸು ಬೆಳೆಗಾರರು

ಮಡಿಕೇರಿ, ಜೂ.24: ಕೊಡಗು ಜಿಲ್ಲೆಯ ಬೆಳೆಗಾರರ ಪರಿಸ್ಥಿತಿ ಪ್ರತಿವರ್ಷ ಬಾಣಲೆಯಿಂದ ಬೆಂಕಿಗೆ ಬೀಳುವಂತಾಗುತ್ತಿದೆ. ಪ್ರತಿ ಬಾರಿ ಅತಿವೃಷ್ಟಿಯಿಂದ ಕಂಗೆಡುವ ಬೆಳೆಗಾರರು ಪ್ರಸಕ್ತ ಮಳೆಯ ಕೊರತೆಯನ್ನು ಎದುರಿಸುತ್ತಿದ್ದು, ಉತ್ತಮ ಮಳೆಯಾಗಬೇಕಾದ ಜೂನ್ ತಿಂಗಳಿನಲ್ಲೇ ಸ್ಪ್ರಿಂಕ್ಲರ್ ನೀರಿಗೆ ಮೊರೆ ಹೋಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕಾವೇರಿನಾಡು ಕೊಡಗಿನ ಇತಿಹಾಸದಲ್ಲಿಯೇ ಕಾಫಿ ತೋಟಗಳಿಗೆ ಮಳೆಗಾಲದಲ್ಲಿ ಸ್ಪ್ರಿಂಕ್ಲರ್ ಮೂಲಕ ನೀರು ಹಾಯಿಸುತ್ತಿರುವುದು ಇದೇ ಮೊದಲು ಎಂದು ಅಭ್ಯತ್ ಮಂಗಲದ ಕಾಫಿ ಬೆಳೆಗಾರರು ಬೇಸರ ವ್ಯಕ್ತಪಡಿಸುತ್ತಾರೆ.

ಅಲ್ಪಸ್ವಲ್ಪ ನೀರು ಇರುವ ಪ್ರದೇಶಗಳಲ್ಲಿ ಸ್ಪ್ರಿಂಕ್ಲರ್ ಬಳಸಬಹುದಾಗಿದೆ. ಆದರೆ, ನದಿ ಬತ್ತಿ ಹೋಗಿರುವ ವ್ಯಾಪ್ತಿಯಲ್ಲಿ ನೀರು ಇಲ್ಲದೆ ಕಾಫಿ ಹಾಗೂ ಕಾಳು ಮೆಣಸು ಗಿಡಗಳು ಸೊರಗುತ್ತಿವೆ. ಕಾಫಿಗೆ ಈಗ ಮಾರುಕಟ್ಟೆಯಲ್ಲಿ ಅಧಿಕ ಬೆಲೆ ಇದೆ. ಆದರೆ, ಉತ್ತಮ ಇಳುವರಿಯನ್ನು ತೆಗೆಯಬೇಕಾದ ಜವಾಬ್ದಾರಿ ಬೆಳೆಗಾರನ ಮೇಲಿದೆ. ಬೆಳೆಯ ಗುಣಮಟ್ಟ ಮತ್ತು ಹೆಚ್ಚಿನ ಇಳುವರಿಯನ್ನು ಎದುರು ನೋಡಬೇಕಾದರೆ ಸಕಾಲದಲ್ಲಿ ಹದವಾದ ಮಳೆಯಾಗಬೇಕಾಗುತ್ತದೆ. ಈ ಬಾರಿ ಜೂನ್ ಕೊನೆಯ ವಾರವಾದರೂ ನಿರೀಕ್ಷಿತ ಮಳೆಯಾಗದೆ ಇರುವುದರಿಂದ ಬೆಳೆಗಾರರು ನಷ್ಟದ ಭೀತಿ ಎದುರಿಸುತ್ತಿದ್ದಾರೆ. ಮಳೆಯಾದರೆ ಮಾತ್ರ ಕಾಫಿ ಗಿಡಗಳಿಗೆ ಗೊಬ್ಬರ ಹಾಕಲು ಸಾಧ್ಯವಾಗುತ್ತದೆ. ಸರಿಯಾದ ಸಮಯದಲ್ಲಿ ಗೊಬ್ಬರ ದೊರೆತಾಗ ಬೆಳೆಯೂ ಉತ್ತಮ ರೀತಿಯಲ್ಲಿರುತ್ತದೆ. ಆದರೆ, ಪ್ರಸಕ್ತ ಮಳೆಯೇ ಬಾರದಿರುವುದರಿಂದ ಕಾಫಿ ಇಳುವರಿ ಕೈಕೊಡುವ ಎಲ್ಲಾ ಸಾಧ್ಯತೆಗಳಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕಪ್ಪುಚಿನ್ನವೆಂದೇ ಕರೆಯಲ್ಪಡುವ ಕಾಳು ಮೆಣಸು ಕಾಫಿ ಬೆಳೆಗಾರನ ಕಷ್ಟದ ಕಾಲದಲ್ಲಿ ನೆರವಿಗೆ ಬರುವ ಪ್ರಮುಖ ವಾಣಿಜ್ಯ ಬೆಳೆ. ಆದರೆ, ಈ ಮೆಣಸಿನ ಬಳ್ಳಿಗೂ ನೀರಿನ ಅಗತ್ಯ ಇರುವುದರಿಂದ ಸ್ಪಿಂಕ್ಲರ್ ಮೂಲಕವೇ ನೀರು ಹಾಯಿಸಬೇಕಾಗಿದೆ. ಕಾಫಿ ಕೈಕೊಟ್ಟರೆ ಕಾಳು ಮೆಣಸು ಕೈಹಿಡಿಯುತ್ತದೆ ಎನ್ನುವ ಪರಿಸ್ಥಿತಿ ಈಗ ಇಲ್ಲ. ಮಳೆಯಿಲ್ಲದೆ ಹಲವು ತೋಟಗಳಲ್ಲಿ ಕಾಳು ಮೆಣಸು ಬಳ್ಳಿಗಳು ಒಣಗುತ್ತಿವೆ. ಕಳೆದ ಕೆಲವು ವರ್ಷಗಳಿಂದ ಅತಿವೃಷ್ಟಿ ಮತ್ತು ಪ್ರವಾಹದಿಂದ ಅಪಾರ ಬೆಳೆ ನಷ್ಟ ಅನುಭವಿಸುತ್ತಿರುವ ಬೆಳೆಗಾರರು ಈ ಬಾರಿ ಮಳೆ ಇಲ್ಲದೆ ಕಂಗಾಲಾಗಿದ್ದಾರೆ.

ಭತ್ತ ಮತ್ತಿತರ ಬೆಳೆಗಳನ್ನು ಬೆಳೆಯುವ ಜಿಲ್ಲೆಯ ಕೃಷಿಕ ವರ್ಗ ಮಳೆಗಾಲದ ಮಳೆಯಲ್ಲಿ ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಬೇಕಾಗಿ ತ್ತು. ಆದರೆ, ಮಳೆ ಬಾರದೆ ಇರುವುದರಿಂದ ಮತ್ತು ಬತ್ತಿ ಹೋದ ನದಿ, ಕೆರೆ, ಹೊಳೆಯಲ್ಲಿ ನೀರು ಸಿಗದೆ ಇರುವುದರಿಂದ ಒಣಗಿದ ಕೃಷಿ ಭೂಮಿಯನ್ನು ನೋಡುತ್ತಾ ದಿನ ಕಳೆಯುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಮಾತ್ರವಲ್ಲದೆ ಅಕ್ಕಪಕ್ಕದ ರಾಜ್ಯಗಳಿಗೂ ಕುಡಿಯಲು ಹಾಗೂ ಕೃಷಿ ಕಾರ್ಯಕ್ಕೆ ನೀರು ಒದಗಿ ಸುತ್ತಿದ್ದ ಕಾವೇರಿ ನಾಡು ಕೊಡಗು ಇಂದು ಹನಿ ನೀರಿಗಾಗಿ ಪರಿತಪಿಸಬೇಕಾದ ಅನಿವಾರ್ಯತೆಯನ್ನು ಎದುರಿಸುತ್ತಿದೆ. ಜೂನ್ ತಿಂಗಳಿನಲ್ಲಿ ಮಳೆಯ ಕೊರತೆ ಎದುರಾಗಿ ಜುಲೈ ಅಂತ್ಯ ಅಥವಾ ಆಗಸ್ಟ್ ತಿಂಗಳಿನಲ್ಲಿ ಅತಿವೃಷ್ಟಿ ಎದುರಾದರೆ ಕೃಷಿ ಕ್ಷೇತ್ರ ಸಂಪೂರ್ಣ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X