Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೇಂದ್ರದಲ್ಲಿ ಎನ್‍ಡಿಎಗೆ ಮತ್ತೆ ಅಧಿಕಾರ;...

ಕೇಂದ್ರದಲ್ಲಿ ಎನ್‍ಡಿಎಗೆ ಮತ್ತೆ ಅಧಿಕಾರ; ಮೋದಿ ಮತ್ತೊಮ್ಮೆ ಪ್ರಧಾನಿ: ಸಿ.ಟಿ.ರವಿ ವಿಶ್ವಾಸ

ವಾರ್ತಾಭಾರತಿವಾರ್ತಾಭಾರತಿ16 Sept 2023 2:25 PM IST
share
ಕೇಂದ್ರದಲ್ಲಿ ಎನ್‍ಡಿಎಗೆ ಮತ್ತೆ ಅಧಿಕಾರ; ಮೋದಿ ಮತ್ತೊಮ್ಮೆ ಪ್ರಧಾನಿ: ಸಿ.ಟಿ.ರವಿ ವಿಶ್ವಾಸ

ಬೆಂಗಳೂರು: ʼನೀತಿ, ನೇತೃತ್ವಹೀನ, ನಿಯತ್ತಿನ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವ ʼಇಂಡಿಯಾ,ʼ ಯಾವುದೇ ಹೆಸರಿನಲ್ಲಿ ಲೋಕಸಭಾ ಚುನಾವಣೆಗೆ ಇಳಿದರೂ ಕೂಡ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರುವುದು ನಿಶ್ಚಿತʼ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ದೇಶದ ಜನರು, ಸಂವಿಧಾನಕ್ಕೆ, ಇಡೀ ಭಾರತಕ್ಕೆ ನಮ್ಮ ನಿಯತ್ತು ಎಂದು ನಾವು ಸಾಬೀತುಪಡಿಸಿದ್ದೇವೆ. ಇದಕ್ಕೆ ತದ್ವಿರುದ್ಧವಾಗಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ʼಇಂಡಿಯಾʼ ನಡೆದುಕೊಳ್ಳುತ್ತಿದೆ ಎಂದು ಆಕ್ಷೇಪಿಸಿದರು

ʼʼಅವರ ನೀತಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದುದು ಚೀನಾದ ಜೊತೆಗಿನ ಕಾಂಗ್ರೆಸ್ ಒಡಂಬಡಿಕೆ ಹಲವು ಅನುಮಾನಗಳನ್ನು ಸೃಷ್ಟಿ ಮಾಡಿದೆ. ಪ್ರತಿ ಬಾರಿ ವಿದೇಶಕ್ಕೆ ಹೋಗಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ತಪ್ಪು ಅಭಿಪ್ರಾಯ ಬರುವಂತೆ ಮಾತನಾಡುವ ಕಾಂಗ್ರೆಸ್ಸಿನ ನಾಯಕ ರಾಹುಲ್ ಗಾಂಧಿಯವರ ನಿಯತ್ತು ಒಂದು ಪ್ರಶ್ನಾರ್ಥಕ ಚಿಹ್ನೆ ಹುಟ್ಟು ಹಾಕುವಂತಿದೆ ʼʼಎಂದು ತಿಳಿಸಿದರು.

ವಂಶಪಾರಂಪರ್ಯ ಆಡಳಿತವನ್ನು ಸಮರ್ಥಿಸುವ ಪಕ್ಷಗಳು ಐಎನ್‍ಡಿಐಎ ಹೆಸರಿನಲ್ಲಿ ಒಗ್ಗೂಡಿವೆ. ಭಯೋತ್ಪಾದಕರಲ್ಲೂ ಮತಬ್ಯಾಂಕ್ ನೋಡುವುದು ಅವರ ನೀತಿ. ಕೋಮುವಾದಿ ಶಕ್ತಿಗಳ ಜೊತೆ ರಾಜಕೀಯ ಹೊಂದಾಣಿಕೆ ಅವರ ನೀತಿ. ಭಾರತ ಮತ್ತು ಭಾರತೀಯ ಸಂಸ್ಕೃತಿ ಬಗ್ಗೆ ಅವಹೇಳನ ಅವರ ನೀತಿ. ಸನಾತನ ಧರ್ಮದ ಬಗ್ಗೆ ಅವಹೇಳನ ಮಾತ್ರವಲ್ಲ; ಅದನ್ನು ಬೇರುಸಹಿತ ಕಿತ್ತುಹಾಕುತ್ತೇವೆ ಎಂಬುದು ಅವರ ನೀತಿ. ಭ್ರಷ್ಟಾಚಾರದಿಂದಲೇ ಕೂಡಿರುವುದು ಅವರ ನೀತಿ. ʼಇಂಡಿಯಾʼ ನೇತೃತ್ವ ಅದೊಂದು ಪ್ರಶ್ನಾರ್ಥಕ ಚಿಹ್ನೆಯಾಗಿದೆʼʼ ಎಂದು ಟೀಕಿಸಿದರು.

ʼನಾಯಕ ಯಾರೆಂಬ ಬಗ್ಗೆ ಅವರಲ್ಲಿ ಸ್ಪಷ್ಟತೆ ಇಲ್ಲ. ಬಹುಶಃ ಸಂಗೀತ ಕುರ್ಚಿ (ಮ್ಯೂಸಿಕಲ್ ಚೇರ್) ಮೂಲಕ ಅವರು ʼನಾಯಕನನ್ನು ಆಯ್ಕೆ ಮಾಡುವ ಲಕ್ಷಣಗಳು ಕಾಣುತ್ತಿವೆ. ಸಮರ್ಥ ಮತ್ತು ಎಲ್ಲರೂ ಒಪ್ಪಬಹುದಾದ ನಾಯಕ ಅವರಿಗೆ ಇಲ್ಲದ ಕಾರಣ ಮ್ಯೂಸಿಕಲ್ ಚೇರ್ ಮೂಲಕ ಯಾರಿಗೆ ಕುರ್ಚಿ ಒಲಿಯುತ್ತೋ ಅವರನ್ನು ನೇತಾರರಾಗಿ ಮಾಡಿಕೊಳ್ಳುವ ದುಸ್ಥಿತಿ ಅವರದು. ನಿಯತ್ತಿನ ಪ್ರಶ್ನೆ ಬಂದಾಗ ಯಾರಿಗೆ ಅವರ ನಿಯತ್ತು ಎಂಬುದು ಅನುಮಾನ ಹುಟ್ಟಿಸುತ್ತದೆʼʼ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X