Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ವೀಸಾ’ ಅವಧಿ ಮುಗಿದರೂ 700ಕ್ಕೂ ಅಧಿಕ...

‘ವೀಸಾ’ ಅವಧಿ ಮುಗಿದರೂ 700ಕ್ಕೂ ಅಧಿಕ ವಿದೇಶಿಗರು ರಾಜ್ಯದಲ್ಲಿದ್ದಾರೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ13 July 2023 9:23 PM IST
share
‘ವೀಸಾ’ ಅವಧಿ ಮುಗಿದರೂ 700ಕ್ಕೂ ಅಧಿಕ ವಿದೇಶಿಗರು ರಾಜ್ಯದಲ್ಲಿದ್ದಾರೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು, ಜು.13: ವಿದೇಶಗಳಿಂದ ವ್ಯಾಸಂಗ ಸೇರಿದಂತೆ ವಿವಿಧ ಕಾರಣಕ್ಕಾಗಿ ರಾಜ್ಯಕ್ಕೆ ಬಂದಿರುವವರ ಪೈಕಿ ಮೇ ಅಂತ್ಯಕ್ಕೆ ವೀಸಾ ಮುಗಿದರೂ, 754 ವಿದೇಶಿಗರು ರಾಜ್ಯದಲ್ಲಿ ಇದ್ದಾರೆ. ಅವರನ್ನು ತಮ್ಮ ದೇಶಕ್ಕೆ ವಾಪಸ್ ಕಳುಹಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಗುರುವಾರ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಚ್.ಎಸ್.ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿ ವೀಸಾದಡಿಯಲ್ಲಿ ವಿದೇಶಗಳ 4,890 ಮಂದಿ ರಾಜ್ಯಕ್ಕೆ ಬಂದಿದ್ದಾರೆ. ವೀಸಾ ಅವಧಿ ಮುಗಿದಿದ್ದರೂ ಅನುಮತಿ ಇಲ್ಲದೆ ನೆಲೆಸಿರುವ ವಿದೇಶಿಗರ ಮೇಲೆ ಕಣ್ಣಿಡಲು ರಾಜ್ಯದ ಆಯಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹದ್ದಿನ ಕಣ್ಣಿಡುವಂತೆ ಸೂಚಿಸಲಾಗಿದೆ ಎಂದರು.

ಉದ್ಯೋಗ ಸೇರಿದಂತೆ ಇತರೆ ಕೆಲಸಗಳಲ್ಲಿ 8,862 ಮಂದಿ ವಿದೇಶಿಗರು ವೀಸಾ ಪಡೆದು ರಾಜ್ಯದಲ್ಲಿದ್ದಾರೆ. ಇವರಲ್ಲಿ ಬಹುತೇಕರು ಆಫ್ರಿಕಾ ದೇಶದವರಾಗಿದ್ದು, ವೀಸಾ ಮುಗಿದವರು ಸಣ್ಣ ಪುಟ್ಟ ಕಾರಣಗಳಿಗಾಗಿ ಕೇಸು ಹಾಕಿಸಿಕೊಂಡು ರಾಜ್ಯದಲ್ಲೇ ಇದ್ದಾರೆ. ಅಂತಹವರನ್ನು ಪ್ರಕರಣ ಇತ್ಯರ್ಥವಾಗದೆ ಅವರ ದೇಶಗಳಿಗೆ ಕಳುಹಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯದ ವಿವಿಧ ಭಾಗಗಳಲ್ಲಿರುವ ವಿದೇಶಿ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ತುಮಕೂರು ದಿಬ್ಬೂರು ಬಳಿಯ ವಿದೇಶಿ ಬಂಧನ ಕೇಂದ್ರದಲ್ಲಿ ವಿದೇಶಿಗರು ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹೀಗಾಗಿ ಅವರನ್ನು ಶಿವಮೊಗ್ಗದ ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ವಿದೇಶಿಗರು ಮಾದಕ ವಸ್ತು ಸಾಗಾಣೆ, ವೇಶ್ಯಾವಾಟಿಕೆ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅವರ ಮೇಲೆ ನಿಗಾ ಇರಿಸಲಾಗುವುದು ಎಂದು ಹೇಳಿದರು.

ವೀಸಾ ಅವಧಿ ಮುಗಿದಿರುವ ವಿದೇಶಿಗರನ್ನು ಅವರ ದೇಶಕ್ಕೆ ಕಳುಹಿಸುವ ಸಂಬಂಧ ಕೇಂದ್ರ ವಿದೇಶಾಂಗ ಸಚಿವಾಲಯದ ಮೂಲಕ ಆಯಾ ದೇಶಗಳ ರಾಯಭಾರಿ ಕಚೇರಿಗಳಿಗೆ ಮಾಹಿತಿ ನೀಡಿ ಅಲ್ಲಿಂದ ಅನುಮತಿ ಬಂದ ನಂತರ ಅವರನ್ನು ಅವರ ದೇಶಕ್ಕೆ ಗಡಿಪಾರು ಮಾಡಲಾಗುವುದು ಎಂದು ಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X