Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಂಸ್ಕೃತಿಕ ಯುದ್ಧಕ್ಕೆ...

ಸಾಂಸ್ಕೃತಿಕ ಯುದ್ಧಕ್ಕೆ ಸಿದ್ಧವಾಗಬೇಕಿದೆ: ಕೋಟಿಗಾನಹಳ್ಳಿ ರಾಮಯ್ಯ

‘90ರ ನಂತರದ ಕರ್ನಾಟಕ’ ರಾಜ್ಯಮಟ್ಟದ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ13 Jan 2024 10:40 PM IST
share
ಸಾಂಸ್ಕೃತಿಕ ಯುದ್ಧಕ್ಕೆ ಸಿದ್ಧವಾಗಬೇಕಿದೆ: ಕೋಟಿಗಾನಹಳ್ಳಿ ರಾಮಯ್ಯ

ಮೈಸೂರು: 2024ರ ಭೀಕರ ಭಾರತಕ್ಕೆ ವೇದಿಕೆ ಸಿದ್ಧಪಡಿಸಲಾಗಿದ್ದು, ಎಲ್ಲ ರಂಗಗಳನ್ನು ತನ್ನ ಹಿಡಿತಕ್ಕೆ ಒಳಪಡುವ ನೂರುವರ್ಷದ ನೀಲನಕ್ಷೆ ತಯಾರಿಸಲಾಗಿದೆ. ನಮ್ಮ ಪೂರ್ವಿಕರ ಪರಂಪರೆ ಇತಿಹಾಸ, ನುಡಿಗಟ್ಟುಗಳನ್ನು ಮರುವ್ಯಾಖ್ಯಾನಿಸುವ ಮೂಲಕ ಸಾಂಸ್ಕೃತಿಕ ಯುದ್ಧಕ್ಕೆ ಸಿದ್ಧವಾಗಬೇಕಿದೆ ಎಂದು ಬರಹಗಾರ, ಸಂಸ್ಕೃತಿ ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಕರೆ ನೀಡಿದ್ದಾರೆ.

ನಗರದ ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಶನಿವಾರ ಶ್ರಮಣ ಸಂಸ್ಕೃತಿ ಟ್ರಸ್ಟ್ ಮತ್ತು ಬಯಲು ಬಳಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ‘90ರ ನಂತರದ ಕರ್ನಾಟಕ’ ರಾಜ್ಯ ಮಟ್ಟದ ವಿಚಾರ ಕಮ್ಮಟದಲ್ಲಿ ಅವರು ಮಾತನಾಡಿದರು

ದೇಶದ ವ್ಯವಸ್ಥೆಯಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅಪಹರಿಸಿ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದ್ದು, ಅದರಿಂದ ಹೊರಬರಲು ಅಂಬೇಡ್ಕರ್ ಅವರು ಕಂಡ ನಿಜವಾದ ಪ್ರಜಾಪ್ರಭುತ್ವವನ್ನು ಕಟ್ಟಬೇಕಿದೆ ಎಂದು ಅಭಿಪ್ರಾಯಪಟ್ಟರು.

ದೇಶದ ಕಾರ್ಯಾಂಗ, ನ್ಯಾಯಾಂಗ ಮತ್ತು ಆಡಳಿತ ವ್ಯವಸ್ಥೆಯನ್ನು ಆಕ್ರಮಿಸಿಕೊಳ್ಳಲಾಗಿದೆ. ನಿಜವಾದ ಪ್ರಭುತ್ವದ ಕಲ್ಪನೆಗಳು ದೂರವಾಗಿ ನಿರಂಕುಶ ಪ್ರಭುತ್ವ ನಮ್ಮನ್ನು ಆಳುತ್ತಿದೆ. ಈಗಾಗಲೇ ನೂರುವರ್ಷದ ನೀಲ ನಕ್ಷೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. 2024ರ ಭಾರತ ಭೀಕರವಾಗಿದ್ದು ಎಲ್ಲ ರಂಗಗಳು ಫ್ಯಾಶಿಸಮ್ ಗೆ ಒಳಪಡಲು ಸಿದ್ಧಗೊಂಡಿವೆ ಎಂದು ಹೇಳಿದರು.

ನೆಲದ ಸಂಸ್ಕೃತಿಯನ್ನು ಯುವ ಪೀಳಿಗೆಗೆ ತಿಳಿಸುವಲ್ಲಿ ನಾವು ವಿಫಲರಾಗಿದ್ದೇವೆ. ಅಂಬೇಡ್ಕರ್ ಅವರ ಸಿದ್ಧಾಂತವನ್ನು ಮೈಗೂಡಿಸಿಕೊಂಡಿರುವ ರಾಜಕೀಯ ಪಕ್ಷಗಳು ಮತ್ತು ದಲಿತ ಸಂಘಟನೆಗಳು ನೈಜ ಪ್ರಜಾಪ್ರಭುತ್ವದ ಬಗ್ಗೆ ಇಂದಿನ ಯುವ ಪೀಳಿಗೆಗಳಿಗೆ ತಿಳಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹೇಳಿದರು.

ಸಂವಿಧಾನ ಜಾರಿಗೆ ಬಂದು ಇಷ್ಟು ವರ್ಷಗಳಲ್ಲಿ ಸಂವಿಧಾನ ಮೂಲ ಆಶಯವಾದ ಸ್ವಾತಂತ್ರ್ಯ, ಸಮಾನತೆ, ಭಾತೃತ್ವದ ಆಶಯಗಳನ್ನು ಜೀವನ ವಿಧಾನವನ್ನು ಮೈಗೂಡಿಸಿಕೊಳ್ಳುವಲ್ಲಿ ನಾವು ವಿಫಲವಾಗಿದ್ದೇವೆ. ಈ ಮೂರು ಅಂಶಗಳ ತಳಹದಿಯಲ್ಲಿ ಶಿಕ್ಷಣ ರೂಪುಗೊಳ್ಳುವ ಬದಲು ಅನೈತಿಕ, ಅಸಮಾನತೆ ಧೋರಣೆಗಳಿಂದ ರೂಪುಗೊಂಡಿದೆ. ಹೀಗಾಗಿ ಮೌಲ್ಯಗಳು ಕುಸಿಯುತ್ತಿದ್ದು, ಇಂದಿನ ಪರಿಸ್ಥಿತಿಗೆ ಕಾರಣ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರು ಆಶಯದ ಸಂವಿಧಾನ ಇಂದಿಗೂ ಜಾರಿಯಾಗಿಲ್ಲ. ಚಳವಳಿಗಳು, ಶೈಕ್ಷಣಿಕ ಹೋರಾಟಗಳು ಸಂಪೂರ್ಣ ಕೊನೆಯ ಹಂತಕ್ಕೆ ತಲುಪಿವೆ. ಈಗ ನಾವು ಪ್ರತಿಯಾಗಿ ಚಳವಳಿಗಳನ್ನು ಕಟ್ಟಬೇಕು, ಸಂಸ್ಕೃತಿಯನ್ನು ಕಟ್ಟಬೇಕು, ಕ್ರಾಂತಿಯನ್ನು ಕಟ್ಟಬೇಕು ಎಂದು ಹೇಳಿದರು.

ಸಾಹಿತಿ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಇಂದು ಕಪ್ಪು ಹಣ ಪ್ರಜಾಪ್ರಭುತ್ವವನ್ನು ನಿಯಂತ್ರಿಸುತ್ತಿದೆ. ಕಪ್ಪು ಹಣ ಇಲ್ಲದವರು ರಾಜಕೀಯ ನಾಯಕರಾಗಲು ಸಾಧ್ಯವೇ ಎಂಬ ಪ್ರಶ್ನೆ ಎದುರಾಗಿದೆ. ಭ್ರಷ್ಟಚಾರಕ್ಕೆ ಇಂದು ಸಾರ್ವಜನಿಕರ ಸಮ್ಮತಿ ಸಿಕ್ಕಿದೆ ಎಂದು ವಿಷಾದಿಸಿದರು.

ಈ ಸಂದರ್ಭದಲ್ಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಡಾ.ಚಂದ್ರಶೇಖರ್ ಐಜೂರ್ ಉಪಸ್ಥಿತರಿದ್ದು ಮಾತನಾಡಿದರು. ರವಿಕುಮಾರ್ ಬಾಗಿ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ನಿರ್ದೇಶಕಿ ಕೆ.ಲಕ್ಷ್ಮಿ ಪ್ರಿಯಾ, ಲವ ಉಪಸ್ಥಿತರಿದ್ದರು.

ಜಾತಿಗಣತಿಗೆ ಹೆದರಿ ರಾಮಮಂದಿರ: ಪ್ರೊ.ರವಿವರ್ಮಕುಮಾರ್

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಾತಿಗಣತಿ ಮಾಡುತ್ತೇವೆ ಎಂಬ ಘೋಷಣೆಗೆ ಹೆದರಿದ ಬಿಜೆಪಿ ಮತ್ತು ಆರೆಸ್ಸೆಸ್ ರಾಮಂದಿರದ ಕೆಲಸ ಪೂರ್ಣವಾಗದಿದ್ದರೂ ರಾಮ ಮಂದಿರ ಉದ್ಘಾಟನೆಗೆ ಮುಂದಾಗಿದೆ ಎಂದು ಖ್ಯಾತ ವಿಚಾರವಾದಿ ಪ್ರೊ.ರವಿವರ್ಮಕುಮಾರ್ ಟೀಕಿಸಿದ್ದಾರೆ.

Tags

Kotiganahalli Ramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X