Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೆರೆ-ಬರ ಬಂದಾಗ ಬರುವುದಿಲ್ಲ, ಚುನಾವಣಾ...

ನೆರೆ-ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ : ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 April 2024 9:00 PM IST
share
ನೆರೆ-ಬರ ಬಂದಾಗ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ :  ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ‘ಪ್ರಧಾನಿ ಮೋದಿಯವರಿಗೆ ಕರ್ನಾಟಕಕ್ಕೆ ಸ್ವಾಗತ. ನೆರೆ ಬಂದಾಗ ಬರುವುದಿಲ್ಲ, ಬರ ಬಂದಾಗಲೂ ಬರುವುದಿಲ್ಲ, ಚುನಾವಣಾ ಪ್ರಚಾರಕ್ಕೆ ಬರುವುದನ್ನು ಮಾತ್ರ ತಪ್ಪಿಸುವುದಿಲ್ಲ. ಹೀಗಿದ್ದರೂ ನಿಮ್ಮ ಬರುವಿಕೆಗಾಗಿ ಆರೂವರೆ ಕೋಟಿ ಕನ್ನಡಿಗರು ಕಾತರದಿಂದ ಕಾಯುತ್ತಿದ್ದಾರೆ. ಅವರಲ್ಲಿ ಒಂದಷ್ಟು ಪ್ರಶ್ನೆಗಳಿವೆ. ಆ ಪ್ರಶ್ನೆಗಳಿಗೆ ನಾಳೆಯ ನಿಮ್ಮ ಭಾಷಣದಲ್ಲಿ ನೀವು ಉತ್ತರ ನೀಡಬೇಕೆಂದು ಅವರ ಒತ್ತಾಯವಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಶನಿವಾರ ಪ್ರಕಟಣೆ ನೀಡಿರುವ ಸಿದ್ದರಾಮಯ್ಯ, ‘ಮೋದಿಯವರು ಬರಗಾಲದ ಕಷ್ಟಗಳಿಗೆ ನೆರವಾಗುತ್ತಾರೆ, ತೆರಿಗೆಯಲ್ಲಿ ಹೆಚ್ಚಿನ ಪಾಲು ಕೊಡುತ್ತಾರೆ. ವಿಶೇಷ ನೆರವಿನ ಭರವಸೆಯನ್ನು ಈಡೇರಿಸುತ್ತಾರೆ ಎನ್ನುವ ಅವರ ನಿರೀಕ್ಷೆಯನ್ನು ನಿಜ ಮಾಡುತ್ತೀರಾ?. ಮೋದಿಯವರೇ ನಮ್ಮ ಕನ್ನಡಿಗ ಮತದಾರರು ನಿಮ್ಮ ಮೇಲೆ ಭರವಸೆ ಇಟ್ಟು ಮೊದಲ ಬಾರಿ 17, ಎರಡನೆ ಬಾರಿ 25 ಸಂಸದರನ್ನು ನಿಮ್ಮ ಪಕ್ಷದಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ನಿಮ್ಮನ್ನು ಪ್ರಧಾನಮಂತ್ರಿ ಮಾಡಿದರು.

ನಿಮ್ಮ ಸಾಧನೆ ಬಗ್ಗೆ 10 ನಿಮಿಷ ಮಾತನಾಡಿ: ನಿಮ್ಮ ಮೇಲೆ ಇಷ್ಟೊಂದು ಪ್ರೀತಿ-ಅಭಿಮಾನ ತೋರಿದ ನಮ್ಮ ಮತದಾರರಿಗೆ 10 ವರ್ಷಗಳಲ್ಲಿ ನೀವು ಮಾಡಿದ ಸಾಧನೆಯನ್ನು ತಿಳಿಸುವುದು ಬೇಡವೇ? ಈ ಬಾರಿಯಾದರೂ ಅದೇ ಹಳೆಯ ಹಿಂದೂ-ಮುಸ್ಲಿಮ್, ಭಾರತ-ಪಾಕಿಸ್ತಾನ, ಮಂದಿರ-ಮಸೀದಿ ಬಗೆಗಿನ ಟೇಪ್ ರೆಕಾರ್ಡರ್ ಪ್ಲೇ ಮಾಡುವುದನ್ನು ಕಡಿಮೆ ಮಾಡಿ ನಿಮ್ಮ 10 ವರ್ಷಗಳ ಸಾಧನೆಯ ಬಗ್ಗೆ ಹತ್ತು ನಿಮಿಷ ಮಾತನಾಡುತ್ತೀರಾ?. ನಿರುದ್ಯೋಗ, ಬೆಲೆ ಏರಿಕೆ ಮತ್ತು ಭ್ರಷ್ಟಾಚಾರಗಳಿಗೆ ಸಂಬಂಧಿಸಿದಂತೆ ನಿಮ್ಮ ಸರಕಾರದ ಮೇಲಿನ ಆರೋಪಗಳಿಗೆ ಉತ್ತರ ನೀಡುತ್ತೀರಾ?’ ಎಂದು ಅವರು ಪ್ರಶ್ನಿಸಿದ್ದಾರೆ.

ಚುನಾವಣಾ ಕಾಲದಲ್ಲಿ ರಾಜಕೀಯ ಪಕ್ಷಗಳು ಬಿಡುಗಡೆಗೊಳಿಸುವ ಪ್ರಣಾಳಿಕೆ ಎನ್ನುವುದು ಕೇವಲ ಭರವಸೆಗಳ ಕಂತೆ ಅಲ್ಲ, ಅದು ಮತದಾರನಿಗೆ ಕೊಡುವ ಗ್ಯಾರಂಟಿ. ಚುನಾವಣೆಯಲ್ಲಿ ಆಯ್ಕೆಯಾದ ಪಕ್ಷ 5 ವರ್ಷಗಳ ನಂತರ ಪ್ರಣಾಳಿಕೆಯಲ್ಲಿ ಈಡೇರಿಸಲಾದ ಭರವಸೆಯ ಲೆಕ್ಕವನ್ನು ಮತದಾರರಿಗೆ ಕೊಡಬೇಕು. ಈ ಕೆಲಸವನ್ನು ಒಬ್ಬ ಮುಖ್ಯಮಂತ್ರಿಯಾಗಿ ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡುತ್ತಾ ಬಂದ ನನಗೆ ನಿಮ್ಮ ವೈಫಲ್ಯವನ್ನು ಪ್ರಶ್ನಿಸುವ ನೈತಿಕ ಅಧಿಕಾರ ಇದೆ ಎಂದು ತಿಳಿದುಕೊಂಡಿದ್ದೇನೆ. ನೀವು ಹಿಂದಿನ ಚುನಾವಣೆಯ ಪ್ರಣಾಳಿಕೆಯ ಲೆಕ್ಕವನ್ನು ಕೊಟ್ಟಿಲ್ಲ, ಈ ಚುನಾವಣೆಯ ಪ್ರಣಾಳಿಕೆಯನ್ನು ಇನ್ನೂ ಬಿಡುಗಡೆಗೊಳಿಸಿಲ್ಲ. ಇದು ಮತದಾರರ ಬಗೆಗಿನ ನಿರ್ಲಕ್ಷ್ಯ ಮಾತ್ರವಲ್ಲ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಬಗೆಗಿನ ತಿರಸ್ಕಾರವೂ ಹೌದಲ್ಲವೇ?’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬರ ಪರಿಹಾರ ಮತ್ತು ತೆರಿಗೆ ಹಂಚಿಕೆಯಲ್ಲಿ ಆಗಿರುವ ಅನ್ಯಾಯಕ್ಕೆ ಸಂಬಂಧಿಸಿದಂತೆ ನಿಮ್ಮದೇ ಸರಕಾರದ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರ್ಲಜ್ಜತೆಯಿಂದ ಸುಳ್ಳುಗಳನ್ನು ಹೇಳಿಹೋಗಿದ್ದಾರೆ. ಕಳೆದ ವರ್ಷದ ಡಿಸೆಂಬರ್ 19ರಂದು ನಾನೇ ಖುದ್ದಾಗಿ ನಿಮ್ಮಲ್ಲಿಗೆ ಬಂದು ಬರಪರಿಹಾರ ಬಿಡುಗಡೆಗೊಳಿಸುವಂತೆ ಮನವಿ ಮಾಡಿದ್ದೆ. ಡಿಸೆಂಬರ್ 23ಕ್ಕೆ ತಮ್ಮ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿಯ ಸಭೆ ನಡೆಸಿ ತೀರ್ಮಾನಿಸುವುದಾಗಿ ಗೃಹ ಸಚಿವರೇ ಆಶ್ವಾಸನೆ ನೀಡಿದ್ದರು. ಹೀಗಿದ್ದರೂ ಬರ ಪರಿಹಾರ ಕೋರಿ ವಿಳಂಬವಾಗಿ ಮನವಿ ಮಾಡಿದ್ದೆವು ಎಂದು ಹೇಳುವುದು ಸುಳ್ಳಲ್ಲವೇ ಪ್ರಧಾನಿಗಳೇ?’ ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಕರ್ನಾಟಕ ಸರಕಾರ ಬರ ಪರಿಹಾರ ಕೋರಿ ವಿಳಂಬವಾಗಿ ಮನವಿ ಸಲ್ಲಿಸಿರುವ ಕಾರಣದಿಂದಾಗಿ ಚುನಾವಣಾ ಆಯೋಗ ಪರಿಹಾರ ಬಿಡುಗಡೆಗೆ ಅನುಮತಿ ನೀಡಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಬರಪರಿಹಾರ ಕೋರಿ ನಮ್ಮ ಸರಕಾರ ಕೇಂದ್ರಕ್ಕೆ ಮನವಿ ಪತ್ರ ಸಲ್ಲಿಸಿದ್ದು ಕಳೆದ ವರ್ಷದ ಸೆಪ್ಟೆಂಬರ್ 23ರಂದು, ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಮಾರ್ಚ್ 16ರಂದು. ರಾಜ್ಯ ಸರಕಾರದ ಒಂದು ಮನವಿ ಪತ್ರವನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲು ಐದು ತಿಂಗಳು ಬೇಕೇ ಪ್ರಧಾನಿಗಳೇ? ಇದೇನಾ ನೀವು ಹೇಳುವ "Less Government , More Governance?" ಎಂದು ಅವರು ಲೇವಡಿ ಮಾಡಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ನಾವು ದನಿ ಎತ್ತಿದರೆ ನಮ್ಮದು ದೇಶದ್ರೋಹ ಎನ್ನುತ್ತೀರಿ? ಹಾಗಿದ್ದರೆ ಇದೇ ತೆರಿಗೆ ಹಂಚಿಕೆಯಲ್ಲಿನ ತಾರತಮ್ಯದ ಬಗ್ಗೆ ಗುಜರಾತ್ ಸಿಎಂ ಆಗಿ ಮೊದಲು ದನಿ ಎತ್ತಿದ್ದ ನೀವೂ ದೇಶದ್ರೋಹಿ ಅಲ್ಲವೇ? ಕೇಂದ್ರಕ್ಕೆ ನಾವು 60ಸಾವಿರ ಕೋಟಿ ರೂ.ಕೊಡುತ್ತೇವೆ ಅದರಲ್ಲಿ ಶೇ.2.5ರಷ್ಟು ಮಾತ್ರ ವಾಪಸು ನೀಡಲಾಗುತ್ತದೆ. ಗುಜರಾತ್ ಭಿಕ್ಷುಕ ರಾಜ್ಯವೇ? ಎಂದು ಮುಲಾಜಿಲ್ಲದೆ ಪ್ರಶ್ನಿಸಿದ್ದವರು ನೀವೇ ಅಲ್ಲವೇ?’ ಎಂದು ಅವರು ಟೀಕಿಸಿದ್ದಾರೆ.

ಜಾತಿ, ಧರ್ಮ, ಭಾಷೆ, ಪ್ರದೇಶವನ್ನು ಮೀರಿದ್ದು ಪ್ರಧಾನಿ ಪಟ್ಟ. ಆದರೆ ನೀವು ಕನ್ನಡ-ಕನ್ನಡಿಗ-ಕರ್ನಾಟಕದ ವಿರೋಧಿ ಎನ್ನುವ ಅಭಿಪ್ರಾಯ ಕನ್ನಡಿಗರಲ್ಲಿದ್ದರೆ ಅದಕ್ಕೆ ನೀವೇ ಹೊಣೆ ಅಲ್ಲವೇ?. ಕರ್ನಾಟಕದ ನೆಲ, ಜಲ, ಭಾಷೆ ಬಗ್ಗೆ ನಾವು ಮಾತನಾಡಿದರೆ ದೇಶದ್ರೋಹ ಎನ್ನುತ್ತೀರಿ. ಕನ್ನಡದ ಮೇಲೆ ಹಿಂದಿ ಹೇರುವ ಹುನ್ನಾರವನ್ನು ಪ್ರತಿಭಟಿಸಿದರೆ, ಕನ್ನಡಕ್ಕೊಂದು ಧ್ವಜ ಕೇಳಿದರೆ, ನಮ್ಮ ರಾಜ್ಯದ ಮಕ್ಕಳಿಗೆ ಮಾತೃಭಾಷೆಯಲ್ಲಿಯೇ ಕೇಂದ್ರ ಸರಕಾರದ ಸ್ವಾಮ್ಯದ ಸಂಸ್ಥೆಗಳ ನೇಮಕಾತಿಯ ಪರೀಕ್ಷೆ ಬರೆಯಲು ಅವಕಾಶ ಕೇಳಿದರೆ ದೇಶದ್ರೋಹ ಎನ್ನುತ್ತೀರಿ. ವಿಶ್ವಗುರು ಎಂದು ಕರೆಸಿಕೊಳ್ಳುವ ನೀವು ವಿಶ್ವಮಾನವರಾಗುವುದು ಯಾವಾಗ?’ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X