Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಹೊನ್ನಾವರ ವಾಣಿಜ್ಯ ಬಂದರು- ರೈಲು ಮಾರ್ಗ...

‘ಹೊನ್ನಾವರ ವಾಣಿಜ್ಯ ಬಂದರು- ರೈಲು ಮಾರ್ಗ ನಿರ್ಮಾಣ ಯೋಜನೆ ಕೈಬಿಡಿ’ : ಸಿಎಂಗೆ ರಾಷ್ಟ್ರೀಯ ಮೀನುಗಾರರ ಸಂಘಟನೆ ಮನವಿ

ವಾರ್ತಾಭಾರತಿವಾರ್ತಾಭಾರತಿ15 April 2025 7:33 PM IST
share
‘ಹೊನ್ನಾವರ ವಾಣಿಜ್ಯ ಬಂದರು- ರೈಲು ಮಾರ್ಗ ನಿರ್ಮಾಣ ಯೋಜನೆ ಕೈಬಿಡಿ’ : ಸಿಎಂಗೆ ರಾಷ್ಟ್ರೀಯ ಮೀನುಗಾರರ ಸಂಘಟನೆ ಮನವಿ

ಬೆಂಗಳೂರು : ಮೀನುಗಾರರ ಜೀವನೋಪಾಯಕ್ಕೆ ಮೀನುಗಾರಿಕೆಗೆ ಮತ್ತು ಸ್ಥಳೀಯ ಪರಿಸರಕ್ಕೆ ಆತಂಕ ಇರುವ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡ ಟೊಂಕದ ಉದ್ದೇಶಿತ ಖಾಸಗಿ ವಾಣಿಜ್ಯ ಬಂದರು ಯೋಜನೆ ಮತ್ತು ಈ ಯೋಜನೆಗಾಗಿ ಇಲ್ಲಿನ ಪರಿಸರ ಸೂಕ್ಷ್ಮ ಕಡಲ ತೀರದ 5 ಕಿ.ಮೀ. ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪತ ರಸ್ತೆ ಮತ್ತು ರೈಲು ಮಾರ್ಗದ ನಿರ್ಮಾಣ ಯೋಜನೆಯನ್ನು ಕೈ ಬಿಡಬೇಕು ಎಂದು ರಾಷ್ಟ್ರೀಯ ಮೀನುಗಾರರ ಸಂಘಟನೆ ಕರ್ನಾಟಕ ಮನವಿ ಮಾಡಿದೆ.

ಮಂಗಳವಾರ ನಗರದಲ್ಲಿರುವ ಸರಕಾರಿ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ರಾಷ್ಟ್ರೀಯ ಮೀನುಗಾರರ ಸಂಘಟನೆ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಚಂದ್ರಕಾಂತ ಕೊಚರೇಕರ ನೇತೃತ್ವದ ನಿಯೋಗವು ಈ ಸಂಬಂಧ ಮನವಿ ಸಲ್ಲಿಸಿತು.

ಮನವಿ ಪತ್ರದಲ್ಲಿ ಏನಿದೇ?: ಕಾಸರಕೋಡ ಟೋಂಕದ ಕಡಲಾಮೆಗಳು ಮೊಟ್ಟೆ ಇಡುವ ಇಲ್ಲಿನ ಪರಿಸರ ಸೂಕ್ಷ್ಮ ಸುಂದರ ಕಡಲ ತೀರದಲ್ಲಿ ಸರಕಾರವು ಆರಂಭಿಸಲು ಉದ್ದೇಶಿಸಿದ್ದ ಖಾಸಗಿ ವಾಣಿಜ್ಯ ಬಂದರು ಯೋಜನೆಯ ವಿರುದ್ಧ ಮತ್ತು ಈ ಯೋಜನೆಗಾಗಿ ಅಲ್ಲಿನ 5 ಕಿ.ಮೀ.ಉದ್ದದ ಮೀನುಗಾರರ ವಸತಿ ನೆಲೆಯಲ್ಲಿ ಚತುಷ್ಪತ ರಸ್ತೆ ಮತ್ತು ರೈಲು ಮಾರ್ಗ ನಿರ್ಮಾಣ ಮಾಡುವುದರ ವಿರುದ್ಧ ಹಲವು ವರ್ಷಗಳಿಂದ ಸ್ಥಳೀಯ ಮೀನುಗಾರರು ಮತ್ತು ಸಾರ್ವಜನಿಕರು ಶಾಂತಿಯುತ ಪ್ರತಿಭಟನೆ ಮೂಲಕ ಸರಕಾರದ ಗಮನ ಸೆಳೆಯುತ್ತಾ ಬಂದಿದ್ದಾರೆ ಎಂದು ಸಂಘಟನೆ ಹೇಳಿದೆ.

ಕಳೆದ ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಇಂದಿನ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರ ಅಹವಾಲುಗಳನ್ನು ಸ್ವೀಕರಿಸಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ, ಈ ಉದ್ದೇಶಿತ ವಾಣಿಜ್ಯ ಬಂದರು ಯೋಜನೆ ಹಾಗೂ ಚತುಷ್ಪತ ರಸ್ತೆ ನಿರ್ಮಿಸುವ ಯೋಜನೆಯನ್ನು ಕೈ ಬಿಟ್ಟು ಈ ಭಾಗದ ಮೀನುಗಾರರ ಹಿತ ರಕ್ಷಣೆ ಮಾಡುವುದಾಗಿ ಭರವಸೆ ನೀಡಿದ್ದರು ಎಂದು ಸಂಘಟನೆ ತಿಳಿಸಿದೆ.

ಖಾಸಗಿ ಬಂದರು ಯೋಜನೆಗಾಗಿ ಸಾಗರ ಮಾಲಾ ಯೋಜನೆಯಡಿ ಚತುಷ್ಪತ ರಸ್ತೆ ನಿರ್ಮಿಸುವ ಸಿದ್ಧತೆಗೆ ಕಾಸರಕೋಡ ಟೊಂಕದ ಮೀನುಗಾರರ ವಸತಿ ನೆಲೆಯಲ್ಲಿರುವ ಸುಮಾರು 300ಕ್ಕೂ ಹೆಚ್ಚು ಬಡ ಮೀನುಗಾರರ ಮನೆಗಳನ್ನು ನೆಲಸಮಗೊಳಿಸುವ ಹುನ್ನಾರ ಖಾಸಗಿ ಕಂಪೆನಿಯವರೊಂದಿಗೆ ಸೇರಿ ಬಂದರು ಇಲಾಖೆಯು ನಡೆಸುತ್ತಿದೆ ಎಂದು ಸಂಘಟನೆ ದೂರಿದೆ.

ಅಲ್ಲದೇ, ಮೀನುಗಾರರ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲು ಇಲ್ಲಿ ನಿಯಮ ಬಾಹಿರವಾಗಿ ಪೊಲೀಸ್ ಬಲದ ದುರ್ಬಳಕೆ ಆಗಿದ್ದು, ಮೀನುಗಾರರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಕಳುಹಿಸಿರುವ ಹಾಗೂ ಹಲವರ ಮೇಲೆ ರೌಡಿ ಶೀಟರ್ ಕೇಸ್‍ಗಳನ್ನು ಹಾಕಿ ಮಾನವ ಹಕ್ಕುಗಳನ್ನು ದಮನಿಸಿ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಉನ್ನತಮಟ್ಟದ ತನಿಖೆಗೆ ಒಪ್ಪಿಸಿ ಮೀನುಗಾರರ ಹಿತರಕ್ಷಣೆ ಮಾಡಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಈ ಉದ್ದೇಶಿತ ಯೋಜನೆಗಳನ್ನು ಕೈಬಿಡುವುದರ ಜೊತೆಗೆ ಬಡ ಮೀನುಗಾರರ ಮೇಲೆ ಬಂದರು ವಿರೋಧಿ ಹೋರಾಟಗಾರರ ಮೇಲೆ ಪೊಲೀಸರು ದಾಖಲಿಸಿರುವ ಎಲ್ಲ ಪ್ರಕರಣಗಳನ್ನು ಕೈ ಬಿಡಲು ಸಹಾನುಭೂತಿಯಿಂದ ಪರಿಶೀಲಿಸಿ ನ್ಯಾಯ ನೀಡುವಂತೆ ಸಂಘಟನೆ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X