Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಹಕಾರ ಸಂಘಗಳ ಸಾಲ ಮನ್ನಾಕ್ಕೆ ಅಗತ್ಯ...

ಸಹಕಾರ ಸಂಘಗಳ ಸಾಲ ಮನ್ನಾಕ್ಕೆ ಅಗತ್ಯ ಕ್ರಮ: ಸಚಿವ ಕೆ.ಎನ್. ರಾಜಣ್ಣ

ವಾರ್ತಾಭಾರತಿವಾರ್ತಾಭಾರತಿ16 July 2024 11:05 PM IST
share
ಸಹಕಾರ ಸಂಘಗಳ ಸಾಲ ಮನ್ನಾಕ್ಕೆ ಅಗತ್ಯ ಕ್ರಮ: ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: 2018ನೆ ಸಾಲಿನ 1 ಲಕ್ಷ ರೂ. ಸಾಲ ಮನ್ನಾ ಯೋಜನೆಯಡಿ 6,048 ರೈತರಿಗೆ 14.45 ಕೋಟಿ ರೂ.ಗಳ ಸಾಲ ಮನ್ನಾ ಮೊತ್ತದ ಬಿಡುಗಡೆ ಬಾಕಿ ಇದ್ದು ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಮಂಗಳವಾರ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಎಸ್. ರವಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಸಿ.ಸಿ. ಬ್ಯಾಂಕುಗಳ ಮೂಲಕ ಸಾಲ ನೀಡುವ ಸಹಕಾರ ಸಂಘಗಳಲ್ಲಿ 86,305 ರೈತ ಸದಸ್ಯರಿಗೆ 359.52 ಕೋಟಿ ರೂ.ಗಳ ಸಾಲ ಮನ್ನಾ ಮಾಡಲು ಅರ್ಹತೆಯನ್ನು ಗುರುತಿಸಿ ಹಸಿರು ಪಟ್ಟಿ ತಯಾರಿಸಲಾಗಿದೆ. ಈ ಪೈಕಿ 2018-19, 2019-20 ಮತ್ತು 2020-21ರಲ್ಲಿ 80,257 ರೈತರ 345.08 ಕೋಟಿ ರೂ.ಗಳ ಸಾಲ ಮನ್ನಾ ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

2017ನೆ ಸಾಲಿನ 50 ಸಾವಿರ ರೂ.ಗಳ ಸಾಲ ಮನ್ನಾ ಯೋಜನೆಯಡಿ ರಾಮನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಡಿ.ಸಿ.ಸಿ. ಬ್ಯಾಂಕ್ ಮೂಲಕ ಸಾಲ ನೀಡುವ ಸಹಕಾರ ಸಂಘಗಳ 86,703 ರೈತ ಸದಸ್ಯರಿಗೆ 360.86 ಕೋಟಿಗಳ ಸಾಲ ಮನ್ನಾ ಕ್ಲೇಂ ಮಾಡಲಾಗಿದೆ. 2023-24ನೆ ಸಾಲಿನಲ್ಲಿ ಮಾ.28ರಂದು 3,804 ರೈತರಿಗೆ 15.79 ಕೋಟಿ ರೂ.ಗಳ ಸಾಲ ಮನ್ನಾ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಹಾಲು ಉತ್ಪಾದಕರ ಸಂಘಗಳ ಪ್ರೋತ್ಸಾಹಕ್ಕೆ ಅಗತ್ಯ ಕ್ರಮ:

ಹಾಲು ಉತ್ಪಾದಕರ ಸಂಘಗಳ ಪ್ರೋತ್ಸಾಹಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಬಿಜೆಪಿ ಸದಸ್ಯ ಹಣಮಂತ್ ನಿರಾಣಿ ಕೇಳಿದ ಪ್ರಶ್ನೆಗೆ ಗುರುತಿನ ಪ್ರಶ್ನಗೆ ಉತ್ತರಿಸಿದ ಅವರು, ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ತಿಂಗಳು 15 ರೂ.ಗಳ ಪ್ರೋತ್ಸಾಹ ಧನ ಪಾವತಿಗೆ ಸಂಬಂಧಿಸಿದಂತೆ ಕ್ರೋಢೀಕೃತ ಮಾಹಿತಿಯನ್ನು ಪಡೆದು ಒಕ್ಕೂಟಗಳ ಇ ಸೈನ್ ಮಾಡಿ ಸರಕಾರಕ್ಕೆ ಸಲ್ಲಿಸಲಾಗುತ್ತದೆ. ಡಿಬಿಟಿ ಮುಖಾಂತರ ನೇರವಾಗಿ ಪಾವತಿಸಲಾಗುತ್ತಿದೆ ಎಂದರು.

ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ 3,06,826 ರೈತರಿಗೆ ಜೂನ್ 2024ರ ಅಂತ್ಯದವರೆಗೆ ಒಟ್ಟು ಪಾವತಿ ಮಾಡಲು ಬಾಕಿ ಇರುವ ಪ್ರೋತ್ಸಾಹಧನದ ಮೊತ್ತ 31.93 ಕೋಟಿ ರೂ.ಗಳನ್ನು ತಾಂತ್ರಿಕ ಅಡಚಣೆ ಹಾಗೂ ಅನುದಾನದ ಕೊರತೆಯಿಂದ ಬಾಕಿ ಉಳಿದಿದೆ. ಪ್ರೋತ್ಸಾಹಧನ ಪಾವತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

35.10 ಲಕ್ಷ ರೈತರಿಗೆ ಕೃಷಿ ಸಾಲ ವಿತರಿಸಲು ಗುರಿ

2024-25ನೆ ಸಾಲಿಗೆ 35.10 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂ.ಗಳ ಅಲ್ಪಾವಧಿ ಕೃಷಿ ಸಾಲ ಮತ್ತು 0.90 ಲಕ್ಷ ರೈತರಿಗೆ 2 ಸಾವಿರ ಕೋಟಿ ರೂ.ಗಳ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಕೃಷಿ ಸಾಲ ವಿತರಿಸುವ ಗುರಿ ನಿಗದಿಪಡಿಸಿದ್ದು, 2566.02 ಕೋಟಿ ರೂ.ಗಳ ಹೆಚ್ಚಿನ ಕೃಷಿ ಸಾಲ ವಿತರಿಸಲಾಗುವುದು ಎಂದು ಸಹಾಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ಕಾಂಗ್ರೆಸ್‍ನ ಸದಸ್ಯ ದಿನೇಶ್ ಗೂಳಿಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಾಥಮಿಕ ಪತ್ತಿನ ಸಹಕಾರ ಸಂಘ/ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2023-24ನೆ ಸಾಲಿನಲ್ಲಿ 29,26,910 ರೈತರಿಗೆ 22,982.10 ಕೋಟಿ ರೂ.ಗಳ ಬೆಳೆ ಸಾಲ ವಿತರಿಸಲಾಗಿದೆ ಎಂದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2024-25ನೆ ಸಾಲಿನಲ್ಲಿ 35.10 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 25 ಸಾವಿರ ಕೋಟಿ ರೂ.ಗಳ ಅಲ್ಪಾವಧಿ ಕೃಷಿ ಸಾಲ ಮತ್ತು ಪಶುಸಂಗೋಪನೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲು ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ/ಡಿ.ಸಿ.ಸಿ ಬ್ಯಾಂಕುಗಳ ಮೂಲಕ 2024ನೆ ಜು.6ರವರೆಗೆ 7,80,363 ರೈತರಿಗೆ 6799.17 ಕೋಟಿ ರೂ. ಗಳ ಬೆಳೆ ಸಾಲ ವಿತರಿಸಲಾಗಿದೆ. ಮೂರು ವರ್ಷಗಳಲ್ಲಿ ಸಾಲ ವಿತರಿಸಿದ ಮಾಹಿತಿ, ಡಿ.ಸಿ.ಸಿ ಬ್ಯಾಂಕುಗಳಲ್ಲಿರುವ ಬಂಡವಾಳ ಮತ್ತು ನಬಾರ್ಡ್‍ನ ಪುನರ್ಧನ ಆಧರಿಸಿ ಪ್ರತಿ ಜಿಲ್ಲೆಗೆ ಸರಾಸರಿ 1.13 ಲಕ್ಷ ರೈತರಿಗೆ 806 ಕೋಟಿ ರೂ.ಗಳ ಅಲ್ಪಾವಧಿ ಕೃಷಿ ಸಾಲ ವಿತರಿಸಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X