Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಗರಣಗಳ ಕುರಿತು ಮೂರು ದಿನಗಳಿಂದ...

ಹಗರಣಗಳ ಕುರಿತು ಮೂರು ದಿನಗಳಿಂದ ಸದನದಲ್ಲಿ ಕಾವೇರಿದ ಚರ್ಚೆ, ವಾಗ್ವಾದ..!

ವಾರ್ತಾಭಾರತಿವಾರ್ತಾಭಾರತಿ18 July 2024 7:23 PM IST
share
ಹಗರಣಗಳ ಕುರಿತು ಮೂರು ದಿನಗಳಿಂದ ಸದನದಲ್ಲಿ ಕಾವೇರಿದ ಚರ್ಚೆ, ವಾಗ್ವಾದ..!

ಬೆಂಗಳೂರು : ಮೂರು ದಿನಗಳಿಂದ ಹಗರಣಗಳ ಕುರಿತು ಪದೇ ಪದೇ ಆಡಳಿತ, ಪ್ರತಿಪಕ್ಷಗಳ ನಡುವೆ ವಿಧಾನಸಭೆಯಲ್ಲಿ ಕಾವೇರಿದ ಚರ್ಚೆ, ವಾಗ್ವಾದ ಮುಂದುವರೆದಿದೆ.

ಗುರುವಾರ ವಿಧಾನಸಭೆ ಕಲಾಪದಲ್ಲಿ ಪ್ರತಿಪಕ್ಷದ ಸದಸ್ಯರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಇತರರು ಚರ್ಚೆಯಲ್ಲಿ ಭಾಗಿಯಾಗಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಪಾದಿಸಿ ಆಕ್ರೋಶ ಹೊರಹಾಕಿದರೆ, ಇದಕ್ಕೆ ಪ್ರತಿಯಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಮಹದೇವಪ್ಪ, ದಿನೇಶ್ ಗುಂಡೂರಾವ್, ಸದಸ್ಯರಾದ ನರೇಂದ್ರಸ್ವಾಮಿ, ಪ್ರಕಾಶ್ ಕೋಳಿವಾಡ ಸೇರಿದಂತೆ ಪ್ರಮುಖರು ವಿಪಕ್ಷ ಸದಸ್ಯರ ಟೀಕೆಗಳಿಗೆ ಉತ್ತರಿಸಿ ತಿರುಗೇಟು ನೀಡಿದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಬಿಜೆಪಿ ಸದಸ್ಯರು ಶೇಕಡ ನೂರಷ್ಟು ಕಮಿಷನ್ ಆರೋಪ ಮಾಡಿದರು. ಇದಕ್ಕೆ ಕೆಂಡಾಮಂಡಲವಾದ ಮುಖ್ಯಮಂತ್ರಿ ತಮ್ಮ ಅವಧಿಯ ಹಗರಣ ಹೊರಬರಲಿದೆ ಎಂದು ಎಚ್ಚರಿಸಿದಾಗ ಸದನಲ್ಲಿ ಗದ್ದಲ ಕಂಡಿತು.

ಇನ್ನೊಂದೆಡೆ, ದಲಿತ ಪದ ಬಳಕೆ ಮಾಡುವಂತಿಲ್ಲ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಎಂದು ಉಲ್ಲೇಖಿಸಿ ಎಂದು ಆಡಳಿತರೂಢ ಸದಸ್ಯರು ಸಲಹೆ ನೀಡಿದರು. ಇದಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಶ್ವತ್ ನಾರಾಯಣ್, ಸುರೇಶ್ ಕುಮಾರ್ ಮತ್ತಿತರರು ಎದ್ದು ನಿಂತು ಅಹಿಂದ ಬಳಕೆ ಮಾಡಿದ್ದು ನೀವೆ ಅಲ್ಲವೇ ಎಂದು ಉತ್ತರಿಸಿದರು.

ಸಿದ್ದರಾಮಯ್ಯ ಪ್ರಸ್ತಾಪಿಸಿ, ಬಿಜೆಪಿಯವರು ಪದೇ ಪದೇ ಇದೇ ಪದ ಬಳಕೆ ಮಾಡುತ್ತಿರುವುದನ್ನು ನೋಡಿದರೆ ಇವರಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ ಎಂದರು. ಆಗ ಅಶ್ವಥ್ ನಾರಾಯಣ್, ಕಾಂಗ್ರೆಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದರು.

ಇದಕ್ಕೆ ಮತ್ತೆ ಸಿದ್ದರಾಮಯ್ಯ, ನಿಮ್ಮ ಹಗರಣಗಳು ಏನೇನಿವೆ ಎಂದು ತೆಗೆಯಬೇಕಾ? ಎಂದು ಹೇಳಿದಾಗ, ಅಶ್ವತ್ ನಾರಾಯಣ್ ಏರು ಧ್ವನಿಯಲ್ಲಿ ‘ಪೇ ಸಿಎಂ’, ಶೇ.100ರಷ್ಟು ಸಿಎಂ ಏನು ಬೆದರಿಕೆ ಹಾಕುತ್ತೀರಾ ತೆಗೆಯಿರಿ ಎಂದರು.

ಇದಕ್ಕೆ ಸಿಟ್ಟಾಗಿ ಉತ್ತರಿಸಿದ ಸಿದ್ದರಾಮಯ್ಯ, ಶೇ.40ರಷ್ಟು ಕಮಿಷನ್ ಪಡೆದ ನಿಮಿಂದ ನಾವು ಭ್ರಷ್ಟಚಾರದ ವಿರುದ್ಧ ಪಾಠ ಕಲಿಯಬೇಕಾ? ಇವರ ಭ್ರಷ್ಟಚಾರ ಬಯಲಾಗಿದೆ. ಇವರಿಗೆ ನಾಚಿಕೆಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಆಡಳಿತ ಮತ್ತು ಪ್ರತಿಪಕ್ಷದ ಶಾಸಕರ ನಡುವೆ ಏರಿದ ಧ್ವನಿಯಲ್ಲಿ ಕಾವೇರಿದ ಚರ್ಚೆ, ಗದ್ದಲ ಜರುಗಿತು.

ಆನಂತರವೂ, ಸಿದ್ದರಾಮಯ್ಯ ಮಾತನಾಡಿ, ಕೆಪಿಎಸ್ಸಿ ನೇಮಕಾತಿಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತಿದೆ. ಭೋವಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಟ್ರಕ್ ಟರ್ಮಿನಲ್‍ನಲ್ಲಿ ನಡೆದಿರುವುದರ ಬಗ್ಗೆ ಬಿಜೆಪಿಯವರು ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದಕ್ಕೂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿ, ಈ ಸರಕಾರಕ್ಕೆ ಲೂಟಿ ಹೊಡೆಯುವುದೇ ಕೆಲಸವಾಗಿದೆ ಎಂದು ಆಪಾದಿಸಿದರು.

ನಾಚಿಕೆ ಇಲ್ಲವೇ: ಇದೇ ವೇಳೆ ಅಶ್ವಥ್ ನಾರಾಯಣ್, ಸಚಿವ ದಿನೇಶ್ ಗುಂಡುರಾವ್ ನಡುವೆ ಮಾತಿನ ಚಕಮಕಿ ನಡೆಯಿತು. ಪರಸ್ಪರ ನಾಚಿಕೆಯಾಗುವುದಿಲ್ಲವೇ ಎಂದು ಟೀಕಿಸಿಕೊಂಡರು. ಆಗ ಬಿಜೆಪಿಯ ಕೆಲ ಶಾಸಕರು ಹದ್ದು ಮೀರಿದ ವರ್ತನೆ ಪ್ರದರ್ಶಿಸುತ್ತಿದ್ದು, ಈ ಕೂಡಲೇ ಅವರನ್ನು ಸದನದಿಂದ ಅಮಾನತು ಮಾಡಿ ಎಂದು ಆಡಳಿತರೂಢ ಸದಸ್ಯರು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X