Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮುಡಾ ಪ್ರಕರಣ; ಅಂತಿಮ ವರದಿ ಸಲ್ಲಿಸಲು...

ಮುಡಾ ಪ್ರಕರಣ; ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಡಿ.18ರವರೆಗೆ ಗಡುವು ನೀಡಿದ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ4 Dec 2025 10:20 PM IST
share
ಮುಡಾ ಪ್ರಕರಣ; ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ಡಿ.18ರವರೆಗೆ ಗಡುವು ನೀಡಿದ ಕೋರ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಕೆಲ ಸದಸ್ಯರು ಪ್ರಮುಖ ಆರೋಪಿಗಳಾಗಿರುವ ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣದ ತನಿಖೆ ಪೂರ್ಣಗೊಳಿಸಲು ವಿಳಂಬ ಮಾಡುತ್ತಿರುವ ಲೋಕಾಯುಕ್ತ ಪೊಲೀಸರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಡಿಸೆಂಬರ್ 18ರ ಒಳಗೆ ಅಂತಿಮ ತನಿಖಾ ವರದಿ ಸಲ್ಲಿಸುವಂತೆ ತಾಕೀತು ಮಾಡಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಖಾಸಗಿ ದೂರಿನ ಕುರಿತು ಗುರುವಾರ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು, ಅಂತಿಮ ವರದಿ ಸಲ್ಲಿಸಲು ಲೋಕಾಯುಕ್ತ ತ‌ನಿಖಾಧಿಕಾರಿಗಳಿಗೆ ಕೊನೇ ಅವಕಾಶವಾಗಿ ಡಿಸೆಂಬರ್ 18ರ ವರೆಗೆ ಗಡುವು ನೀಡಿದರು.

ಆದೇಶವೇನು?

ಲೋಕಾಯುಕ್ತ ಪರ ವಿಶೇಷ ಅಭಿಯೋಜಕರು (ಎಸ್‌ಪಿಪಿ) ವಸ್ತುಸ್ಥಿತಿ ವರದಿ ಸಲ್ಲಿಸಿದ್ದಾರೆ. ಈ ನ್ಯಾಯಾಲಯವು 2025ರ ಅಕ್ಟೋಬರ್ 9ರಂದು ಪ್ರಕರಣದ ತನಿಖೆ ಪೂರ್ಣಗೊಳಿಸಲು ತನಿಖಾಧಿಕಾರಿಗಳಿಗೆ ಗರಿಷ್ಠ 2 ತಿಂಗಳ ಕಾಲಾವಕಾಶ ನೀಡಿತ್ತು. ತನಿಖೆಯನ್ನು ಸಾಧ್ಯವಾದಷ್ಟು ಶೀಘ್ರವಾಗಿ ಹಾಗೂ 2 ತಿಂಗಳ ಮಿತಿಯೊಳಗೆ ಪೂರ್ಣಗೊಳಿಸಬೇಕೆಂದು ಅಕ್ಟೋಬರ್ 9ರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಹಾಗೆಂದ ಮಾತ್ರಕ್ಕೆ ನ್ಯಾಯಾಲಯ ನೀಡಿರುವ ಗಡುವಿನ ಕೊನೆಯ ದಿನಾಂಕದಂದೇ ತನಿಖಾ ಸಂಸ್ಥೆಯು ತನಿಖೆಯನ್ನು ಪೂರ್ಣಗೊಳಿಸಬೇಕು ಎಂದರ್ಥವಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ತನಿಖಾಧಿಕಾರಿಗಳು ಸಮರೋಪಾದಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಪಿಪಿ ಹೇಳಿದ್ದಾರೆ. ಈ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಮತ್ತಾವುದೇ ಕಾರಣಕ್ಕೂ ಪ್ರಕರಣವನ್ನು ಮುಂದೂಡಲು ಸಾಧ್ಯವಿಲ್ಲ. ಇಂಥ ಸನ್ನಿವೇಶದಲ್ಲಿ ಲಭ್ಯವಿರುವ ದಾಖಲೆಗಳ ಆಧಾರದಲ್ಲಿ ಬಿ ರಿಪೋರ್ಟ್ ಮೇಲಿನ ಆದೇಶ ಹೊರಡಿಸಬೇಕಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಒಂದೊಮ್ಮೆ ಮುಂದಿನ ವಿಚಾರಣಾ ದಿನಾಂಕದ ಒಳಗೆ ತನಿಖೆ ಪೂರ್ಣಗೊಳಿಸಿದರೆ, ಮುಂಚಿತವಾಗಿ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ತನಿಖಾಧಿಕಾರಿಗಳು ಕೋರಬಹುದು. ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಜತೆಗೆ ದೂರುದಾರರಿಗೂ ಪ್ರತಿಯನ್ನು ಒದಗಿಸಬೇಕು. ದೂರುದಾರರು, ಎಸ್‌ಪಿಪಿ ಹಾಗೂ ಇಡಿ ಅಧಿಕಾರಿಗಳು ಯಾವುದೇ ಲಿಖಿತ ಸಾರಾಂಶಗಳಿದ್ದರೆ ಅವುಗಳನ್ನು ಡಿಸೆಂಬರ್ 16ರ ಒಳಗೆ ಸಲ್ಲಿಸಬಹುದು ಎಂದು ತಿಳಿಸಿದ ನ್ಯಾಯಾಲಯ, ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X